Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:13 - ಕನ್ನಡ ಸತ್ಯವೇದವು J.V. (BSI)

13 ಅವನ ಕಾಣಿಕೆಯು ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ. ಎಪ್ಪತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವನು ತಂದ ಕಾಣಿಕೆಗಳು: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಬೆಳ್ಳಿಯ ಒಂದು ಹರಿವಾಣ; 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವನ ಅರ್ಪಣೆ ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಚೊಕ್ಕ ಬೆಳ್ಳಿಯ ಒಂದು ತಟ್ಟೆ ಮತ್ತು 70 ಶೆಕೆಲ್ ತೂಕದ ಬೆಳ್ಳಿಯ ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಇವೆರಡು ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:13
23 ತಿಳಿವುಗಳ ಹೋಲಿಕೆ  

ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿಯೊಬ್ಬನು ಯೆಹೋವನಿಗೆ ಅರ್ಧ ರೂಪಾಯಿಯ ಮೇರೆಗೆ ಕಪ್ಪ ಕೊಡಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧರ್ಧ ರೂಪಾಯಿ ಕಪ್ಪವಾಗಿ ಕೊಡಬೇಕು.


ಯಾವನಾದರೂ ಯೆಹೋವನಿಗೆ ಧಾನ್ಯ ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯಿದು ಧೂಪವನ್ನಿಟ್ಟು


ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜೆಗಳು, ಪಾನದ್ರವ್ಯವನ್ನು ಅರ್ಪಿಸುವದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.


ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನೂ ಧೂಪಾರತಿಗಳನ್ನೂ ಹೂಜೆಗಳನ್ನೂ ಪಾನದ್ರವ್ಯವನ್ನರ್ಪಿಸುವದಕ್ಕೆ ಬೇಕಾದ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದಲೇ ಮಾಡಿಸಬೇಕು.


ಅವರು ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು; ಅವಳು ಅದನ್ನು ತನ್ನ ತಾಯಿಯ ಬಳಿಗೆ ತಕ್ಕೊಂಡುಹೋದಳು.


ಆಗ ಅವಳು ತನ್ನ ತಾಯಿಯ ಬೋಧನೆಯನ್ನು ಕೇಳಿ - ಇಲ್ಲಿಯೇ ಸ್ನಾನಿಕನಾದ ಯೋಹಾನನ ತಲೆಯನ್ನು ಪರಾತಿನಲ್ಲಿ ನನಗೆ ತರಿಸಿಕೊಡು ಅಂದಳು.


ಆ ದಿನದಲ್ಲಿ - ಯೆಹೋವನಿಗೆ ಮೀಸಲು ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.


ಅದನ್ನು ಸವಿಯುತ್ತಾ ಯೆರೂಸಲೇವಿುನ ದೇವಾಲಯದೊಳಗಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ಎತ್ತಿಕೊಂಡು ಬಂದಿದ್ದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ತಾನೂ ತನ್ನ ಮುಖಂಡರೂ ಪತ್ನ್ಯುಪಪತ್ನಿಯರೂ ಕುಡಿಯುವದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು.


ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಗೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.


ಅರಸನಿಂದಲೂ ಅವನ ಮಂತ್ರಿಗಳಿಂದಲೂ ಸರದಾರರಿಂದಲೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿಬಂಗಾರವನ್ನೂ ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು.


ಹೀರಾಮನು ಅರಸನಾದ ಸೊಲೊಮೋನನ ಅಪ್ಪಣೆಯಂತೆ ಯೆಹೋವನ ಆಲಯಕ್ಕೋಸ್ಕರ ಈ ಎಲ್ಲಾ ಸಾಮಾನುಗಳನ್ನು ಒಪ್ಪ ಹಾಕಿದ ತಾಮ್ರದಿಂದ ಮಾಡಿದನು.


ಹತ್ತು ಪೀಠಗಳು, ಅವುಗಳ ಮೇಲಿದ್ದ ಹತ್ತು ಗಂಗಾಳಗಳು,


ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ತೆಗೆದುಕೊಳ್ಳಬೇಕು.


ದೇವರ ಸೇವೆಯಲ್ಲಿ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ನೀವು ಬೆಲೆಯನ್ನು ಯಾವಾಗಲೂ ನಿರ್ಣಯಿಸಬೇಕು.


ಇಪ್ಪತ್ತು ವರುಷದಿಂದ ಅರುವತ್ತು ವರುಷದ ಪರ್ಯಂತರ ವಯಸ್ಸುಳ್ಳ ಪುರುಷನಿಗೋಸ್ಕರ ಐವತ್ತು ರೂಪಾಯಿಗಳನ್ನೂ


ಮೊದಲನೆಯ ದಿನದಲ್ಲಿ ಕಾಣಿಕೆ ತಂದವನು ಯೆಹೂದ ಕುಲಾಧಿಪತಿ ಅಮ್ಮೀನಾದಾಬನ ಮಗನಾದ ನಹಶೋನನು.


ಧೂಪದ್ರವ್ಯ ತುಂಬಿದ್ದ ಹತ್ತು ತೊಲೆ ತೂಕವುಳ್ಳ ಚಿನ್ನದ ಧೂಪಾರತಿ;


ಅವನ ಕಾಣಿಕೆ ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;


ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಪಾನದ್ರವ್ಯಕ್ಕಾಗಿ


[ಹೊತ್ತಾರೆಯ ಕುರಿಯೊಂದಿಗೆ] ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಸಮರ್ಪಿಸಬೇಕು.


ಅಮಾವಾಸ್ಯೆಯಲ್ಲಿಯೂ ದಿನಂಪ್ರತಿಯೂ ಮಾಡಬೇಕಾದ ಸರ್ವಾಂಗಹೋಮಗಳನ್ನೂ ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಪಾನದ್ರವ್ಯ ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಕಂಡ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು