Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:6 - ಕನ್ನಡ ಸತ್ಯವೇದವು J.V. (BSI)

6 ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳೆ; ಮನಸ್ಸುಬಂದಂತೆ ಮಾಡು ಅಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅಬ್ರಾಮನು, “ನಿನ್ನ ದಾಸಿಯು ನಿನ್ನ ಕೈಯಲ್ಲೇ ಇದ್ದಾಳಲ್ಲಾ; ನಿನ್ನಗೆ ಮನಸ್ಸು ಬಂದಂತೆ ಮಾಡು” ಎಂದನು. ಆಗ ಸಾರಯಳು ಅವಳನ್ನು ಬಾಧಿಸಲು ಅವಳು ಓಡಿಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದಕ್ಕೆ ಅಬ್ರಾಮನು, “ನಿನ್ನ ದಾಸಿ ನಿನ್ನ ಕೈಯಲ್ಲೇ ಇದ್ದಾಳೆ. ನಿನಗಿಷ್ಟ ಬಂದಂತೆ ಮಾಡು,” ಎಂದುಬಿಟ್ಟನು. ಬಳಿಕ ಸಾರಯಳು ಕೊಡುತ್ತಿದ್ದ ಕಿರುಕುಳವನ್ನು ತಾಳಲಾರದೆ ಹಾಗರಳು ಓಡಿಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅದಕ್ಕೆ ಅಬ್ರಾಮನು ಸಾರಯಳಿಗೆ, “ನೀನು ಹಾಗರಳ ಯಜಮಾನಿ. ನೀನು ಅವಳಿಗೆ ಏನುಬೇಕಾದರೂ ಮಾಡಬಹುದು” ಎಂದು ಹೇಳಿದನು. ಆದ್ದರಿಂದ ಸಾರಯಳು ಹಾಗರಳನ್ನು ಶಿಕ್ಷಿಸಿದಳು. ಆಗ ಹಾಗರಳು ಓಡಿಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಅಬ್ರಾಮನು ಸಾರಯಳಿಗೆ, “ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ. ನಿನ್ನ ಮನಸ್ಸಿಗೆ ಬಂದಂತೆ ಮಾಡು,” ಎಂದನು. ಆಗ ಸಾರಯಳು ಹಾಗರಳನ್ನು ಬಾಧಿಸಿದ್ದರಿಂದ, ಅವಳು ಸಾರಯಳಿಂದ ಓಡಿ ಹೋದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:6
15 ತಿಳಿವುಗಳ ಹೋಲಿಕೆ  

ಅದಕ್ಕೆ ಅರಸನಾದ ಚಿದ್ಕೀಯನು - ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡ ಬಂದು ಏನೂ ಮಾಡಬಲ್ಲವನಲ್ಲ ಎಂದು ಹೇಳಲು


ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಪುರುಷನಿಗಿಂತ ಬಲಹೀನಳೆಂಬದನ್ನು ಜ್ಞಾಪಕಮಾಡಿಕೊಂಡು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಒಗತನ ಮಾಡಿರಿ. ಅವರು ಜೀವವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.


ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ; ತಾಳ್ಮೆಯು ದೊಡ್ಡ ದೋಷಗಳನ್ನು ಅಡಗಿಸುತ್ತದಲ್ಲವೆ.


ಆಳು ಮಾತಿನಿಂದ ಮಾತ್ರ ಶಿಕ್ಷಿತನಾಗಲಾರನು; ಅವನು ತಿಳಿದುಕೊಂಡರೂ ಗಮನಿಸನು.


ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ.


ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವದು; ಬಿರುನುಡಿಯು ಸಿಟ್ಟನ್ನೇರಿಸುವದು.


ದೀರ್ಘಶಾಂತನು ಕೇವಲ ಬುದ್ಧಿವಂತನು; ಮುಂಗೋಪಿಯು ಮೂರ್ಖತನವನ್ನು [ಧ್ವಜವಾಗಿ] ಎತ್ತುವನು.


ಯೆಹೋವನು ಸೈತಾನನಿಗೆ - ಅವನು ನಿನ್ನ ಕೈಯಲ್ಲಿದ್ದಾನೆ, ನೋಡು; ಅವನ ಪ್ರಾಣವನ್ನಾದರೋ ಉಳಿಸಲೇಬೇಕು ಎಂದು ಅಪ್ಪಣೆಕೊಟ್ಟನು.


ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ ಅವನು ಮೋಶೆಯನ್ನು ಕೊಲ್ಲಿಸಬೇಕೆಂದು ಆಲೋಚಿಸಿದ್ದರಿಂದ ಮೋಶೆ ಫರೋಹನ ಬಳಿಯಿಂದ ಓಡಿಹೋಗಿ ವಿುದ್ಯಾನ್ ದೇಶವನ್ನು ಸೇರಿದನು.


ತರುವಾಯ ಆ ಸೇವಕನು ತನ್ನ ದಣಿಯ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ಸಿದ್ಧಮಾಡಿ ದಣಿಯ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತನ್ನ ವಶಕ್ಕೆ ತೆಗೆದುಕೊಂಡು ಹೊರಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ಸೀಮೆಗೆ ಬಂದು ನಾಹೋರನು ವಾಸಿಸಿದ ಊರನ್ನು ಮುಟ್ಟಿದನು.


ಅದಕ್ಕೆ ಯೆಹೋವನ ದೂತನು - ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ತಗ್ಗಿ ನಡೆದುಕೋ ಅಂದನು.


ಇಗೋ, ಈಗ ನಾವು ನಿನ್ನ ಕೈಯಲ್ಲಿರುತ್ತೇವೆ; ನಿನಗೆ ಒಳ್ಳೇದೆಂದೂ ನ್ಯಾಯವೆಂದೂ ತೋರುವದನ್ನು ನಮಗೆ ಮಾಡು ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು