Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:18 - ಕನ್ನಡ ಸತ್ಯವೇದವು J.V. (BSI)

18 ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು - ಐಗುಪ್ತದೇಶದ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ ಅಂದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:18
58 ತಿಳಿವುಗಳ ಹೋಲಿಕೆ  

ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು - ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನೆಂದು ಪ್ರಮಾಣಮಾಡಿ ಹೇಳಿದ ಪರಲೋಕದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಳ್ಳುವಂತೆ ಅನುಕೂಲಮಾಡುವನು.


ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ಇಸ್ರಾಯೇಲ್ಯರೇ, ತುಂಬಿತುಳುಕುವ [ಯೂಫ್ರೇಟೀಸ್] ನದಿಯಿಂದ ಐಗುಪ್ತ ದೇಶದ ನದಿಯವರೆಗೆ ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; ಆಗ ನಿನ್ನನ್ನು ಒಬ್ಬೊಬ್ಬರನ್ನಾಗಿ ಆರಿಸುವನು.


ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ - ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದೀ; ನೀನು ಧರ್ಮಸ್ವರೂಪನೇ.


ನೀವು ಹೆಜ್ಜೆಯಿಡುವ ಎಲ್ಲಾ ಸ್ಥಳಗಳೂ ನಿಮಗಾಗುವವು; ಅರಣ್ಯ ಮೊದಲುಗೊಂಡು ಲೆಬನೋನ್ ಪರ್ವತದವರೆಗೂ ಮತ್ತು ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ಸೀಮೆ ವ್ಯಾಪಿಸುವದು.


ಅಲ್ಲಿಂದ ಅದು ಹಚರದ್ದಾರ್, ಅಚ್ಮೋನ್ ಎಂಬ ಊರುಗಳ ಮೇಲೆ ಐಗುಪ್ತದೇಶದ ಮುಂದಿರುವ ಹಳ್ಳಕ್ಕೆ ಬಂದು ಸಮುದ್ರದ ದಡದಲ್ಲಿ ಮುಗಿಯಬೇಕು.


ಶಾಶ್ವತವಾದ ಒಡಂಬಡಿಕೆಯನ್ನು ನಿಶ್ಚಯಪಡಿಸುವದಕ್ಕಾಗಿ ತನ್ನ ರಕ್ತವನ್ನು ಸುರಿಸಿಕೊಂಡು ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ ಶಾಂತಿದಾಯಕನಾದ ದೇವರು,


ನಾನು ನಿಮಗೆ ಹಿತಮಾಡುವದನ್ನು ಬಿಟ್ಟು ವಿಮುಖನಾಗೆನು ಎಂಬುವ ಶಾಶ್ವತವಾದ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳುವೆನು; ಅವರು ನನ್ನಿಂದಗಲದಂತೆ ಅವರ ಹೃದಯದೊಳಗೆ ನನ್ನ ಮೇಲಣ ಭಯಭಕ್ತಿಯನ್ನು ನೆಲೆಗೊಳಿಸುವೆನು.


ಅವನು ಯೂಫ್ರೇಟೀಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜರನ್ನು ಆಳುತ್ತಿದ್ದನು.


ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ಹೊಳೆದಾಟಿ ಅಲ್ಲಿಗೆ ಹೋಗಕೂಡದೆಂದು ಹೇಳಿದನು.


ನನ್ನ ದೂತನು ನಿಮ್ಮ ಮುಂದೆ ಮುಂದೆ ನಡೆದು ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿಯರೂ ಇರುವ ದೇಶಕ್ಕೆ ನಿಮ್ಮನ್ನು ಸೇರಿಸುವನು; ಅವರನ್ನಾದರೋ ನಾನು ನಿರ್ಮೂಲಮಾಡುವೆನು.


ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞಾನೇಮವಿಧಿಗಳನ್ನು ಕೈಕೊಂಡು ನಡೆದದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಿ


ಸೊಲೊಮೋನನು ಯೂಫ್ರೇಟೀಸ್‍ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕೊಡುತ್ತಿದ್ದರು.


ಅವರು ಇನ್ನೂ ಬಹು ಸ್ವಲ್ಪ ಜನರೂ ಕಾನಾನ್‍ದೇಶದಲ್ಲಿ ಪ್ರವಾಸಿಗಳೂ ಆಗಿರುವಾಗಲೇ


ಅಚ್ಮೋನಿನ ಮೇಲೆ ಐಗುಪ್ತದ ಹಳ್ಳಕ್ಕೆ ಬಂದು ಸಮುದ್ರತೀರದಲ್ಲಿ ಮುಗಿಯುವದು. ಇದು ಅದರ ತೆಂಕಣ ಮೇರೆ.


ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿ ಸಂಖ್ಯೆಯಲ್ಲಿಯೂ ಬಲದಲ್ಲಿಯೂ ನಿಮಗೆ ಮೀರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಎಂಬ ಏಳು ಜನಾಂಗಗಳನ್ನು


ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ - ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣವಾಗಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನೆಂದು ತಿಳಿದುಕೊಳ್ಳಿರಿ ಎಂದು ಹೇಳಿದನು.


ನಾನು ಅಬ್ರಹಾಮ್ ಇಸಾಕರಿಗೆ ವಾಗ್ದಾನಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೂ ಕೊಡುವೆನು ಎಂದು ಹೇಳಿ


ಆತನು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಟ್ಟು ತಾನು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದೂ ನೀನು ಪ್ರವಾಸವಾಗಿರುವಂಥದೂ ಆಗಿರುವ ಈ ದೇಶವನ್ನು ನೀನು ಬಾಧ್ಯನಾಗಿ ಹೊಂದುವಂತೆ ಮಾಡಲಿ ಎಂದು ಹೇಳಿ ಆಶೀರ್ವದಿಸಿ ಕಳುಹಿಸಿಬಿಟ್ಟನು.


ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನೂ ಕಾನಾನ್ಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿಮ್ಮ ಮುಂದೆ ಹೊರಡಿಸುವೆನು.


ನಾನು ಅವರಿಗೆ - ನೀವು ಪ್ರವಾಸವಾಗಿರುವ ಕಾನಾನ್ ದೇಶವನ್ನು ನಿಮಗೇ ಕೊಡುವೆನೆಂಬದಾಗಿ ದೃಢವಾಗಿ ವಾಗ್ದಾನ ಮಾಡಿದೆನಷ್ಟೆ.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.


ಮೂಡಣದಿಕ್ಕಿನಲ್ಲಿ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅರಣ್ಯವು ಇವರ ಮೇರೆ.


ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಸ್ಥಿರವಾಗಿರುತ್ತದಲ್ಲವೋ? ಆತನು ನನ್ನೊಡನೆ ಒಡಂಬಡಿಕೆಮಾಡಿಕೊಂಡಿದ್ದಾನೆ; ಅದು ಎಂದಿಗೂ ಬಿದ್ದು ಹೋಗುವದಿಲ್ಲ, ಎಲ್ಲಾ ವಿಷಯಗಳಲ್ಲಿ ಖಂಡಿತವಾಗಿದೆ. ನನ್ನ ರಕ್ಷಣೆಯ ಮೂಲವೂ ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?


ಮೂರನೆಯ ನದಿಯ ಹೆಸರು ಹಿದ್ದೆಕೆಲ್; ಅದು ಅಶ್ಶೂರ್ ದೇಶದ ಮುಂದೆ ಹರಿಯುವದು. ನಾಲ್ಕನೆಯದು ಯೂಫ್ರೇಟೀಸ್ ನದಿ.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ; ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ದಾವೀದನು ಯೂಫ್ರೇಟೀಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿ


ಇದರಲ್ಲಿ ಅವನಿಗೆ ಕಾಲಿಡುವಷ್ಟು ಭೂವಿುಯನ್ನು ಸ್ವಾಸ್ತ್ಯವಾಗಿ ಕೊಡದೆ ಅವನಿಗೆ ಮಕ್ಕಳು ಇನ್ನೂ ಇಲ್ಲದಿರುವಾಗ - ಈ ದೇಶವನ್ನು ನಿನಗೂ ನಿನ್ನ ಹಿಂದೆ ಬರುವ ನಿನ್ನ ಸಂತತಿಗೂ ಸ್ವಾಸ್ತ್ಯವಾಗಿ ಕೊಡುವೆನು ಎಂದು ಅವನಿಗೆ ವಾಗ್ದಾನ ಮಾಡಿದನು.


ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ - ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಯಲ್ಲಿ ಕಟ್ಟಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು ಎಂದು ಹೇಳಿತು.


ಇದಲ್ಲದೆ ಅಬ್ರಹಾಮ ಇಸಾಕ ಯಾಕೋಬರಿಗೆ ಕೊಡುವೆನೆಂದು ನಾನು ಪ್ರಮಾಣವಾಗಿ ಹೇಳಿದ ದೇಶಕ್ಕೆ ನಿಮ್ಮನ್ನು ಸೇರಿಸಿ ಅದನ್ನು ನಿಮಗೆ ಸ್ವದೇಶವನ್ನಾಗಿ ಕೊಡುವೆನು; ಯೆಹೋವನೇ ನಾನು; ಹೀಗೆ ಅವರಿಗೆ ಹೇಳು ಅಂದನು.


ಯೆಹೋವನು ತಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಪ್ರಮಾಣವಚನದ ಮೇರೆಗೆ ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಆ ದೇಶವನ್ನು ನಿಮಗೆ ಕೊಟ್ಟ ನಂತರ


ನಿನ್ನ ಸೇವಕರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣಮಾಡಿ ಅವರಿಗೆ - ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನೆಂದೂ ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಅವರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರೆಂದೂ ಮಾತುಕೊಡಲಿಲ್ಲವೇ ಅಂದನು.


ನಿಮ್ಮ ದೇವರಾದ ಯೆಹೋವನು ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು ಮಾಂಸಾಹಾರವನ್ನು ಮಾಡುವದಕ್ಕೆ ಇಷ್ಟಪಟ್ಟರೆ ಮಾಡಬಹುದು.


ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸುವವರಾಗಿ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನು ಹೇಳುವ ಮಾರ್ಗದಲ್ಲೇ ಯಾವಾಗಲೂ ನಡೆದರೆ ಆತನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ ತಾನು ನಿಮ್ಮ ಪಿತೃಗಳಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವನು. ಆಗ ಈ ಮೂರು ಪಟ್ಟಣಗಳನ್ನಲ್ಲದೆ ಇನ್ನು ಮೂರು ಪಟ್ಟಣಗಳನ್ನು ಗೊತ್ತುಮಾಡಬೇಕು.


ಈ ಪ್ರಕಾರ ಸೊಲೊಮೋನನೂ ಹಮಾತಿನ ದಾರಿಯಿಂದ ಐಗುಪ್ತದ ಹಳ್ಳದವರೆಗಿರುವ ಪ್ರಾಂತಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲ್ಯರೂ ಅದೇ ಕಾಲದಲ್ಲಿ ಏಳು ದಿನಗಳವರೆಗೂ [ಪರ್ಣಶಾಲೆಗಳ] ಜಾತ್ರೆ ನಡಿಸಿದರು.


ಇದಲ್ಲದೆ ಇಸ್ರಾಯೇಲ್ಯರಿಂದ ಸಂಹೃತರಾಗದೆ ಕಾನಾನ್ ದೇಶದಲ್ಲಿ ಉಳಿದ ಹಿತ್ತಿಯ ಅಮೋರಿಯ ಪೆರಿಜೀಯ ಹಿವ್ವಿಯ ಯೆಬೂಸಿಯ ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನೂ [ತನ್ನ ಕೆಲಸಕ್ಕಾಗಿ] ಬಿಟ್ಟಿ ಹಿಡಿದನು.


ಇದ್ದದ್ದಲ್ಲದೆ ಯೆರೂಸಲೇವಿುನಲ್ಲಿ ಬಲಿಷ್ಠ ರಾಜರು ಆಳುತ್ತಾ ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡಿಸುತ್ತಾ ಕಪ್ಪ ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂತು.


ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮ ಇಸಾಕ ಯಾಕೋಬರಿಗೆ ಮಾಡಿದ ವಾಗ್ದಾನವನ್ನು ನೆನಪಿಗೆ ತಂದುಕೊಂಡು


ನಾನು ನಿಮ್ಮ ಎದುರಿನಿಂದ ಅನ್ಯಜನಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ಅಷ್ಟೇ ಅಲ್ಲದೆ ನೀವು ವರುಷಕ್ಕೆ ಮೂರಾವರ್ತಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂವಿುಯನ್ನು ಅಪಹರಿಸುವದಕ್ಕೆ ಅಪೇಕ್ಷಿಸುವದಿಲ್ಲ.


ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ವಾಗ್ದಾನಗಳನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.


ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪಿತೃಗಳನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತ ದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು.


ದಾವೀದನ ಜೀವಮಾನದಲ್ಲೆಲ್ಲಾ ಅವನ ವಿುತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ತಂದೆಗೆ ಬದಲಾಗಿ ಅಭಿಷೇಕಿಸಲ್ಪಟ್ಟನೆಂದು ಕೇಳಿದಾಗ ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.


ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ಆಣೆಯಿಟ್ಟನು.


ಅವರ ಪಿತೃಗಳಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು