Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:8 - ಕನ್ನಡ ಸತ್ಯವೇದವು J.V. (BSI)

8 ತರುವಾಯ ಅವರು [ಸರ್ವಾಂಗಹೋಮಕ್ಕಾಗಿ] ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯ ಅಂದರೆ ಎಣ್ಣೆಬೆರಸಿದ ಗೋದಿಯ ಹಿಟ್ಟನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಹೋರಿಯನ್ನೂ ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ತರುವಾಯ ಅವರು ಸರ್ವಾಂಗಹೊಮಕ್ಕಾಗಿ ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯ ಅಂದರೆ ಎಣ್ಣೆ ಬೆರೆಸಿದ ಗೋದಿಯ ಹಿಟ್ಟನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಹೋರಿಯನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬಳಿಕ ಅವರು ದಹನಬಲಿಗಾಗಿ ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯವನ್ನೂ, ಅಂದರೆ ಎಣ್ಣೆಬೆರೆಸಿದ ಗೋದಿಯ ಹಿಟ್ಟನ್ನೂ ಮತ್ತು ಪಾಪಪರಿಹಾರಕ ಬಲಿಗಾಗಿ ಮತ್ತೊಂದು ಹೋರಿಯನ್ನೂ ತೆಗೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ತರುವಾಯ ಲೇವಿಯರು ಸರ್ವಾಂಗಹೋಮಕ್ಕಾಗಿ ಒಂದು ಎಳೆಹೋರಿಯನ್ನು ಮತ್ತು ಅದರೊಡನೆ ಸಮರ್ಪಿಸಬೇಕಾದ ಧಾನ್ಯಸಮರ್ಪಣೆಗಾಗಿ ಎಣ್ಣೆ ಬೆರೆಸಿದ ಗೋಧಿಯಹಿಟ್ಟನ್ನು ತೆಗೆದುಕೊಂಡು ಬರಬೇಕು; ನೀನು ಅವರಿಂದ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಎಳೆಹೋರಿಯನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು, ಅದರೊಂದಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ದೋಷಪರಿಹಾರಕ ಬಲಿಗಾಗಿ ಮತ್ತೊಂದು ಹೋರಿಯನ್ನೂ ನೀನು ತೆಗೆದುಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:8
12 ತಿಳಿವುಗಳ ಹೋಲಿಕೆ  

ಯಾವನಾದರೂ ಯೆಹೋವನಿಗೆ ಧಾನ್ಯ ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯಿದು ಧೂಪವನ್ನಿಟ್ಟು


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿವಿುತ್ತ ನಿರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು. ಏನಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ನರಭಾವದ ರೂಪದಲ್ಲಿ ಕಳುಹಿಸಿಕೊಟ್ಟು ನರಭಾವದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ಅವನನ್ನು ಜಜ್ಜುವದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು; ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವದು;


ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಾಗಿ ಬರಬೇಕು. ಅವನು ದೋಷಪರಿಹಾರಕಯಜ್ಞಕ್ಕಾಗಿ ಹೋರಿಯನ್ನೂ ಸರ್ವಾಂಗಹೋಮಕ್ಕಾಗಿ ಟಗರನ್ನೂ ತರಬೇಕು.


ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದನಂತರ ಅದನ್ನು ಪರಿಹರಿಸಿಕೊಳ್ಳುವದಕ್ಕಾಗಿ [ಪೂರ್ಣಾಂಗವಾದ] ಹೋರಿಯನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಲಿಗೆ ತರಿಸಿದಾಗ


ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನೂ ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.


ಅವನು ದನವನ್ನು ಸರ್ವಾಂಗಹೋಮವಾಗಿ ಸಮರ್ಪಿಸುವದಾದರೆ ಪೂರ್ಣಾಂಗವಾದ ಗಂಡನ್ನು ತರಬೇಕು. ತನಗೆ ಯೆಹೋವನು ಒಲಿಯುವಂತೆ ದೇವದರ್ಶನದ ಗುಡಾರದ ಬಾಗಲಿಗೆ ಅದನ್ನು ತರಬೇಕು.


ಆಮೇಲೆ ಆ ಪುಟ್ಟಿಯನ್ನೂ ಆ ಹೋರಿಯನ್ನೂ ಟಗರುಗಳನ್ನೂ ತಂದಿಡಬೇಕು.


ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವದಕ್ಕೆ ನೀನು ಮಾಡಬೇಕಾದ ಕಾರ್ಯ ಯಾವದಂದರೆ - ಒಂದು ಹೋರಿಕರುವನ್ನೂ ಪೂರ್ಣಾಂಗವಾದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು