Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 13:15 - ಕನ್ನಡ ಸತ್ಯವೇದವು J.V. (BSI)

15 ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ನಂತರ ಜೀವಿಸುವ ನಿನ್ನ ಸಂತತಿಯವರಿಗೂ ಕೊಡುತ್ತೇನೆ. ಇದು ಎಂದೆಂದಿಗೂ ನಿನ್ನದಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ನೀನು ಕಾಣುವ ದೇಶವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 13:15
31 ತಿಳಿವುಗಳ ಹೋಲಿಕೆ  

ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಹೊರಡಿಸಿ ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಟ್ಟಿಯಲ್ಲಾ.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ನಾನು ಅಬ್ರಹಾಮ್ ಇಸಾಕರಿಗೆ ವಾಗ್ದಾನಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೂ ಕೊಡುವೆನು ಎಂದು ಹೇಳಿ


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು - ಐಗುಪ್ತದೇಶದ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ ಅಂದನು;


ಇದರಲ್ಲಿ ಅವನಿಗೆ ಕಾಲಿಡುವಷ್ಟು ಭೂವಿುಯನ್ನು ಸ್ವಾಸ್ತ್ಯವಾಗಿ ಕೊಡದೆ ಅವನಿಗೆ ಮಕ್ಕಳು ಇನ್ನೂ ಇಲ್ಲದಿರುವಾಗ - ಈ ದೇಶವನ್ನು ನಿನಗೂ ನಿನ್ನ ಹಿಂದೆ ಬರುವ ನಿನ್ನ ಸಂತತಿಗೂ ಸ್ವಾಸ್ತ್ಯವಾಗಿ ಕೊಡುವೆನು ಎಂದು ಅವನಿಗೆ ವಾಗ್ದಾನ ಮಾಡಿದನು.


ನೀತಿವಂತರೋ ದೇಶವನ್ನು ಅನುಭವಿಸುವವರಾಗಿ ಅದರಲ್ಲಿ ಶಾಶ್ವತವಾಗಿ ವಾಸಿಸುವರು.


ಯೆಹೋವನ ಆಶೀರ್ವಾದವು ಯಾರಿಗಿರುವದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವದೋ ಅವರು ತೆಗೆದುಹಾಕಲ್ಪಡುವರು.


ಶಾಂತರು ಧನ್ಯರು; ಅವರು ಭೂವಿುಗೆ ಬಾಧ್ಯರಾಗುವರು.


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ಸಮಸ್ತ ಕಾನಾನ್‍ದೇಶವೇ ನಿಮಗೆ ಸ್ವದೇಶವಾಗುವದಕ್ಕೆ ದೊರಕುವಂಥದು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಐಗುಪ್ತದೇಶದಿಂದ ಕರತಂದ ಜನರನ್ನು ನಿನ್ನ ಸಂಗಡ ಕರಕೊಂಡು ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ - ನಿಮ್ಮ ಸಂತತಿಯವರಿಗೆ ಕೊಡುವೆನೆಂದು ಪ್ರಮಾಣ ಮಾಡಿ ಕೊಟ್ಟ ದೇಶಕ್ಕೆ ಹೊರಟುಹೋಗು.


ನಾನು ನಿನ್ನನ್ನು ಅಭಿವೃದ್ಧಿಪಡಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು; ಅನೇಕ ಜನಾಂಗಗಳು ನಿನ್ನಿಂದುಂಟಾಗುವಂತೆ ಮಾಡುವೆನು; ನಿನ್ನ ತರುವಾಯ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಡುವೆನು ಎಂದು ಹೇಳಿದನು.


ಇದಲ್ಲದೆ ಯೆಹೋವನು ಅವನ ಬಳಿಯಲ್ಲಿ ನಿಂತು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಯೆಹೋವನು. ನೀನು ಮಲಗಿಕೊಂಡಿರುವ ಈ ದೇಶವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಆತನು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಟ್ಟು ತಾನು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದೂ ನೀನು ಪ್ರವಾಸವಾಗಿರುವಂಥದೂ ಆಗಿರುವ ಈ ದೇಶವನ್ನು ನೀನು ಬಾಧ್ಯನಾಗಿ ಹೊಂದುವಂತೆ ಮಾಡಲಿ ಎಂದು ಹೇಳಿ ಆಶೀರ್ವದಿಸಿ ಕಳುಹಿಸಿಬಿಟ್ಟನು.


ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು - ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನೆಂದು ಪ್ರಮಾಣಮಾಡಿ ಹೇಳಿದ ಪರಲೋಕದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಳ್ಳುವಂತೆ ಅನುಕೂಲಮಾಡುವನು.


ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ [ನಿನ್ನ ಸ್ವಾಸ್ತ್ಯವನ್ನು] ಅನುಭವಿಸುತ್ತಿದ್ದರು; ಈಗ ನಮ್ಮ ವೈರಿಗಳು ನಿನ್ನ ಪವಿತ್ರಾಲಯವನ್ನು ತುಳಿದುಬಿಟ್ಟಿದ್ದಾರೆ.


ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ಹೊಳೆದಾಟಿ ಅಲ್ಲಿಗೆ ಹೋಗಕೂಡದೆಂದು ಹೇಳಿದನು.


ಅವನಿಂದ ಬಲಿಷ್ಠವಾದ ಮಹಾಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂವಿುಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವದಲ್ಲಾ;


ನೀನೆದ್ದು ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು ಎಂದು ಹೇಳಿದನು.


ಆಮೇಲೆ ಆತನು ಅವನಿಗೆ - ಈ ದೇಶದ ಬಾಧ್ಯತೆಯನ್ನು ನಿನಗೆ ಕೊಡುವದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನೇ ನಾನು ಎಂದು ಹೇಳಲು ಅವನು -


ನಿನ್ನ ಸಂತತಿಯು ಭೂವಿುಯ ಧೂಳಿನಂತೆ ಅಸಂಖ್ಯವಾಗುವದು; ನೀನು ಪೂರ್ವಪಶ್ಚಿಮದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವಿ. ನಿನ್ನ ಮೂಲಕವೂ ನಿನ್ನ ಸಂತತಿಯ ಮೂಲಕವೂ ಭೂವಿುಯ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು.


ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ - ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣವಾಗಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನೆಂದು ತಿಳಿದುಕೊಳ್ಳಿರಿ ಎಂದು ಹೇಳಿದನು.


ನಿನ್ನ ಸೇವಕರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣಮಾಡಿ ಅವರಿಗೆ - ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನೆಂದೂ ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಅವರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರೆಂದೂ ಮಾತುಕೊಡಲಿಲ್ಲವೇ ಅಂದನು.


ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.


ನೀವು ಇನ್ನೂ ಬಹು ಸ್ವಲ್ಪ ಜನರೂ ಕಾನಾನ್ ದೇಶದಲ್ಲಿ ಪ್ರವಾಸಿಗಳೂ ಆಗಿರುವಾಗಲೇ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು