Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:12 - ಕನ್ನಡ ಸತ್ಯವೇದವು J.V. (BSI)

12 ಅವನು ಎಷ್ಟು ದಿನಗಳವರೆಗೆ ತನನ್ನು ಪ್ರತಿಷ್ಠಿಸಿಕೊಂಡಿದ್ದನೋ ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು; ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರುಷದ ಕುರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದದರಿಂದ ಕಳೆದುಹೋದ ದಿನಗಳು ವ್ಯರ್ಥವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನು ಎಷ್ಠು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದನೋ ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಸರ್ವೇಶ್ವರನಿಗೆ ಪ್ರತಿಷ್ಠಿಸಿಕೊಳ್ಳಬೇಕು. ಅದಲ್ಲದೆ ಪ್ರಾಯಶ್ಚಿತ್ತ ಬಲಿಯಾಗಿ ಒಂದು ವರ್ಷದ ಕುರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ವ್ರತಕ್ಕೆ ವಿಘ್ನಪ್ರಾಪ್ತವಾದ್ದರಿಂದ ಕಳೆದುಹೋದ ದಿನಗಳು ವ್ಯರ್ಥವಾದುವೆಂದು ಪರಿಗಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವನು ಮತ್ತೊಮ್ಮೆ ನಿರ್ದಿಷ್ಟ ಕಾಲದವರೆಗೆ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕೆಂಬುದೇ ಇದರರ್ಥ. ಅವನು ಒಂದು ವರ್ಷದ ಕುರಿಮರಿಯನ್ನು ತಂದು ಅದನ್ನು ದೋಷಪರಿಹಾರಕ ಯಜ್ಞಕ್ಕಾಗಿ ಕೊಡಬೇಕು. ಶವವು ಅವನನ್ನು ಅಶುದ್ಧನನ್ನಾಗಿ ಮಾಡಿದ್ದರಿಂದ ಮೊದಲಿನ ದಿನಗಳು ಲೆಕ್ಕಿಸಲ್ಪಡುವುದಿಲ್ಲ. ಅವನು ಮತ್ತೊಮ್ಮೆ ಪ್ರತಿಷ್ಠೆಯನ್ನು ಹೊಸದಾಗಿ ಆರಂಭಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಎಷ್ಟು ದಿನಗಳವರೆಗೆ ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದಾರೋ, ಅಷ್ಟು ದಿನಗಳವರೆಗೆ ಹೊಸದಾಗಿ ತಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತ ಬಲಿಯಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಅವರ ಸಮರ್ಪಣೆಯ ಅವಧಿಯಲ್ಲಿ ಅವರು ಅಶುದ್ಧವಾದುದರಿಂದ ಮೊದಲಿನ ದಿವಸಗಳು ವ್ಯರ್ಥವಾದುವೆಂದು ಪರಿಗಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:12
12 ತಿಳಿವುಗಳ ಹೋಲಿಕೆ  

ಮತ್ತು ದೋಷದ ಪ್ರಾಯಶ್ಚಿತ್ತಕ್ಕಾಗಿ ಹೆಣ್ಣು ಕುರಿಯನ್ನಾಗಲಿ ಹೆಣ್ಣು ಮೇಕೆಯನ್ನಾಗಲಿ ಯೆಹೋವನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರಮಾಡುವನು.


ನಾವು ಪ್ರಯಾಸಪಟ್ಟು ಮಾಡಿದವುಗಳನ್ನು ನೀವು ಕಳಕೊಳ್ಳದೆ ಪೂರ್ಣಫಲವನ್ನು ಹೊಂದುವಂತೆ ಜಾಗರೂಕರಾಗಿರಿ.


ಯಾಕಂದರೆ ಯಾವನಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.


ಆದರೆ ಕಡೇವರೆಗೂ ತಾಳುವವನು ರಕ್ಷಣೆಹೊಂದುವನು.


ಆದರೆ ಯೇಸು ಅವನಿಗೆ - ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ಧರ್ಮವನ್ನು ನೆರವೇರಿಸತಕ್ಕದ್ದಾಗಿದೆ ಎಂದು ಹೇಳಿದಾಗ ಅವನು ಒಪ್ಪಿಕೊಂಡನು.


ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ದುಷ್ಟನು ನಡಿಸುವ ದುರಾಚಾರಗಳನ್ನೆಲ್ಲಾ ನಡಿಸಿದರೆ ಅವನು ಬಾಳುವನೋ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.


ಯಾಜಕನು ಪ್ರಾಯಶ್ಚಿತ್ತಯಜ್ಞದ ಕುರಿಯನ್ನೂ ಆ ಸೇರು ಎಣ್ಣೆಯನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.


ಆ ಮರಿಯು ಪೂರ್ಣಾಂಗವಾದ ಒಂದು ವರುಷದ ಗಂಡಾಗಿರಬೇಕು; ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ತೆಗೆದುಕೊಳ್ಳಬಹುದು.


ಕುರಿಯನ್ನು ಕೊಡುವದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು ಸರ್ವಾಂಗಹೋಮವಾಗಿ ಒಂದನ್ನೂ ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನೂ ಯೆಹೋವನಿಗೆ ಸಮರ್ಪಿಸಬೇಕು.


ಯಾಜಕನು ದೋಷಪರಿಹಾರಯಜ್ಞವಾಗಿ ಒಂದನ್ನೂ ಸರ್ವಾಂಗಹೋಮವಾಗಿ ಇನ್ನೊಂದನ್ನೂ ಸಮರ್ಪಿಸಿ ಶವಸೋಂಕಿದವನಿಗೋಸ್ಕರ ದೋಷಪರಿಹಾರಮಾಡಿ ಅವನ ತಲೆಯ ಕೂದಲನ್ನು ಆ ದಿನದಿಂದ ಪವಿತ್ರವೆಂದು ನಿರ್ಣಯಿಸಬೇಕು.


ನಾಜೀರನು ತನ್ನ ವ್ರತದಿನಗಳು ಮುಗಿದಾಗ ನಡೆಯಬೇಕಾದ ಕ್ರಮ. ಅವನು ದೇವದರ್ಶನದ ಗುಡಾರದ ಬಾಗಲಿಗೆ ಬಂದು ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವವಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು