Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 15:7 - ಕನ್ನಡ ಸತ್ಯವೇದವು J.V. (BSI)

7 ಆಮೇಲೆ ಆತನು ಅವನಿಗೆ - ಈ ದೇಶದ ಬಾಧ್ಯತೆಯನ್ನು ನಿನಗೆ ಕೊಡುವದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನೇ ನಾನು ಎಂದು ಹೇಳಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಂತರ ಆತನು ಅಬ್ರಾಮನಿಗೆ, “ಈ ದೇಶವನ್ನು ನಿನಗೆ ಬಾಧ್ಯಸ್ಥವಾಗಿ ಕೊಡುವುದಕ್ಕೋಸ್ಕರ ನಿನ್ನನ್ನು ಊರ್ ಎಂಬ ಕಲ್ದೀಯರ ಪಟ್ಟಣದಿಂದ ಬರಮಾಡಿದ ಯೆಹೋವನು ನಾನೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸವೇಶ್ವರ ಬಳಿಕ ಅಬ್ರಾಮನಿಗೆ ಇಂತೆಂದರು: “ಈ ನಾಡನ್ನು ನಿನಗೆ ಸೊತ್ತಾಗಿ ಕೊಡಬೇಕೆಂದು ಬಾಬಿಲೋನಿನಲ್ಲಿರುವ ಊರ್ ಪಟ್ಟಣದಿಂದ ನಿನ್ನನ್ನು ಬರಮಾಡಿದ ಸರ್ವೇಶ್ವರ ನಾನೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆತನು ಅಬ್ರಾಮನಿಗೆ, “ಯೆಹೋವನಾದ ನಾನು ನಿನ್ನನ್ನು ಕಲ್ದೀಯರ ಊರ್ ಪಟ್ಟಣದಿಂದ ಬರಮಾಡಿದೆನು. ನಿನಗೆ ಈ ದೇಶವನ್ನು ಕೊಡಬೇಕೆಂತಲೂ ನೀನು ಈ ದೇಶವನ್ನು ಹೊಂದಿಕೊಳ್ಳಬೇಕೆಂತಲೂ ನಾನು ನಿನ್ನನ್ನು ಬರಮಾಡಿದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ಅವನಿಗೆ, “ಈ ದೇಶವನ್ನು ಸೊತ್ತಾಗಿ ನಿನಗೆ ಕೊಡಲು, ಕಸ್ದೀಯರ ಊರ್ ಎಂಬ ಪ್ರದೇಶದಿಂದ ನಿನ್ನನ್ನು ಹೊರಗೆ ತಂದ ಯೆಹೋವ ದೇವರು ನಾನೇ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 15:7
16 ತಿಳಿವುಗಳ ಹೋಲಿಕೆ  

ಯೆಹೋವನು ಅಬ್ರಾಮನಿಗೆ - ನೀನು ಸ್ವದೇಶವನ್ನೂ ಬಂಧು ಬಳಗವನ್ನೂ ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು.


ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ. ನಂಬಿಕೆಯೆಂಬ ನೀತಿಯಿಂದ ಆದದ್ದೇ.


ಮತ್ತು ಆತನು ಅವರಿಗೆ ಪರಜನರ ದೇಶಗಳನ್ನು ಕೊಟ್ಟನು; ಅನ್ಯಜನಾಂಗಗಳ ಕಷ್ಟಾರ್ಜಿತವು ಅವರಿಗೆ ಕೈ ಸೇರಿತು.


ಹೀಗೆ ಆತನು ತನ್ನ ಪರಿಶುದ್ಧವಚನವನ್ನೂ ತನ್ನ ಸೇವಕನಾದ ಅಬ್ರಹಾಮನನ್ನೂ ನೆನಪುಮಾಡಿಕೊಂಡು


ಅವರು ಇನ್ನೂ ಬಹು ಸ್ವಲ್ಪ ಜನರೂ ಕಾನಾನ್‍ದೇಶದಲ್ಲಿ ಪ್ರವಾಸಿಗಳೂ ಆಗಿರುವಾಗಲೇ


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ಆತನು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಟ್ಟು ತಾನು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದೂ ನೀನು ಪ್ರವಾಸವಾಗಿರುವಂಥದೂ ಆಗಿರುವ ಈ ದೇಶವನ್ನು ನೀನು ಬಾಧ್ಯನಾಗಿ ಹೊಂದುವಂತೆ ಮಾಡಲಿ ಎಂದು ಹೇಳಿ ಆಶೀರ್ವದಿಸಿ ಕಳುಹಿಸಿಬಿಟ್ಟನು.


ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ - ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣವಾಗಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನೆಂದು ತಿಳಿದುಕೊಳ್ಳಿರಿ ಎಂದು ಹೇಳಿದನು.


ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.


ನಿನ್ನ ಸೇವಕರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣಮಾಡಿ ಅವರಿಗೆ - ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನೆಂದೂ ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಅವರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರೆಂದೂ ಮಾತುಕೊಡಲಿಲ್ಲವೇ ಅಂದನು.


ನಾನು ನಿಮಗೇ ಆ ದೇಶವನ್ನು ಸ್ವದೇಶವಾಗುವದಕ್ಕೆ ಕೊಟ್ಟದರಿಂದ ನೀವು ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಬೇಕು.


ಆ ಕಾಲದಲ್ಲಿ ನಾನು ನಿಮಗೆ - ನಿಮ್ಮ ದೇವರಾದ ಯೆಹೋವನು ಈ ಪ್ರದೇಶವನ್ನೇ ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದಾನೆ. ಆದರೆ ನಿಮ್ಮ ಭಟರೆಲ್ಲರೂ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಾಯೇಲ್ಯರ ಮುಂದೆ ಹೊರಟು ಹೊಳೇ ದಾಟಿ ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು