Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 16:7 - ಕನ್ನಡ ಸತ್ಯವೇದವು J.V. (BSI)

7 ಅವಳು ಮರಳುಕಾಡಿನಲ್ಲಿ ಶೂರಿನ ಮಾರ್ಗದ ಒರತೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವಳು ಮರಳುಗಾಡಿನಲ್ಲಿ ಶೂರಿನ ಮಾರ್ಗದ ನೀರಿನ ಬುಗ್ಗೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮರಳುಗಾಡಿನಲ್ಲಿ ಶೂರಿಗೆ ಹೋಗುವ ಹಾದಿಪಕ್ಕದಲ್ಲಿದ್ದ ಒಂದು ಒರತೆಯ ಬಳಿ ಸ್ವಾಮಿಯ ದೂತನು ಅವಳನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನ ದೂತನು ಹಾಗರಳನ್ನು ಮರುಳುಗಾಡಿನ ಒರತೆಯೊಂದರ ಬಳಿಯಲ್ಲಿ ಕಂಡನು. ಆ ಒರತೆಯು ಶೂರಿಗೆ ಹೋಗುವ ದಾರಿಯ ಬಳಿಯಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರ ದೂತನು ಮರುಭೂಮಿಯಲ್ಲಿ ಶೂರಿನ ಮಾರ್ಗವಾಗಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಹಾಗರಳನ್ನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 16:7
13 ತಿಳಿವುಗಳ ಹೋಲಿಕೆ  

ಬಳಿಕ ಮೋಶೆಯು ಇಸ್ರಾಯೇಲ್ಯರನ್ನು ಕೆಂಪು ಸಮುದ್ರದ ಬಳಿಯಿಂದ ಪ್ರಯಾಣ ಮಾಡಿಸಲು ಅವರು ಶೂರಿನ ಅರಣ್ಯದೊಳಗೆ ಮೂರು ದಿನ ನಡೆದು ಹೋದರು. ಅಲ್ಲಿ ಅವರಿಗೆ ನೀರು ಸಿಕ್ಕಲೇ ಇಲ್ಲ.


ಇಷ್ಮಾಯೇಲ್ಯರು ಹವೀಲದಿಂದ ಐಗುಪ್ತದೇಶದ ಮೂಡಲಲ್ಲಿರುವ ಅಶ್ಶೂರಿನ ದಾರಿಯಲ್ಲಿರುವ ಶೂರಿನ ತನಕ ವಾಸಮಾಡಿದರು. ಹೀಗೆ ಅವರಿಗೆ ತಮ್ಮ ಸಂಬಂಧಿಕರ ಎದುರಿನಲ್ಲಿಯೇ ವಾಸಸ್ಥಳ ಸಿಕ್ಕಿತು.


ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು - ಹಾಗರಳೇ, ನಿನಗೇನಾಯಿತು? ಅಂಜಬೇಡ; ಆ ಹುಡುಗನು ಬಿದ್ದಿರುವ ಸ್ಥಳದಿಂದಲೇ ಅವನ ಶಬ್ದವು ದೇವರಿಗೆ ಕೇಳಿಸಿತು;


ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವದು; ಆತನು ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಲೇ ಇರುವನು.


ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತದಿಂದ ಐಗುಪ್ತದ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೂ ಹೊಡೆಯುತ್ತಾ ಹೋದನು.


ಆ ಕನಸಿನಲ್ಲಿ ದೇವದೂತನು - ಯಾಕೋಬನೇ ಎಂದು ಕರೆಯಲು ನಾನು - ಇದ್ದೇನೆ ಎಂದು ಹೇಳಿದಾಗ


ಯೆಹೋವನ ದೂತನು ಆಕಾಶದೊಳಗಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ -


ಕೈಚಾಚಿ ಕತ್ತಿಯನ್ನು ಹಿಡಿದುಕೊಳ್ಳಲು ಯೆಹೋವನ ದೂತನು ಆಕಾಶದೊಳಗಿಂದ - ಅಬ್ರಹಾಮನೇ, ಅಬ್ರಹಾಮನೇ ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು - ಇಗೋ, ಇದ್ದೇನೆ ಅಂದನು.


ಅಬ್ರಹಾಮನು ಅಲ್ಲಿಂದ ಕಾನಾನ್ ದೇಶದ ದಕ್ಷಿಣ ಸೀಮೆಗೆ ಹೋಗುತ್ತಾ ಹೋಗುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸಮಾಡಿಕೊಂಡು ಕೆಲವು ಕಾಲ ಗೆರಾರಿನಲ್ಲಿ ಇದ್ದನು.


ನೀನೆದ್ದು ಅವನನ್ನು ಎತ್ತಿಕೊಂಡು ಕೈಬಿಡದೆ ಇರು; ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು ಎಂದು ಹೇಳಿದನು.


ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದದರಿಂದ ಅವಳು ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಹುಡುಗನಿಗೆ ಕುಡಿಸಿದಳು.


ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು - ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನೆಂದು ಪ್ರಮಾಣಮಾಡಿ ಹೇಳಿದ ಪರಲೋಕದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಳ್ಳುವಂತೆ ಅನುಕೂಲಮಾಡುವನು.


ಅಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಯೆಹೋವನ ದೂತನು ಅವನಿಗೆ ಕಾಣಿಸಿಕೊಂಡನು. ಹೇಗಂದರೆ ಅವನು ಒಂದು ಮುಳ್ಳಿನ ಪೊದೆಯನ್ನು ಕಂಡನು ಆ ಪೊದೆಯು ಬೆಂಕಿಯಿಂದ ಉರಿಯುತ್ತಿದ್ದರೂ ಅದು ಸುಟ್ಟುಹೋಗದೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು