Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:11 - ಕನ್ನಡ ಸತ್ಯವೇದವು J.V. (BSI)

11 ನೀವು ಮಾನಸ್ಥಾನದಲ್ಲಿ ಸುನ್ನತಿ ಮಾಡಿಸಿಕೊಳ್ಳಬೇಕು; ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಗೆ ಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದೇ ನಿಮಗೂ ನನಗೂ ಉಂಟಾದ ಒಡಂಬಡಿಕೆಯ ಗುರುತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನೀವು ನಿಮ್ಮ ಜನನಾಂಗದ ಮುಂದೊಗಲನ್ನು ಸುನ್ನತಿಮಾಡಿಸಿಕೊಳ್ಳಬೇಕು. ಅದೇ ನಿಮಗೂ ನನಗೂ ಆದ ಒಡಂಬಡಿಕೆಯ ಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11-12 ಇಂದಿನಿಂದ ನಿಮ್ಮಲ್ಲಿ ಗಂಡುಮಗು ಹುಟ್ಟಿ ಎಂಟು ದಿನಗಳಾದ ಮೇಲೆ ಆ ಮಗುವಿಗೆ ಸುನ್ನತಿ ಮಾಡಿಸಬೇಕು; ಈ ನಿಯಮವು ನಿಮ್ಮ ಮನೆಯಲ್ಲಿ ಹುಟ್ಟಿದ ಸೇವಕರಿಗೂ, ಪರದೇಶದಿಂದ ಕೊಂಡುತಂದ ಸೇವಕರಿಗೂ ಸಹ ಅನ್ವಯಿಸುತ್ತದೆ. ನನಗೂ ನಿನಗೂ ಆದ ಒಡಂಬಡಿಕೆಗೆ ಇದು ಗುರುತಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಸುನ್ನತಿ ಮಾಡಿಸಿಕೊಳ್ಳುವುದು, ನಿಮಗೂ ನನಗೂ ಉಂಟಾದ ಒಡಂಬಡಿಕೆಗೆ ಗುರುತಾಗಿ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:11
9 ತಿಳಿವುಗಳ ಹೋಲಿಕೆ  

ಆಮೇಲೆ ಸುನ್ನತಿಯೆಂಬ ಸಂಸ್ಕಾರವನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾದ ನೀತಿಗೆ ಮುದ್ರೆಯಾಗಿತ್ತು. ಹೀಗಿರುವದರಿಂದ ಅವನು ನಂಬುವವರೆಲ್ಲರಿಗೂ, ಅವರು ಸುನ್ನತಿಯಿಲ್ಲದವರಾದಾಗ್ಯೂ ಮೂಲತಂದೆಯಾದನು; ಅವರೂ ನೀತಿವಂತರೆಂದು ಎಣಿಸಲ್ಪಡುವರು.


ಇದಲ್ಲದೆ ದೇವರು ಅವನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದಕ್ಕೆ ಗುರುತಾಗಿ ಸುನ್ನತಿಯನ್ನು ನೇವಿುಸಿದನು. ಅದಕ್ಕನುಸಾರವಾಗಿ ಅಬ್ರಹಾಮನು ಇಸಾಕನನ್ನು ಪಡೆದು ಎಂಟನೆಯ ದಿವಸದಲ್ಲಿ ಅವನಿಗೆ ಸುನ್ನತಿಮಾಡಿದನು. ಮುಂದೆ ಇಸಾಕನು ಯಾಕೋಬನನ್ನು ಪಡೆದನು, ಯಾಕೋಬನು ಹನ್ನೆರಡು ಮಂದಿ ಮೂಲಪಿತೃಗಳನ್ನು ಪಡೆದನು.


ಆದದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಸ್ವಭಾವವನ್ನು ಬಿಟ್ಟುಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿ ಮಾಡಿಕೊಳ್ಳಿರಿ.


ಮತ್ತು ಅವನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ನಾನು ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದು ಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು ಎಂಬದಾಗಿ ಆಜ್ಞಾಪಿಸಿದನು.


ಅವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿಗುಡ್ಡದಲ್ಲಿ ಇಸ್ರಾಯೇಲ್ಯರಿಗೆ ಸುನ್ನತಿಮಾಡಿದನು.


ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕ ಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕು; ತರುವಾಯ ಅವನು ಹತ್ತಿರ ಬಂದು ಈ ಹಬ್ಬವನ್ನು ಆಚರಿಸಬಹುದು. ಅಂಥವನು ಸ್ವದೇಶದವನಂತೆಯೇ ಇರುವನು; ಆದರೆ ಸುನ್ನತಿ ಮಾಡಿಸಿಕೊಳ್ಳದವನು ಆ ಭೋಜನವನ್ನು ಮಾಡಲೇ ಕೂಡದು.


ಹೀಗಿರುವಾಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ, ಮೋಶೆಗೆ - ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನಾದಿ ಎಂದು ಹೇಳಿ ಕತ್ತರಿಸಿದ್ದನ್ನು ಅವನ ಪಾದಗಳಿಗೆ ಮುಟ್ಟಿಸಲು ಯೆಹೋವನು ಅವನನ್ನು ಉಳಿಸಿದನು.


ದೇವರು ಮತ್ತೂ ಹೇಳಿದ್ದೇನಂದರೆ - ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ಎಲ್ಲಾ ತಲತಲಾಂತರಗಳಲ್ಲಿಯೂ ಮಾಡುವ ಈ ಪ್ರತಿಜ್ಞೆಗೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು