Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:27 - ಕನ್ನಡ ಸತ್ಯವೇದವು J.V. (BSI)

27 ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು; ದೇವಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು; ಅವರನ್ನು ಗಂಡುಹೆಣ್ಣಾಗಿ ನಿರ್ಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿಸಿದನು. ಆತನು ಅವರನ್ನು ಗಂಡು ಮತ್ತು ಹೆಣ್ಣುಗಳಾಗಿ ರೂಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಹೀಗೆ ದೇವರು ಮನುಷ್ಯನನ್ನು ತಮ್ಮ ಸ್ವರೂಪದಲ್ಲಿ ಸೃಷ್ಟಿ ಮಾಡಿದರು. ದೇವರ ಸ್ವರೂಪದಲ್ಲಿಯೇ ಅವರನ್ನು ಸೃಷ್ಟಿ ಮಾಡಿದರು. ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:27
20 ತಿಳಿವುಗಳ ಹೋಲಿಕೆ  

ಆತನು - ಮನುಷ್ಯರನ್ನು ನಿರ್ಮಾಣ ಮಾಡಿದವನು ಆದಿಯಿಂದಲೇ ಅವರನ್ನು ಗಂಡುಹೆಣ್ಣಾಗಿ ನಿರ್ಮಿಸಿ


ನಾವು ಆತನ ನಿರ್ಮಾಣ; ಸತ್ಕಾರ್ಯಗಳನ್ನು ಮಾಡುವದಕ್ಕಾಗಿಯೇ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟೆವು. ನಾವು ಸತ್ಕಾರ್ಯಗಳನ್ನು ನಡಿಸುವವರಾಗಿ ಬದುಕಬೇಕೆಂದು ದೇವರು ನಮ್ಮನ್ನು ಮೊದಲೇ ನೇವಿುಸಿದನು.


ದೇವರಾದರೋ ಸೃಷ್ಟಿಯ ಮೊದಲಿನಿಂದಲೇ ಮನುಷ್ಯರನ್ನು ಗಂಡುಹೆಣ್ಣಾಗಿ ನಿರ್ಮಿಸಿದನೆಂತಲೂ


ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಾನುಗುಣವಾದ ನೀತಿಯುಳ್ಳದ್ದಾಗಿಯೂ ದೇವಭಯವುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.


ನೀನು ನನ್ನನ್ನು ಅದ್ಭುತವಾಗಿಯೂ ವಿಚಿತ್ರವಾಗಿಯೂ ರಚಿಸಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ. ನಿನ್ನ ಕೃತ್ಯಗಳು ಆಶ್ಚರ್ಯವಾಗಿವೆಯೆಂದು ನನ್ನ ಹೃದಯವು ಚೆನ್ನಾಗಿ ಗ್ರಹಿಸಿಕೊಂಡಿದೆ.


ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.


ಆತನು ಅದೃಶ್ಯನಾದ ದೇವರ ಪ್ರತಿರೂಪನೂ ಸೃಷ್ಟಿಗೆಲ್ಲಾ ಜ್ಯೇಷ್ಠಪುತ್ರನ ಸ್ಥಾನಹೊಂದಿದವನೂ ಆಗಿದ್ದಾನೆ.


ಪರಮಾತ್ಮಾಂಶನಾದ ಯಾವನೂ ಹೀಗೆ ಮಾಡಲಿಲ್ಲ; ಆ ಪ್ರಸಿದ್ಧನೊಬ್ಬನು ಏಕೆ ಇಂಥ ಕೃತ್ಯಮಾಡಿದನು? ದೇವರ ವರವಾದ ಸಂತಾನವನ್ನು ಹಾರೈಸಿಯೇ. ಹೀಗಿರಲು ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ಯಾವನೂ ತನ್ನ ಯೌವನದ ಪತ್ನಿಗೆ ದ್ರೋಹಮಾಡದಿರಲಿ.


ಮತ್ತು ಯೆಹೋವದೇವರು - ಮನುಷ್ಯನು ಒಂಟಿಗನಾಗಿರುವದು ಒಳ್ಳೇದಲ್ಲ; ಅವನಿಗೆ ಸರಿಬೀಳುವ ಸಹಕಾರಿಯನ್ನು ಉಂಟುಮಾಡುವೆನು ಅಂದನು.


ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲತಲಾಂತರಗಳಿಂದಲೂ ಮರೆಯಾಗಿತ್ತು; ಈಗಿನ ಕಾಲದಲ್ಲಿ ದೇವಜನರಿಗೆ ತಿಳಿಸಲ್ಪಟ್ಟಿದೆ.


ಈ ಸ್ವಭಾವವು ಅದನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ದಿನೇದಿನೇ ನೂತನವಾಗುತ್ತಾ ಪೂರ್ಣಜ್ಞಾನವನ್ನು ಉಂಟುಮಾಡುತ್ತದೆ.


ನರಹತ್ಯವು ಸಹೋದರ ಹತ್ಯವಲ್ಲವೇ. ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿಯೇ ಉಂಟುಮಾಡಿದನಾದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾರೋ ಅವರ ರಕ್ತವನ್ನು ಮನುಷ್ಯರೇ ಸುರಿಸುವರು.


ದೇವರು ಮನುಷ್ಯರನ್ನು ಸೃಷ್ಟಿಸಿ ಭೂವಿುಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಅಂಥ ದೊಡ್ಡ ಕಾರ್ಯವು ನಡೆದದ್ದುಂಟೋ, ಇಲ್ಲವೆ ಅಂಥದರ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.


ನೋಡು, ದೇವರು ಮನುಷ್ಯರನ್ನು ಸತ್ಯವಂತರನ್ನಾಗಿ ಸೃಷ್ಟಿಸಿದನು, ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ; ಇದನ್ನು ಮಾತ್ರ ಕಂಡೆನು.


ಹೀಗಿರಲು ಯೆಹೋವದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು; ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ಅವರ ತಂದೆಗಳೂ ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ - ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದದರಿಂದ ನೀವು ನಿರಪರಾಧಿಗಳು ಎಂದು ಹೇಳಿ ಸಮಾಧಾನಪಡಿಸುವೆವು ಅಂದರು.


ಸಂಸಾರಿಗಳಾಗಿ ಗಂಡುಹೆಣ್ಣು ಮಕ್ಕಳನ್ನು ಪಡೆಯಿರಿ; ನಿಮ್ಮ ಗಂಡುಗಳಿಗೆ ಹೆಣ್ಣುಗಳನ್ನು ತೆಗೆದುಕೊಳ್ಳಿರಿ, ನಿಮ್ಮ ಹೆಣ್ಣುಗಳನ್ನು ಗಂಡುಗಳಿಗೆ ಕೊಡಿರಿ; ಅವರೂ ಗಂಡು ಹೆಣ್ಣು ಮಕ್ಕಳನ್ನು ಪಡೆಯಲಿ; ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕಡಿಮೆಯಾಗದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು