Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:10 - ಕನ್ನಡ ಸತ್ಯವೇದವು J.V. (BSI)

10 ಅದಲ್ಲದೆ ಯೆಹೋವನ ದೂತನು ಅವಳಿಗೆ - ನಿನಗೆ ಬಹುಸಂತಾನವಾಗ ಮಾಡುವೆನು; ಅದು ಲೆಕ್ಕಿಸಕೂಡದಷ್ಟು ಅಪರಿವಿುತವಾಗುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಲ್ಲದೆ ಯೆಹೋವನ ದೂತನು ಅವಳಿಗೆ, “ನಿನಗೆ ಬಹುಸಂತಾನವಾಗುವಂತೆ ಮಾಡುವೆನು; ನಿನ್ನ ಸಂತತಿಯು ಲೆಕ್ಕಿಸಲಾಗದಷ್ಟು ಹೆಚ್ಚಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದೂ ಅಲ್ಲದೆ ಸ್ವಾಮಿಯ ದೂತನು, “ನಿನ್ನ ಸಂತಾನವನ್ನು ಲೆಕ್ಕಿಸಲಾಗದಷ್ಟು ದೊಡ್ಡದಾಗಿಸುವೆನು”, ಎಂದು ಹೇಳಿ ಇಂತೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇದಲ್ಲದೆ ಯೆಹೋವನ ದೂತನು ಹಾಗರಳಿಗೆ, “ನಾನು ನಿನ್ನ ಸಂತತಿಯವರನ್ನು ಅಸಂಖ್ಯಾತರನ್ನಾಗಿ ಮಾಡುವೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಯೆಹೋವ ದೇವರ ದೂತನು ಅವಳಿಗೆ, “ನಿನ್ನ ಸಂತಾನವನ್ನು ಲೆಕ್ಕಿಸಲಾಗದಷ್ಟು ಹೆಚ್ಚಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:10
25 ತಿಳಿವುಗಳ ಹೋಲಿಕೆ  

ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. ಅವನು ಹನ್ನೆರಡು ಮಂದಿ ಅರಸರನ್ನು ಪಡೆಯುವನು; ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು.


ನೀನೆದ್ದು ಅವನನ್ನು ಎತ್ತಿಕೊಂಡು ಕೈಬಿಡದೆ ಇರು; ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು ಎಂದು ಹೇಳಿದನು.


ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದ್ದರಿಂದ ಅವನಿಂದಲೂ ಜನಾಂಗವಾಗುವಂತೆ ಮಾಡುವೆನು ಎಂದು ಹೇಳಿದನು.


ದೇವರನ್ನು ಯಾರೂ ಎಂದೂ ಕಂಡಿಲ್ಲ; ಯಾವನು ಏಕಪುತ್ರನೂ ಸ್ವತಃ ದೇವರೂ ಆಗಿದ್ದು ತಂದೆಯ ಎದೆಯಲ್ಲಿದ್ದಾನೋ ಆತನೇ ತಿಳಿಯಪಡಿಸಿದನು.


ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಫಕ್ಕನೆ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಐತರುತ್ತಾನೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಯೆಹೋವನು ಅವನಿಗೆ - ನಾನು ನಿನ್ನ ಸಂಗಡ ಇರುವದರಿಂದ ನೀನು ವಿುದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸಂಹರಿಸಿಬಿಡುವಿ ಅಂದನು.


ಆಮೇಲೆ ಯೆಹೋವನ ದೂತನು ಬಂದು ಒಫ್ರದಲ್ಲಿದ್ದ ಏಲಾವೃಕ್ಷದ ಅಡಿಯಲ್ಲಿ ಕೂತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗನಾದ ಗಿದ್ಯೋನನು ವಿುದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿನ ದ್ರಾಕ್ಷೆಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.


ಮಗುವು ಸಾಯುವದನ್ನು ನೋಡಲಾರೆನು ಅಂದುಕೊಂಡು ಬಿಲ್ಲೆಸುಗೆಯಷ್ಟು ದೂರ ಹೋಗಿ ಅವನೆದುರಾಗಿ ಕೂತುಕೊಂಡು ಗಟ್ಟಿಯಾಗಿ ಅತ್ತಳು.


ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ; ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು; ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಇರಲಿ. ಆಮೆನ್.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ನಿನ್ನ ಸಂತಾನದವರನ್ನು ಭೂವಿುಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂವಿುಯಲ್ಲಿರುವ ಧೂಳನ್ನು ಲೆಕ್ಕಮಾಡುವದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಲಾದೀತು.


ಅದಕ್ಕೆ ಯೆಹೋವನ ದೂತನು - ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ತಗ್ಗಿ ನಡೆದುಕೋ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು