Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:20 - ಕನ್ನಡ ಸತ್ಯವೇದವು J.V. (BSI)

20 ಇದು ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ತೊಡೆಯಂತೆಯೂ ಯಾಜಕನಿಗೆ ಸಲ್ಲಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದು ನೈವೇದ್ಯವಾಗಿ ಆರತಿಯೆತ್ತುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಬೇಕು. ಇದಾದ ನಂತರ ನಾಜೀರ ವ್ರತಸ್ಥನು ದ್ರಾಕ್ಷಾರಸವನ್ನು ಪಾನಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೈವೇದ್ಯವಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ವಿಶೇಷ ಕಾಣಿಕೆಯಾಗಿ ನಿವಾಳಿಸಬೇಕು. ಇವುಗಳು ಪವಿತ್ರವಾಗಿದ್ದು ಯಾಜಕರ ಪಾಲಾಗುತ್ತವೆ. ಅಲ್ಲದೆ ಮೀಸಲಾಗಿಟ್ಟಿರುವ ನಿವಾಳಿಸಲ್ಪಟ್ಟ ಕಾಣಿಕೆಯ ಎದೆಯ ಭಾಗ ಮತ್ತು ತೊಡೆಯ ಭಾಗ ಸಹ ಯಾಜಕನ ಭಾಗವಾಗಿರುತ್ತದೆ. ಇದರ ನಂತರ ನಾಜೀರನು ದ್ರಾಕ್ಷಾರಸವನ್ನು ಕುಡಿಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸುವ ಅರ್ಪಣೆಗಾಗಿ ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಸಂಗಡ ಅದು ಯಾಜಕನಿಗೆ ಪರಿಶುದ್ಧವಾಗಿದೆ. ಆಮೇಲೆ ನಾಜೀರರು ದ್ರಾಕ್ಷಾರಸವನ್ನು ಕುಡಿಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:20
24 ತಿಳಿವುಗಳ ಹೋಲಿಕೆ  

ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು; ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ; ದೇವರು ನಿನ್ನ ನಡತೆಗೆ ಈಗ ಮೆಚ್ಚಿದನಷ್ಟೆ.


ಆಗ ಯಾಜಕನು ಸ್ತ್ರೀಯ ಕೈಯಿಂದ ವ್ಯಭಿಚಾರ ಸಂಶಯ ವಿಷಯವಾದ ಆ ಹಿಟ್ಟನ್ನು ತೆಗೆದುಕೊಂಡು ಯೆಹೋವನ ಮುಂದೆ ನೈವೇದ್ಯವಾಗಿ ನಿವಾಳಿಸಿ ಯಜ್ಞವೇದಿಯ ಹತ್ತಿರ ತರಬೇಕು.


ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ - ತೀರಿತು ಎಂದು ಹೇಳಿ ತಲೇಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.


ನಿಮಗೆ ಸತ್ಯವಾಗಿ ಹೇಳುತ್ತೇನೆ, ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವದೇ ಇಲ್ಲ ಅಂದನು.


ನಾನು ನನ್ನ ತಂದೆಯ ರಾಜ್ಯದಲ್ಲಿ ದ್ರಾಕ್ಷಾರಸವನ್ನು ನಿಮ್ಮ ಸಂಗಡ ಹೊಸದಾಗಿ ಕುಡಿಯುವ ದಿನದವರೆಗೂ ಇನ್ನು ಕುಡಿಯುವದೇ ಇಲ್ಲ ಎಂದು ನಿಮಗೆ ಹೇಳುತ್ತೇನೆ ಅಂದನು.


ಎಫ್ರಾಯೀಮ್ಯರು ಶೂರನಂತಿರುವರು, ದ್ರಾಕ್ಷಾರಸಕುಡಿದಂತೆ ಅವರ ಮನಸ್ಸು ಉತ್ಸಾಹಗೊಳ್ಳುವದು; ಅವರ ಸಂತಾನದವರು ಇದನ್ನು ನೋಡಿ ಸಂತೋಷಪಡುವರು, ಅವರ ಹೃದಯವು ಯೆಹೋವನಲ್ಲಿ ಆನಂದಿಸುವದು.


ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವದು.


ಸೇನಾಧೀಶ್ವರ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು [ಶತ್ರುಗಳನ್ನು] ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; [ರಕ್ತವನ್ನು] ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ ಯಜ್ಞವೇದಿಯ ಮೂಲೆಗಳ ಹಾಗೂ ರಕ್ತಪೂರ್ಣರಾಗಿರುವರು.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ಇದಲ್ಲದೆ ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲಜನಾಂಗಗಳಿಗೂ ಸಾರವತ್ತಾದ ಮೃಷ್ಟಾನ್ನದಿಂದಲೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಅಣಿಮಾಡುವನು.


ಅವುಗಳ ಮಾಂಸವು [ಸಮಾಧಾನಯಜ್ಞಗಳಲ್ಲಿ] ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ ಬಲದೊಡೆಯಂತೆಯೂ ನಿನಗೇ ಸಲ್ಲಬೇಕು.


ಸಬ್ಬತ್‍ದಿನದ ಮಾರಣೆಯ ದಿನದಲ್ಲಿಯೇ ಅದನ್ನು ನಿವಾಳಿಸಬೇಕು.


ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗೆಲ್ಲಾ ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕಾದ ಆ ತೊಡೆಯನ್ನೂ ನೈವೇದ್ಯವಾಗಿ ನಿವಾಳಿಸಬೇಕಾದ ಆ ಎದೆಯ ಭಾಗವನ್ನೂ ಯೆಹೋವನ ಸನ್ನಿಧಿಯಲ್ಲಿ ತರಬೇಕು. ಯೆಹೋವನು ಆಜ್ಞಾಪಿಸಿದಂತೆ ಅವು ನಿನಗೂ ನಿನ್ನ ವಂಶದವರಿಗೂ ಸಲ್ಲತಕ್ಕದ್ದು; ಇದು ಶಾಶ್ವತನಿಯಮ ಎಂದು ಹೇಳಿದನು.


ಮೋಶೆಯು ಆಜ್ಞಾಪಿಸಿದಂತೆ ಆರೋನನು ಅವುಗಳ ಎದೆಯ ಭಾಗಗಳನ್ನೂ ಬಲದೊಡೆಗಳನ್ನೂ ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.


ಇಸ್ರಾಯೇಲ್ಯರು ಸಮಾಧಾನಯಜ್ಞಪಶುವಿನ ಮಾಂಸದಲ್ಲಿ ನೈವೇದ್ಯರೂಪವಾಗಿ ನಿವಾಳಿಸುವ ಎದೆಯ ಭಾಗವನ್ನೂ ಯಾಜಕನಿಗೋಸ್ಕರ ಪ್ರತ್ಯೇಕಿಸುವ ತೊಡೆಯನ್ನೂ ನಾನು ತೆಗೆದುಕೊಂಡು ಮಹಾಯಾಜಕನಾದ ಆರೋನನಿಗೂ ಅವನ ವಂಶದವರಿಗೂ ಕೊಟ್ಟು ಇವು ಇಸ್ರಾಯೇಲ್ಯರಿಂದ ಯಾಜಕರಿಗೆ ಯಾವಾಗಲೂ ಸಲ್ಲಬೇಕೆಂದು ಶಾಶ್ವತನಿಯಮ ಮಾಡಿದ್ದೇನೆ.


ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು; ಎದೆಯ ಭಾಗವು ಆರೋನನಿಗೂ ಅವನ ವಂಶದವರಿಗೂ ಆಗಬೇಕು.


ಯೆಹೋವನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದದ್ದನ್ನು ಅಂದರೆ ಪಶುವಿನ ಕೊಬ್ಬನ್ನು ತನ್ನ ಕೈಯಿಂದಲೇ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನೂ ನೈವೇದ್ಯರೂಪವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸುವದಕ್ಕಾಗಿ ತಂದು ಸಮರ್ಪಿಸಬೇಕು.


ನೀವು ಸಮಾಧಾನಯಜ್ಞದ್ರವ್ಯಗಳಲ್ಲಿ ಬಲದೊಡೆಯನ್ನು ಯಾಜಕನಿಗೋಸ್ಕರ ಪ್ರತ್ಯೇಕಿಸಿಕೊಡಬೇಕು.


ಇದೇ ನಾಜೀರರ ವ್ರತವಿಧಿ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತ್ಯನುಸಾರ ಹೆಚ್ಚಾಗಿಯೂ ಕೊಡಬಹುದು; ಆದರೆ ತಾವು ಕೊಡುತ್ತೇವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು