Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:10 - ಕನ್ನಡ ಸತ್ಯವೇದವು J.V. (BSI)

10 ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ದಿನದಲ್ಲಿ ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೋಶೆಯು ಯಜ್ಞವೇದಿಯನ್ನು ಅಭಿಷೇಕಿಸಿದ ದಿನದಲ್ಲಿ, ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಬಲಿಪೀಠವನ್ನು ಅಭಿಷೇಕಿಸಿದ ದಿನದಂದು ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ವೇದಿಕೆಯು ಅಭಿಷೇಕಿಸಲ್ಪಟ್ಟಾಗ, ಯಜ್ಞವೇದಿಕೆಯ ಆರಂಭಕ್ಕಾಗಿ ಪ್ರಧಾನರು ಸಹ ತಮ್ಮ ಕಾಣಿಕೆಗಳನ್ನು ವೇದಿಕೆಯ ಮುಂದೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಲಿಪೀಠವನ್ನು ಅಭಿಷೇಕಿಸಿದ ದಿನದಂದು ಪ್ರತಿಷ್ಠೆಗಾಗಿ ಅದರ ಮುಂದೆ ಬಂದು, ಪ್ರಧಾನರು ತಮ್ಮ ಕಾಣಿಕೆಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:10
12 ತಿಳಿವುಗಳ ಹೋಲಿಕೆ  

ತರುವಾಯ ಎಂಟನೆಯ ದಿನದಲ್ಲಿ ಸಭೆ ನೆರೆಯಿತು. ಹೀಗೆ ಏಳು ದಿವಸ ಯಜ್ಞವೇದಿ ಪ್ರತಿಷ್ಠೆಯನ್ನೂ ಇನ್ನು ಏಳು ದಿವಸ ಜಾತ್ರೆಯನ್ನೂ ನಡಿಸಿದರು.


ಯೆರೂಸಲೇವಿುನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ ಸ್ವರಮಂಡಲ ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವದಕ್ಕಾಗಿ ಯೆರೂಸಲೇವಿುಗೆ ಕರೆಯಿಸಿದರು.


ಅರಸನಾದ ಸೊಲೊಮೋನನು ಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ, ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲ್ಯರೂ ದೇವಾಲಯವನ್ನು ಪ್ರತಿಷ್ಠಿಸಿದರು.


ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ; ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲ್ಯರೂ ಯೆಹೋವನ ಆಲಯವನ್ನು ಪ್ರತಿಷ್ಠಿಸಿದರು.


ಮತ್ತು ಸೈನ್ಯಾಧಿಪತಿಗಳು ಅವರಿಗೆ - ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನೂ ಗೃಹಪ್ರವೇಶ ಮಾಡದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶಮಾಡಿಕೊಂಡಾನು.


ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವದಕ್ಕೆ ಅವಕಾಶಕೊಡದೆ ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.


ದೇವರು ತಮಗೆ ವಿಶೇಷಾನಂದವನ್ನುಂಟುಮಾಡಿದ್ದರಿಂದ ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವ ಮಾಡಿದರು. ಯೆರೂಸಲೇವಿುನ ಉತ್ಸವದ ಹರ್ಷಧ್ವನಿಯು ಬಹುದೂರದವರೆಗೂ ಕೇಳಿಸಿತು.


ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿ ಅದನ್ನೂ ಅದರ ಸಾಮಾನುಗಳನ್ನೂ ಯಜ್ಞವೇದಿಯನ್ನೂ ವೇದಿಯ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದಾಗ


ಆಗ ಯೆಹೋವನು ಮೋಶೆಗೆ - ಒಬ್ಬೊಬ್ಬ ಕುಲಾಧಿಪತಿ ಒಂದೊಂದು ದಿನದಲ್ಲಿ ಯಜ್ಞವೇದಿಯ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಬೇಕೆಂದು ಆಜ್ಞಾಪಿಸಿದನು.


ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ದಿನದಲ್ಲಿ ಇಸ್ರಾಯೇಲ್ಯರ ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕೊಟ್ಟ ಕಾಣಿಕೆಗಳು ಒಟ್ಟಾಗಿ 12 ಬೆಳ್ಳಿಯ ಹರಿವಾಣಗಳು,12 ಬೆಳ್ಳಿಯ ಬಟ್ಟಲುಗಳು,12 ಚಿನ್ನದ ಧೂಪಾರತಿಗಳು.


ಸಮಾಧಾನಯಜ್ಞಕ್ಕಾಗಿ ಕೊಟ್ಟ ಪಶುಗಳು - ಹೋರಿಗಳು 24, ಟಗರುಗಳು 60, ಹೋತಗಳು 60, ವರುಷದ ಕುರಿಗಳು 60. ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ನಂತರ ಇದೇ ಅದರ ಪ್ರತಿಷ್ಠೆಗೆ ಸಮರ್ಪಿಸಲ್ಪಟ್ಟ ಕಾಣಿಕೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು