Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:20 - ಕನ್ನಡ ಸತ್ಯವೇದವು J.V. (BSI)

20 ತರುವಾಯ ದೇವರು - ಗುಂಪುಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ; ಪಕ್ಷಿಗಳು ಭೂವಿುಯ ಮೇಲೆ ಅಂತರಿಕ್ಷದೊಳಗೆ ಹಾರಾಡಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಮೇಲೆ ದೇವರು, “ಹಲವಾರು ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬಳಿಕ ದೇವರು, “ನೀರಿನಲ್ಲಿ ಅನೇಕ ಜಲಚರಗಳು ತುಂಬಿಕೊಳ್ಳಲಿ. ಭೂಮಿಯ ಮೇಲೆ ಆಕಾಶದಲ್ಲಿ ಪಕ್ಷಿಗಳು ಹಾರಾಡಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಮೇಲೆ ದೇವರು, “ನೀರಿನಲ್ಲಿ ಜೀವಜಂತುಗಳು ತುಂಬಿಕೊಳ್ಳಲಿ, ಭೂಮಿಯ ಮೇಲೆ ಆಕಾಶಮಂಡಲದಲ್ಲಿ ಪಕ್ಷಿಗಳು ಹಾರಾಡಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:20
17 ತಿಳಿವುಗಳ ಹೋಲಿಕೆ  

ಆಗ ಆತನು ಎಲ್ಲಾ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿ - ಇವುಗಳಿಗೆ ಆ ಮನುಷ್ಯನು ಏನೇನು ಹೆಸರಿಡುವನು ನೋಡೋಣ ಎಂದು ಅವನ ಬಳಿಗೆ ಬರಮಾಡಿದನು. ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಹೆಸರಾಯಿತು.


ಅವನು ಲೆಬನೋನಿನ ದೇವದಾರುವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ ಎಲ್ಲಾ ಪಶುಪಕ್ಷಿಜಲಜಂತು ಕ್ರಿವಿುಕೀಟಗಳನ್ನೂ ಕುರಿತು ಪ್ರಸ್ತಾಪಿಸಿದನು.


ಎಲ್ಲಾ ಮೃಗಪಶುಪಕ್ಷಿಕ್ರಿವಿುಕೀಟಗಳೂ


ಇದಲ್ಲದೆ ಭೂವಿುಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿವಿುಕೀಟಗಳು ಎಂಬ ಜೀವಿಗಳಿಗೆ ಎಲ್ಲಾ ಹುಲ್ಲುಸೊಪ್ಪುಗಳನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಎಂದು ಹೇಳಿದನು; ಅದು ಹಾಗೆಯೇ ಆಯಿತು.


ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿವಿು ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂವಿುಯ ಮೇಲೆ ಬಹುಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ ಎಂದು ಆಜ್ಞಾಪಿಸಲು


ಇದಲ್ಲದೆ ದೇವರು ಅವುಗಳಿಗೆ - ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ; ಪಕ್ಷಿಗಳು ಭೂವಿುಯ ಮೇಲೆ ಹೆಚ್ಚಲಿ ಎಂದು ಹೇಳಿ ಆಶೀರ್ವದಿಸಿದನು.


ಬಳಿಕ ದೇವರು - ಆಕಾಶಮಂಡಲದಲ್ಲಿ ಬೆಳಕುಗಳು ಉಂಟಾಗಲಿ; ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ; ಇದಲ್ಲದೆ ಅವು ಗುರುತುಗಳಾಗಿದ್ದು ಸಮಯಗಳನ್ನೂ ದಿನಸಂವತ್ಸರಗಳನ್ನೂ ತೋರಿಸಲಿ;


ದೇವರು ವಿಸ್ತಾರವಾದ ಗುಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು; ಹಾಗೆಯೇ ಆಯಿತು.


ತಾನೇ ಎಲ್ಲರಿಗೂ ಜೀವಶ್ವಾಸ ಮುಂತಾದದ್ದೆಲ್ಲವನ್ನೂ ಕೊಡುವವನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಸೇವೆಹೊಂದುವವನೂ ಅಲ್ಲ.


ಒಬ್ಬನು ಜ್ಞಾನದಿಂದಲೂ ತಿಳುವಳಿಕೆಯಿಂದಲೂ ತನ್ನ ಕೆಲಸವನ್ನು ನಡಿಸಿ ಸಾಫಲ್ಯಕ್ಕೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಬಾಧ್ಯತೆಯಾಗಿ ಬಿಡಬೇಕಾಗುವದು. ಇದು ಸಹ ವ್ಯರ್ಥವೂ ಕೇವಲ ಅನ್ಯಾಯವೂ ಆಗಿದೆ.


ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ನಾಲ್ಕನೆಯ ದಿನವಾಯಿತು.


ಹೀಗೆ ದೇವರು ಮಹಾಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೇದೆಂದು ನೋಡಿದನು.


ಪಶುಪಕ್ಷಿ ಮೃಗಕ್ರಿವಿುಗಳು ಮನುಷ್ಯರು ಸಹಿತವಾಗಿ ಭೂವಿುಯ ಮೇಲೆ ಸಂಚರಿಸುವ ಸಕಲ ಪ್ರಾಣಿಗಳೂ ಲಯವಾದವು.


ಹೊಟ್ಟೆಯಿಂದ ನಡೆಯುವಂಥದನ್ನೂ ಕಾಲಿನಿಂದ ಹರಿದಾಡುವಂಥದನ್ನೂ ಬಹಳ ಕಾಲುಳ್ಳದ್ದನ್ನೂ ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನೂ ನೀವು ತಿನ್ನಬಾರದು; ಅವು ಹೇಯವಾಗಿವೆ.


ನೀವು ಅಂಥ ಯಾವ ಸಣ್ಣ ಜೀವಿಯನ್ನೂ ತಿಂದು ನಿಮ್ಮನ್ನು ನೀವೇ ಹೇಸಿಕೆ ಮಾಡಿಕೊಂಡು ಅಶುದ್ಧರಾಗಬಾರದು.


ಈ ಎಲ್ಲವುಗಳ ಸಾಕ್ಷಿಯಿಂದ ಯೆಹೋವನ ಕೈಯೇ ಸಕಲ ಕಾರ್ಯಗಳನ್ನು ಮಾಡುತ್ತದೆ ಎಂದು ಯಾರಿಗೆ ತಾನೇ ಗೊತ್ತಾಗುವದಿಲ್ಲ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು