Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:6 - ಕನ್ನಡ ಸತ್ಯವೇದವು J.V. (BSI)

6 ಆದರೆ ಕೆಲವು ಜನರು ಮನುಷ್ಯ ಶವ ಸೋಂಕಿದದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಮೋಶೆ ಆರೋನರ ಬಳಿಗೆ ಬಂದು ಮೋಶೆಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದರೆ ಕೆಲವು ಜನರಿಗೆ ಮನುಷ್ಯನ ಶವಸೋಂಕು ಇದ್ದುದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗದೆ ಮೋಶೆ ಮತ್ತು ಆರೋನರ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದರೆ ಕೆಲವರು ನರಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿದ್ದರು. ಆದ್ದರಿಂದ ಪಾಸ್ಕಹಬ್ಬವನ್ನು ನಿಯಮಿತ ದಿನದಂದು ಆಚರಿಸಲಾಗಲಿಲ್ಲ. ಅವರು ಮೋಶೆ - ಆರೋನರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಕೆಲವು ಜನರು ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ಆ ದಿನದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ. ಆದ್ದರಿಂದ ಅವರು ಆ ದಿನ ಮೋಶೆ ಆರೋನರ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಕೆಲವು ಜನರು ಮನುಷ್ಯನ ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ಆ ದಿವಸದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ ಅದಕ್ಕೆ ಅದೇ ದಿನ ಅವರು ಮೋಶೆ ಮತ್ತು ಆರೋನರ ಬಳಿಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:6
16 ತಿಳಿವುಗಳ ಹೋಲಿಕೆ  

ಅವರು ದೇವದರ್ಶನದ ಗುಡಾರದ ಬಾಗಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರು ಇವರೆಲ್ಲರ ಮುಂದೆ ನಿಂತು ಅವರಿಗೆ -


ಯಾತಕ್ಕೆ ನೀನೊಬ್ಬನೇ ನ್ಯಾಯತೀರಿಸುವದಕ್ಕೆ ಕೂತಿರುತ್ತಿ ಎಂದು ಕೇಳಲು ಮೋಶೆ ಅವನಿಗೆ - ದೇವರ ತೀರ್ಪನ್ನು ತಿಳುಕೊಳ್ಳುವದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ;


ಬೈಲಿನಲ್ಲಿರುವ ಯಾವನಿಗಾದರೂ ಶಸ್ತ್ರಹತನ ಶವವಾಗಲಿ ಬೇರೆ ಯಾವ ಮನುಷ್ಯ ಶವವಾಗಲಿ ಮನುಷ್ಯನ ಎಲುಬಾಗಲಿ ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


ಎಲ್ಲಾ ಕುಷ್ಠರೋಗಿಗಳನ್ನೂ ಮೇಹಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ


ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರಕೊಂಡು ಹೋದರು. ಆಗ ಮುಂಜಾನೆ ಆಗಿತ್ತು. ಅವರು ತಮಗೆ ಮೈಲಿಗೆ ತಟ್ಟಿ ಪಸ್ಕದ ಊಟವನ್ನು ಮಾಡುವದಕ್ಕೆ ಅಡ್ಡಿಯಾದೀತೆಂದು ಅರಮನೆಯೊಳಕ್ಕೆ ಹೋಗಲಿಲ್ಲ.


ಆಗ ಶುದ್ಧನಾದವನೊಬ್ಬನು ಆ ನೀರನ್ನು ಹಿಸ್ಸೋಪ್‍ಗಿಡದ ಬರಲಿಂದ [ಮನುಷ್ಯನು ಸತ್ತ] ಆ ಡೇರೆಯ ಮೇಲೂ ಅದರಲ್ಲಿದ್ದ ಸಾಮಾನುಗಳ ಮತ್ತು ಮನುಷ್ಯರ ಮೇಲೂ ಚಿವಿುಕಿಸಬೇಕು; ಹಾಗೆಯೇ ಎಲುಬಾಗಲಿ ಹತವಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ ಸಮಾಧಿಯಾಗಲಿ ಯಾವನಿಗೆ ಸೋಂಕಿತೋ ಅವನ ಮೇಲೆಯೂ ಚಿವಿುಕಿಸಬೇಕು.


ಇವರು ಯಾವಾಗಲೂ ಜನರಿಗೆ ನ್ಯಾಯತೀರಿಸುವವರಾಗಿ ಕಠಿಣವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಾ ಸುಲಭ ವ್ಯಾಜ್ಯಗಳನ್ನು ತಾವೇ ತೀರಿಸುತ್ತಾ ಬಂದರು.


ನನ್ನ ಮಾತನ್ನು ಕೇಳು, ನಾನು ನಿನಗೆ ಒಂದು ಆಲೋಚನೆಯನ್ನು ಹೇಳುತ್ತೇನೆ; ಮತ್ತು ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗೂ ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಹತ್ತಿರಕ್ಕೆ ತರಬೇಕು;


ಮೋಶೆಯು ಅವರ ಪ್ರಾರ್ಥನೆಯನ್ನು ಯೆಹೋವನ ಬಳಿಯಲ್ಲಿ ವಿಚಾರಿಸಲಾಗಿ ಆತನು ಅವನಿಗೆ ಆಜ್ಞಾಪಿಸಿದ್ದೇನಂದರೆ -


ಕಂಡವರು ಅವನನ್ನು ಮೋಶೆ ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡುಕೊಂಡು ಬಂದರು.


[ಯೆಹೋವನ] ಹೆಸರನ್ನು ದೂಷಿಸಿದದರಿಂದ ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. ಅವನ ತಾಯಿಯು ದಾನ್‍ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬವಳು.


ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿವಿುತ್ತ ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು.


ಮನುಷ್ಯ ಶವ ಸೋಂಕಿದದರಿಂದ ನಾವು ಅಶುದ್ಧರಾದೆವು. ನಾವು ವಿುಕ್ಕ ಇಸ್ರಾಯೇಲ್ಯರೊಡನೆ ನೇಮಕವಾದ ಕಾಲದಲ್ಲಿ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವದಕ್ಕೆ ಅಪ್ಪಣೆಯಿಲ್ಲವೋ ಎಂದು ಕೇಳಲು ಮೋಶೆ ಅವರಿಗೆ -


[ಹೊಲೆಗಳೆವ] ಕಟ್ಟಳೆ ಹೇಗಂದರೆ - ಯಾರಾದರೂ ಡೇರೆಯೊಳಗೆ ಸತ್ತ ಸಂದರ್ಭದಲ್ಲಿ ಆ ಡೇರೆಯಲ್ಲಿರುವವರೆಲ್ಲರೂ ಅದರೊಳಗೆ ಬರುವವರೂ ಏಳು ದಿನಗಳವರೆಗೆ ಅಶುದ್ಧರಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು