Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:10 - ಕನ್ನಡ ಸತ್ಯವೇದವು J.V. (BSI)

10 ಲೋಟನು ಕಣ್ಣೆತ್ತಿ ನೋಡಲಾಗಿ ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರೂರಿನ ತನಕ ಎಲ್ಲಾ ಕಡೆಯಲ್ಲಿಯೂ ನೀರಾವರಿಯ ಸ್ಥಳವೆಂದು ತಿಳುಕೊಂಡನು. ಯೆಹೋವನು ಸೊದೋಮ್‍ಗೊಮೋರ ಪಟ್ಟಣಗಳನ್ನು ನಾಶಮಾಡುವದಕ್ಕಿಂತ ಮುಂಚೆ ಆ ಸೀಮೆಯು ಯೆಹೋವನ ವನದಂತೆಯೂ ಐಗುಪ್ತದೇಶದಂತೆಯೂ ನೀರಾವರಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಲೋಟನು ತನ್ನ ಕಣ್ಣುಗಳನ್ನೆತ್ತಿ ನೋಡಿ ಯೊರ್ದನಿನ ಮೈದಾನವನ್ನೆಲ್ಲಾ ಕಂಡನು. ಏಕೆಂದರೆ ಯೆಹೋವ ದೇವರು ಸೊದೋಮನ್ನೂ ಗೊಮೋರವನ್ನೂ ನಾಶ ಮಾಡುವುದಕ್ಕಿಂತ ಮುಂಚೆ, ಅದೆಲ್ಲಾ ಚೋಗರಿನವರೆಗೆ ನೀರಾವರಿ ಪ್ರದೇಶವಾಗಿದ್ದು, ಯೆಹೋವ ದೇವರ ತೋಟದಂತೆಯೂ ಈಜಿಪ್ಟ್ ದೇಶದಂತೆಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:10
26 ತಿಳಿವುಗಳ ಹೋಲಿಕೆ  

ದಕ್ಷಿಣಪ್ರದೇಶ, ಚೋಗರೂರಿನ ತನಕ ಯೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿರುವ ಮೈದಾನ ಇದನ್ನೆಲ್ಲಾ ಅವನಿಗೆ ತೋರಿಸಿ -


ಯೆಹೋವನು ಚೀಯೋನನ್ನು ಸಂತೈಸೇ ಸಂತೈಸುವನು; ಅಲ್ಲಿನ ಹಾಳು ಪ್ರದೇಶಗಳನ್ನೆಲ್ಲಾ ಸುಧಾರಿಸಿ ಕಾಡುನೆಲವನ್ನು ಏದೆನ್ ಉದ್ಯಾನದಂತೆಯೂ ಬೀಳುಭೂವಿುಯನ್ನು ಯೆಹೋವನ ವನದ ಹಾಗೂ ಕಳಕಳಿಸುವಂತೆ ಮಾಡುವನು; ಹರ್ಷ, ಉಲ್ಲಾಸ, ಸ್ತೋತ್ರ, ಗಾನಧ್ವನಿ, ಇವುಗಳು ಅಲ್ಲಿ ನೆಲೆಯಾಗಿರುವವು.


ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯೀಮ್, ಚೋಗರೆಂಬ ಬೇಲಗ್ ಈ ಪಟ್ಟಣಗಳ ರಾಜರು ಹೊರಟು ಅವರಿಗೆದುರಾಗಿ,


ಅದರ ಮುಂಗಡೆ ಬೆಂಕಿಯು ನುಂಗಿಕೊಂಡು ಬರುತ್ತದೆ, ಹಿಂಗಡೆ ಜ್ವಾಲೆಯು ಧಗಧಗಿಸುತ್ತದೆ; ಅದು ಬರುವದಕ್ಕೆ ಮುಂಚೆ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ದಾಟಿಹೋದ ಮೇಲೆ ಬೆಗ್ಗಾಡಾಗಿದೆ; ಅದಕ್ಕೆ ಯಾವದೂ ತಪ್ಪಿಸಿಕೊಳ್ಳಲಾರದು.


ಈಗ ಲವಣಸಮುದ್ರವಾಗಿರುವ ಸಿದ್ದೀಮ್ ತಗ್ಗಿನೊಳಗೆ ಕೂಡಿದ್ದ ಸೊದೋವಿುನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯೀವಿುನ ಅರಸನಾದ ಶೆಮೇಬರನು, ಬೇಲಗಿನ ಅಂದರೆ ಚೋಗರದ ಅರಸನು ಇವರೊಡನೆ ಯುದ್ಧಮಾಡಿದರು.


ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದಿ; ಮಾಣಿಕ್ಯ ಪುಷ್ಯರಾಗ ಪಚ್ಚೆ ಪೀತರತ್ನ ಬೆರುಲ್ಲ ವೈಡೂರ್ಯ ನೀಲಕೆಂಪರಲು ಸ್ಫಟಿಕ ಈ ನವರತ್ನಗಳಿಂದ ಭೂಷಿತವಾಗಿದ್ದಿ; ನಿನ್ನಲ್ಲಿನ [ಈ ರತ್ನಗಳ] ಗೂಡುಗಳೂ ಮನೆಗಳೂ ಸುವರ್ಣ ರಚಿತವಾಗಿದ್ದವು; ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ಅರಸನು ಯೊರ್ದನಿನ ತಗ್ಗಿನಲ್ಲಿ ಸುಕ್ಕೋತಿಗೂ ಚಾರೆತಾನಿಗೂ ಮಧ್ಯದಲ್ಲಿರುವ ಮಣ್ಣುನೆಲದಲ್ಲಿ ಎರಕಹೊಯ್ಸಿದನು.


ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮುಚ್ಚಲಾರದೆ ಹೋದವು; ತುರಾಯಿಮರಗಳು ಅದರ ರೆಂಬೆಗಳಷ್ಟು ಉದ್ದವಾಗಿರಲಿಲ್ಲ; ಅತ್ತಿಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ; ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ.


ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಅರಿಚಿಕೊಳ್ಳುತ್ತಾರೆ. ಚೋಯರಿನಿಂದ ಹೊರೊನಯಿವಿುನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.


ನನ್ನ ಹೃದಯವು ಮೋವಾಬಿನ ನಿವಿುತ್ತವಾಗಿ ಮೊರೆಯಿಡುತ್ತದೆ; ಅಲ್ಲಿಂದ ಪಲಾಯನವಾದವರು ಚೋಯರಿಗೂ ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀಥ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿವಿುನ ದಾರಿಯಲ್ಲಿ ನಡೆಯುತ್ತಾ ನಾಶನವಾದೆವಲ್ಲಾ ಎಂದು ದನಿಗೈಯುತ್ತಾರೆ.


ಬುಗ್ಗೆಗಳನ್ನು ಒಣನೆಲವಾಗುವಂತೆಯೂ ಫಲಭೂವಿುಯನ್ನು ಉಪ್ಪುನೆಲವಾಗುವಂತೆಯೂ ಮಾಡಿದನು.


ದೇವಪುತ್ರರು ಮನುಷ್ಯಪುತ್ರಿಯರ ಸೌಂದರ್ಯವನ್ನು ನೋಡಿ ತಮಗೆ ಇಷ್ಟರಾದವರನ್ನು ಹೆಂಡರನ್ನಾಗಿ ಮಾಡಿಕೊಂಡರು.


ಆಗ ಸ್ತ್ರೀಯು - ಆ ಮರದ ಹಣ್ಣು ತಿನ್ನುವದಕ್ಕೆ ಉತ್ತಮವಾಗಿಯೂ ನೋಡುವದಕ್ಕೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು. ಸಂಗಡ ಇದ್ದ ಗಂಡನಿಗೂ ಕೊಡಲು ಅವನೂ ತಿಂದನು.


ತೆರಹನ ವಂಶದವರ ಚರಿತ್ರೆ. ತೆರಹನು ಅಬ್ರಾಮ ನಾಹೋರ ಹಾರಾನರನ್ನು ಪಡೆದನು.


ದೇಶವೆಲ್ಲಾ ನಿನ್ನೆದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು ಎಂದು ಹೇಳಿದನು.


ಆದದರಿಂದ ಲೋಟನು ಯೊರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆದುಕೊಂಡು ಮೂಡಣ ಕಡೆಗೆ ಹೊರಟನು. ಹೀಗೆ ಅವರಿಬ್ಬರೂ ಪ್ರತ್ಯೇಕವಾದರು;


ಅದರೊಳಗಣ ಉತ್ತಮಭಾಗದಲ್ಲಿ ನಿನ್ನ ತಂದೆಗೂ ನಿನ್ನ ಅಣ್ಣತಮ್ಮಂದಿರಿಗೂ ವಾಸಸ್ಥಾನವನ್ನು ನೇವಿುಸಬಹುದು. ಅವರು ಗೋಷೆನ್ ಸೀಮೆಯಲ್ಲಿ ವಾಸಮಾಡಲಿ; ಅವರಲ್ಲಿ ಯಾರಾದರೂ ಯೋಗ್ಯರಾಗಿ ತೋರಿದರೆ ಅವರನ್ನು ನನ್ನ ದನಗಳ ಮೇಲ್ವಿಚಾರಣೆಗೆ ನೇವಿುಸು ಎಂದು ಹೇಳಿದನು.


ಓಹೋ, ಹೊಳೆಯು ಹೊಡೆದರೂ ಅದು ಹೆದರುವದಿಲ್ಲ. ಪ್ರವಾಹವು ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವದು.


ನಿನ್ನೆಡಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸಮಾರ್ಯ ನಿನ್ನ ಅಕ್ಕ, ಬಲಗಡೆಯಲ್ಲಿ ಕುಮಾರ್ತೆಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.


ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವದು, ಹೊಟ್ಟೆತುಂಬಿಸಿಕೊಳ್ಳುವದು, ಸ್ವಸುಖದಲ್ಲಿ ಮುಳುಗಿರುವದು, ಇವು ಆಕೆಯಲ್ಲಿಯೂ ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.


ನಾನು ಅದನ್ನು ಬಹು ಶಾಖೋಪಶಾಖೆಗಳಿಂದ ಅಂದಗೊಳಿಸಿದೆನು; ದೇವರ ಉದ್ಯಾನವಾದ ಏದೆನಿನ ಸಕಲವೃಕ್ಷಗಳೂ ಅದಕ್ಕೆ ಅಸೂಯೆಪಡುತ್ತಿದ್ದವು.


ಮೂಡಲಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯು ಎಲ್ಲೆಯಾಗಿರುವದು; [ಬಡಗಣ] ಮೇರೆಯಿಂದ ಮೂಡಣ ಸಮುದ್ರದವರೆಗೆ ನೀವು ಗುರುತು ಹಾಕಿಕೊಳ್ಳಬೇಕು. ಇದು ಮೂಡಣ ಮೇರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು