Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:23 - ಕನ್ನಡ ಸತ್ಯವೇದವು J.V. (BSI)

23 ನೀನು ಆರೋನನಿಗೂ ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು - ನೀವು ಇಸ್ರಾಯೇಲ್ಯರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಹೀಗೆ ಆಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ”ನೀನು ಆರೋನನಿಗೂ ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು: ‘ನೀವು ಇಸ್ರಯೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಹೇಳಬೇಕು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ನೀನು ಆರೋನನಿಗೂ ಅವನ ಪುತ್ರರಿಗೂ ಹೀಗೆ ಆಜ್ಞಾಪಿಸು: ನೀವು ಇಸ್ರೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ನೀನು ಆರೋನನಿಗೆ ಮತ್ತು ಅವನ ಪುತ್ರರಿಗೆ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:23
27 ತಿಳಿವುಗಳ ಹೋಲಿಕೆ  

ಅಮ್ರಾಮನ ಮಕ್ಕಳು - ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾ ಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವದಕ್ಕೆ ಪ್ರತ್ಯೇಕಿಸಲ್ಪಟ್ಟರು. ಇವರು ಯೆಹೋವನ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ ಸೇವಿಸುವವರೂ ಆತನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರತಕ್ಕದ್ದು.


ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರವಿರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಆದುಕೊಂಡಿದ್ದಾನಲ್ಲ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.


ಈ ಮೆಲ್ಕಿಜೆದೇಕನು ಸಾಲೇವಿುನ ಅರಸನೂ ಪರಾತ್ಪರನಾದ ದೇವರ ಯಾಜಕನೂ ಆಗಿದ್ದನು; ರಾಜರನ್ನು ಹೊಡೆದು ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು;


ಆ ಕಾಲದಲ್ಲಿ ಅವನು ಅವರನ್ನು ಆಶೀರ್ವದಿಸಿ - ಇಸ್ರಾಯೇಲ್ಯರು ಯಾರನ್ನಾದರೂ ಆಶೀರ್ವದಿಸುವಾಗ - ಎಫ್ರಾಯೀಮನಿಗೂ ಮನಸ್ಸೆಗೂ ಉಂಟಾದ ಸಂತತಿಯಂತೆ ದೇವರು ನಿನಗೂ ಸಂತಾನವನ್ನು ಅನುಗ್ರಹಿಸಲಿ ಎಂದು ನಿಮ್ಮನ್ನು ದೃಷ್ಟಾಂತಮಾಡಿ ಹೇಳುವರು ಅಂದನು. ಹೀಗೆ ಹೇಳಿದ್ದರಿಂದ ಎಫ್ರಾಯೀಮನನ್ನು ಮನಸ್ಸೆಗೆ ಮುಂದಾಗಿ ಇಟ್ಟನು.


ತಂದೆಯಾದ ದೇವರಿಂದಲೂ ಆ ತಂದೆಯ ಮಗನಾದ ಯೇಸು ಕ್ರಿಸ್ತನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಸತ್ಯಪೂರ್ವಕವಾಗಿಯೂ ಪ್ರೀತಿಪೂರ್ವಕವಾಗಿಯೂ ನಮ್ಮೊಂದಿಗಿರುವವು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.


ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು ಯಾಕೋಬನು ಫರೋಹನನ್ನು ಆಶೀರ್ವದಿಸಿದನು.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ.


ಅವರೆಲ್ಲರಿಗೆ ಬರೆಯುವದೇನಂದರೆ - ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವದೇನಂದರೆ - ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಎಲ್ಲಾ ಇಸ್ರಾಯೇಲ್ಯರು ಅಂದರೆ ಹಿರಿಯರೂ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಅನ್ಯದೇಶಸ್ಥರೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಡೆಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ ಏಬಾಲ್ ಬೆಟ್ಟದ ಕಡೆ ಅರ್ಧಜನರೂ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವದಕ್ಕೋಸ್ಕರ ನಿಂತರು.


ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವದಕ್ಕೂ ತನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಅವರನ್ನು ನೇವಿುಸಿದನು. ಅವರು ಇಂದಿನವರೆಗೂ ಆ ಕೆಲಸವನ್ನು ನಡಿಸುತ್ತಾರೆ.


ಫರೋಹನನ್ನು ಆಶೀರ್ವದಿಸಿ ಅವನ ಸನ್ನಿಧಿಯಿಂದ ಹೊರಟುಹೋದನು.


ದೇವಪುರುಷನಾದ ಮೋಶೆ ದೇಹವನ್ನು ಬಿಡುವದಕ್ಕಿಂತ ಮುಂಚೆ ಇಸ್ರಾಯೇಲ್ಯರ ವಿಷಯವಾಗಿ ಹೇಳಿದ ಆಶೀರ್ವಾದವು ಹೇಗಂದರೆ -


ಮತ್ತು ರೆಬೆಕ್ಕಳಿಗೆ - ತಂಗಿಯೇ, ನಿನ್ನಿಂದ ಲಕ್ಷಾಂತರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲಿ ಎಂದು ಹೇಳಿ ಹರಸಿದರು.


ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳುಕೊಂಡು ಅವರನ್ನು ಆಶೀರ್ವದಿಸಿದನು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಇಸ್ರಾಯೇಲ್ ಸರ್ವಸಮೂಹದವರನ್ನು ಆಶೀರ್ವದಿಸಿ ಗಟ್ಟಿಯಾಗಿ ಹೇಳಿದ್ದೇನಂದರೆ -


ಆಮೇಲೆ ಯಾಜಕರಾಗಿದ್ದ ಲೇವಿಯರು ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರವು [ದೇವರಿಗೆ] ಕೇಳಿಸಿತು; ಅವರ ಪ್ರಾರ್ಥನೆಯು ಪರಲೋಕದಲ್ಲಿರುವ ಆತನ ಪರಿಶುದ್ಧ ನಿವಾಸಕ್ಕೆ ಮುಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು