Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:5 - ಕನ್ನಡ ಸತ್ಯವೇದವು J.V. (BSI)

5 ಆಗ ಸಾರಯಳು ಅಬ್ರಾಮನಿಗೆ - ನನ್ನ ಗೋಳು ನಿನಗೆ ತಗಲಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಾಳೆ; ನಿನಗೂ ನನಗೂ ಯೆಹೋವನೇ ನ್ಯಾಯತೀರಿಸಲಿ ಎಂದು ಹೇಳಲು ಅಬ್ರಾಮನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಸಾರಯಳು ಅಬ್ರಾಮನಿಗೆ, “ನನ್ನ ಗೋಳು ನಿನಗೆ ತಟ್ಟಲಿ; ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಒಪ್ಪಿಸಿದೆನಷ್ಟೆ; ಅವಳು ತಾನು ಬಸುರಾದೆನೆಂದು ತಿಳಿದು ನನ್ನನ್ನು ತಾತ್ಸಾರಮಾಡುತ್ತಿದ್ದಾಳೆ; ನಿನಗೂ ನನಗೂ ನಡುವೆ ಯೆಹೋವನೇ ನ್ಯಾಯತೀರಿಸಲಿ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಸಾರಯಳು ಅಬ್ರಾಮನಿಗೆ, “ನನಗೆ ಅನ್ಯಾಯವಾಗುತ್ತಿದೆ; ಇದಕ್ಕೆ ನೀವೇ ಹೊಣೆ, ನನ್ನ ದಾಸಿಯನ್ನು ನಿಮಗೆ ಉಪಪತ್ನಿಯಾಗಿ ಕೊಟ್ಟೆನಷ್ಟೆ; ಇವಳೋ, ತಾನು ಗರ್ಭಿಣಿಯಾದೆನೆಂದು ತಿಳಿದದ್ದೆ, ನನ್ನನ್ನು ತಾತ್ಸಾರ ಮಾಡುತ್ತಿದ್ದಾಳೆ; ಈಗ ಸರ್ವೇಶ್ವರ ಸ್ವಾಮಿಯೇ ನಿಮಗೂ ನನಗೂ ನ್ಯಾಯ ತೀರಿಸಬೇಕು,” ಎಂದು ದೂರಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಸಾರಯಳು ಅಬ್ರಾಮನಿಗೆ, “ನನ್ನ ಸಂಕಟಕ್ಕೆ ನೀನೇ ಕಾರಣ. ನಾನು ಅವಳನ್ನು ನಿನಗೆ ಕೊಟ್ಟೆನು. ಈಗ ಅವಳು ಗರ್ಭಿಣಿಯಾಗಿದ್ದಾಳೆ ಮತ್ತು ನನ್ನನ್ನೇ ಕಡೆಗಣಿಸುತ್ತಿದ್ದಾಳೆ. ಯೆಹೋವನೇ ನನಗೂ ನಿನಗೂ ನ್ಯಾಯ ತೀರಿಸಲಿ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸಾರಯಳು ಅಬ್ರಾಮನಿಗೆ, “ನನಗೆ ಆದ ಅನ್ಯಾಯಕ್ಕೆ ನೀನೇ ಹೊಣೆ. ನಾನು ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರಕ್ಕೆ ಯೋಗ್ಯಳಾದೆನು. ಯೆಹೋವ ದೇವರು ನಿನಗೂ ನನಗೂ ನ್ಯಾಯತೀರಿಸಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:5
12 ತಿಳಿವುಗಳ ಹೋಲಿಕೆ  

ಅಬ್ರಹಾಮ ನಾಹೋರರ ದೇವರು ಅಂದರೆ ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದನು. ಅದೇ ಮೇರೆಗೆ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.


ಫರೋಹನೂ ಅವನ ಸೇವಕರೂ ನಮ್ಮನ್ನು ನೋಡಿ ಹೇಸಿಕೊಳ್ಳುವಂತೆ ನೀವು ಮಾಡಿದಿರಿ; ನಮ್ಮನ್ನು ಸಂಹಾರಮಾಡುವದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟ ಹಾಗಾಯಿತು; ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ ಎಂದು ಹೇಳಿದರು.


ನನ್ನ ದೇವರೇ, ಎದ್ದು ನನಗಾಗಿ ನ್ಯಾಯವನ್ನು ನಿರ್ಣಯಿಸು; ನನ್ನ ಕರ್ತನೇ, ಎಚ್ಚತ್ತು ನನ್ನ ವಿವಾದವನ್ನು ವಿಚಾರಿಸು.


ಯೆಹೋವನು ಎಲ್ಲಾ ಜನಾಂಗಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.


ಇವನು ಜೆಕರೀಯನ ತಂದೆಯಾದ ಯೆಹೋಯಾದನಿಂದ ತನಗುಂಟಾದ ಕೃಪೆಯನ್ನು ನೆನಪುಮಾಡಿಕೊಳ್ಳದೆ ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ - ಯೆಹೋವನೇ ನೋಡಿ ವಿಚಾರಿಸಲಿ ಅಂದನು.


ದೇವರೇ, ನ್ಯಾಯವನ್ನು ನಿರ್ಣಯಿಸು; ನನಗೋಸ್ಕರ ವ್ಯಾಜ್ಯವನ್ನು ನಡಿಸಿ ನಿರ್ದಯವಾದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.


ಅವನು ಹಾಗರಳನ್ನು ಕೂಡಲು ಬಸುರಾದಳು. ತಾನು ಬಸುರಾದೆನೆಂದು ತಿಳುಕೊಂಡಾಗ ಅವಳು ಯಾಜಮಾನಿಯನ್ನು ತಾತ್ಸಾರ ಮಾಡಿದಳು.


ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದರಿಂದ ನೀನೇ ಅನ್ಯಾಯಮಾಡಿದ ಹಾಗಾಯಿತು. ನ್ಯಾಯಸ್ಥಾಪಕನಾದ ಯೆಹೋವನೇ ಈ ಹೊತ್ತು ಇಸ್ರಾಯೇಲ್ಯರಿಗೂ ಅಮ್ಮೋನಿಯರಿಗೂ ಮಧ್ಯದಲ್ಲಿ ನ್ಯಾಯತೀರಿಸಲಿ ಎಂದು ಹೇಳಿಸಿದನು.


ನಮ್ಮ ಪ್ರಾಣವನ್ನು ಹಿಂಸಿಸಿದ ದೋಷ ಬಾಬೆಲಿಗೆ ತಟ್ಟಲಿ ಎಂದು ಚೀಯೋನಿನವರು ಅನ್ನುತ್ತಾರೆ; ನಮ್ಮ ರಕ್ತವನ್ನು ಸುರಿಸಿದ ಅಪರಾಧವು ಕಸ್ದೀಯರಿಗೆ ಬಡಿಯಲಿ ಎಂದು ಯೆರೂಸಲೇವಿುನವರು ಹೇಳುತ್ತಾರೆ.


ದಾವೀದನ ಮಾತುಗಳು ಮುಗಿದನಂತರ ಸೌಲನು - ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ ಅಂದು ಗಟ್ಟಿಯಾಗಿ ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು