Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 12:2 - ಕನ್ನಡ ಸತ್ಯವೇದವು J.V. (BSI)

2 ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 12:2
38 ತಿಳಿವುಗಳ ಹೋಲಿಕೆ  

ನೀನು ಹೋದಲ್ಲೆಲ್ಲಾ ನಿನ್ನ ಸಂಗಡ ಇದ್ದೆನು; ನಿನ್ನ ಶತ್ರುಗಳನ್ನೆಲ್ಲಾ ನಿನ್ನೆದುರಿನಲ್ಲಿಯೇ ಸಂಹರಿಸಿಬಿಟ್ಟೆನು. ಲೋಕದ ಮಹಾಪುರುಷರ ಹೆಸರಿನಂತೆ ನಿನ್ನ ಹೆಸರನ್ನೂ ದೊಡ್ಡದುಮಾಡುವೆನು.


ಕ್ರಿಸ್ತನು ನಮ್ಮ ನಿವಿುತ್ತ ಶಾಪವಾಗಿ ಧರ್ಮಶಾಸ್ತ್ರದಲ್ಲಿ ಹೇಳಿರುವ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ.


ಅವನಿಂದ ಬಲಿಷ್ಠವಾದ ಮಹಾಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂವಿುಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವದಲ್ಲಾ;


ಇದಲ್ಲದೆ ನಾನು ಸರ್ವಶಕ್ತನಾದ ದೇವರು. ನೀನು ಬಹು ಸಂತಾನವುಳ್ಳವನಾಗಿ ಹೆಚ್ಚು. ನಿನ್ನಿಂದ ಜನಾಂಗವುಂಟಾಗುವದು; ಅನೇಕ ಜನಾಂಗಗಳೂ ಅರಸರೂ ನಿನ್ನಿಂದ ಹುಟ್ಟುವರು.


ಆತನು - ನಾನು ದೇವರು, ನಿನ್ನ ತಂದೆ ಆರಾಧಿಸಿದ ದೇವರು; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾಜನಾಂಗವುಂಟಾಗುವಂತೆ ಮಾಡುವೆನು.


ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞಾನೇಮವಿಧಿಗಳನ್ನು ಕೈಕೊಂಡು ನಡೆದದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಿ


ಯೆಹೋವನು ನನ್ನ ದಣಿಯನ್ನು ಬಹಳವಾಗಿ ಅಭಿವೃದ್ಧಿಪಡಿಸಿ ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟದ್ದರಿಂದ ಅವನು ಧನವಂತನಾದನು.


ಆದದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿರಿ.


ಆದರೆ ಇಸ್ರಾಯೇಲ್ಯರು ಅಭಿವೃದ್ಧಿಯಾಗಿ ಅತ್ಯಧಿಕವಾಗಿ ಹೆಚ್ಚಿ ಬಹಳ ಬಲಗೊಂಡರು; ಆ ದೇಶದಲ್ಲೆಲ್ಲಾ ತುಂಬಿಕೊಂಡರು.


ನಿನ್ನ ಸಂತಾನದವರನ್ನು ಭೂವಿುಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂವಿುಯಲ್ಲಿರುವ ಧೂಳನ್ನು ಲೆಕ್ಕಮಾಡುವದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಲಾದೀತು.


ಅವನನ್ನು ಹೊರಗೆ ಕರತಂದು - ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವದು ನಿನ್ನಿಂದಾದರೆ ಲೆಕ್ಕಿಸು; ನಿನ್ನ ಸಂತಾನವು ಅಷ್ಟಾಗುವದು ಅಂದನು.


ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ - ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಐಗುಪ್ತದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.


ಆದಕಾರಣ ನೀನು ನನ್ನನ್ನು ತಡೆಯಬೇಡ; ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡುವೆನು. ತರುವಾಯ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗವುಂಟಾಗುವಂತೆ ಮಾಡುವೆನು ಎಂದು ಹೇಳಿದನು.


ನಿನ್ನ ಸಂತತಿಯು ಭೂವಿುಯ ಧೂಳಿನಂತೆ ಅಸಂಖ್ಯವಾಗುವದು; ನೀನು ಪೂರ್ವಪಶ್ಚಿಮದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನ ಮೂಲಕವೂ ನಿನ್ನ ಸಂತತಿಯ ಮೂಲಕವೂ ಭೂವಿುಯ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು.


ಪರಜನಗಳು ನಿನ್ನನ್ನು ಸೇವಿಸಲಿ. ಪರಕುಲಗಳು ನಿನಗೆ ಅಡ್ಡಬೀಳಲಿ. ನಿನ್ನ ಅಣ್ಣತಮ್ಮಂದಿರಲ್ಲಿ ನೀನು ದೊರೆಯಾಗು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವು ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ ಅಂದನು.


ದೇವರು ಆ ಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನು ಕೆಡವಿದರೂ ಅಬ್ರಹಾಮನನ್ನು ನೆನಸಿ ಲೋಟನನ್ನು ತಪ್ಪಿಸಿ ಕಾಪಾಡಿದನು.


ಆಮೇಲೆ ಸುನ್ನತಿಯೆಂಬ ಸಂಸ್ಕಾರವನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾದ ನೀತಿಗೆ ಮುದ್ರೆಯಾಗಿತ್ತು. ಹೀಗಿರುವದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾದಾಗ್ಯೂ ಮೂಲತಂದೆಯಾದನು; ಅವರೂ ನೀತಿವಂತರೆಂದು ಎಣಿಸಲ್ಪಡುವರು.


ಆಗಲಿ, ನಾನು ಇವರಿಗೆ ವ್ಯಾಧಿಯನ್ನುಂಟುಮಾಡಿ ಇವರನ್ನು ನಿರ್ಮೂಲಮಾಡಿ ಈ ಜನಕ್ಕಿಂತ ಹೆಚ್ಚಾಗಿಯೂ ಬಲಿಷ್ಠವಾಗಿಯೂ ಇರುವ ಜನಾಂಗವನ್ನು ನಿನ್ನ ಮೂಲಕವೇ ಹುಟ್ಟಿಸುವೆನು ಎಂದು ಹೇಳಿದನು.


ಅರಸನಾದ ದಾವೀದನ ಸೇವಕರು ನಮ್ಮ ಒಡೆಯನೂ ಆರಸನೂ ಆದ ದಾವೀದನ ಮುಂದೆ ಬಂದು - ನಿನ್ನ ದೇವರು ನಿನ್ನ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ. ರಾಜ್ಯವನ್ನು ನಿನ್ನ ಕಾಲದಲ್ಲಿದ್ದದ್ದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಬಲಪಡಿಸಲಿ ಎಂದು ಅವನನ್ನು ಹರಸಿದ್ದಾರೆ; ಅರಸನು ತನ್ನ ಹಾಸಿಗೆಯ ಮೇಲೆ ಬಿದ್ದುಕೊಂಡು -


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು.


ಅಬ್ರಹಾಮನು ಬಹುದಿನದ ವೃದ್ಧನಾದನು. ಯೆಹೋವನು ಅವನನ್ನು ಸಕಲ ವಿಷಯಗಳಲ್ಲಿ ಅಭಿವೃದ್ಧಿಪಡಿಸಿದ್ದನು.


ಅಬ್ರಹಾಮನು ತೀರಿಹೋದನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನಿಗೂ ಉಂಟಾಯಿತು. ಇಸಾಕನು ಲಹೈರೋಯಿ ಎಂಬ ಬಾವಿಯ ಹತ್ತಿರ ವಾಸವಾಗಿದ್ದನು.


ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು.


ಅದಕ್ಕೆ ದೇವರು - ನೀನು ಅವರ ಜೊತೆಯಲ್ಲಿ ಹೋಗಬಾರದು; ಆ ಜನಾಂಗದವರು ನನ್ನ ಆಶೀರ್ವಾವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು ಎಂದು ಹೇಳಿದನು.


ಅವರನ್ನು ಆಶೀರ್ವದಿಸುವದಕ್ಕೆ ನನಗೆ ಅಪ್ಪಣೆಯಾಯಿತು; ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು.


ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ.


ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿಯು ಆಗುವದು.


ಯೆಹೂದ ಕುಲವೇ, ಇಸ್ರಾಯೇಲ್ ವಂಶವೇ, ನಿಮ್ಮ ಹೆಸರು ಹೇಗೆ ಜನಾಂಗಗಳಲ್ಲಿ ಶಾಪದ ಮಾತಾಗಿ ಸಲ್ಲುತ್ತಿತ್ತೋ ಹಾಗೆಯೇ ನಾನು ನಿಮ್ಮನ್ನು ರಕ್ಷಿಸಿದ ಮೇಲೆ ನಿಮ್ಮ ಹೆಸರು ಹರಕೆಯ ಮಾತಾಗಿ ಸಲ್ಲುವದು; ಹೆದರಬೇಡಿರಿ, ನಿಮ್ಮ ಕೈಗಳು ಬಲಗೊಳ್ಳಲಿ!


ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು; ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು.


ನಿನ್ನ ಕೆಟ್ಟತನದಿಂದ ನಿನ್ನಂಥವನಿಗೇ [ನಷ್ಟವಾದೀತು], ನಿನ್ನ ನೀತಿಯಿಂದ ನರಜನ್ಮದವನಿಗೇ [ಲಾಭ ಸಿಕ್ಕೀತು].


ನಿಮ್ಮ ಪಿತೃವಾದ ಅಬ್ರಹಾಮನನ್ನೂ ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ; ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು ಆಶೀರ್ವದಿಸಿ ಸಂತಾನದಿಂದ ಹೆಚ್ಚಿಸಿದೆನಲ್ಲವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು