Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:14 - ಕನ್ನಡ ಸತ್ಯವೇದವು J.V. (BSI)

14 ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಮೀರಿದವನಾದ ಕಾರಣ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸುನ್ನತಿಮಾಡಿಸಿಕೊಳ್ಳದ ಪುರುಷನಿಗೆ ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದಂತೆ ಆಗುವ ಕಾರಣ ಅವನನ್ನು ಕುಲದಿಂದ ಬಹಿಷ್ಕರಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದವನಾದ ಕಾರಣ, ಅವನು ಕುಲದಿಂದ ಬಹಿಷ್ಕೃತನಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸುನ್ನತಿ ಮಾಡಿಸಿಕೊಳ್ಳದವನು ನನ್ನ ಒಡಂಬಡಿಕೆಯನ್ನು ಮೀರಿದ ಕಾರಣ, ಅವನನ್ನು ಜನರೊಳಗಿಂದ ಬಹಿಷ್ಕರಿಸಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:14
24 ತಿಳಿವುಗಳ ಹೋಲಿಕೆ  

ಆ ಏಳು ದಿನಗಳೂ ನಿಮ್ಮ ಮನೆಗಳಲ್ಲಿ ಹುಳಿಯಿಟ್ಟೇ ಇರಕೂಡದು. ಹುಳಿ ಬೆರಸಿದ್ದನ್ನು ತಿನ್ನುವವನು ಪರದೇಶದವನಾಗಲಿ ಸ್ವದೇಶದವನಾಗಲಿ ಇಸ್ರಾಯೇಲ್ ಜನರೊಳಗಿಂದ ತೆಗೆದುಹಾಕಲ್ಪಡಬೇಕು.


ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳಗಾಗುವನು.


ಹೀಗಿರುವದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ದ್ರೋಹಮಾಡಿದವನಾಗಿರುವನು.


ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರತಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಮೂಲ ಪಿತೃಗಳ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿದ್ದಾರೆ; ಇಸ್ರಾಯೇಲ್ ವಂಶದವರೂ ಯೆಹೂದ ವಂಶದವರೂ ನಾನು ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ.


ರಾಜಮಾರ್ಗಗಳು ಹಾಳಾಗಿವೆ, ದಾರಿಗರು ಇಲ್ಲವೇ ಇಲ್ಲ; [ಶತ್ರುವು] ಒಪ್ಪಂದವನ್ನು ಮೀರಿದ್ದಾನೆ, ಊರಿನವರನ್ನು ತಿರಸ್ಕರಿಸಿದ್ದಾನೆ, ಮನುಷ್ಯರನ್ನು ಗಣನೆಗೆ ತಾರನು.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ ನಿಯಮವನ್ನು ಅತಿಕ್ರವಿುಸಿ ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂವಿುಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು.


ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರೋಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.


ಅದರಲ್ಲಿ ಏನಾದರೂ ತಿಂದವನು ಯೆಹೋವನ ದ್ರವ್ಯವನ್ನು ಹೊಲೆಮಾಡಿದವನಾದದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನು ಕುಲದಿಂದ ತೆಗೆದುಹಾಕಲ್ಪಡಬೇಕು.


ಯಾವನಾದರೂ ಈ ಹೇಸಿಗೆಯಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು.


ರಕ್ತಭೋಜನಮಾಡಿದವನು ಕುಲದಿಂದ ತೆಗೆದುಹಾಕಲ್ಪಡಬೇಕು.


ಮನುಷ್ಯನು ಯೆಹೋವನಿಗೆ ಹೋಮಮಾಡುವಂಥ ಪಶುಜಾತಿಯ ಕೊಬ್ಬನ್ನು ಯಾವನಾದರೂ ತಿಂದರೆ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು.


ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.


ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.


ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳೊಳಗಿಂದ ತೆಗೆದುಬಿಡಬೇಕು. ಆ ದಿವಸ ಮೊದಲುಗೊಂಡು ಏಳು ದಿವಸಗಳೊಳಗೆ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನು ಇಸ್ರಾಯೇಲ್ಯರಿಂದ ತೆಗೆದು ಹಾಕಲ್ಪಡಬೇಕು.


ಇದಲ್ಲದೆ ದೇವರು ಅಬ್ರಹಾಮನಿಗೆ - ನೀನು ಇನ್ನು ಮುಂದೆ ನಿನ್ನ ಪತ್ನಿಯನ್ನು ಸಾರಯಳೆಂದು ಕರೆಯದೆ ಸಾರಾ ಎಂದು ಕರೆಯಬೇಕು.


ಸುನ್ನತಿಯಿಲ್ಲದವನಿಗೆ ನಮ್ಮ ತಂಗಿಯನ್ನು ಕೊಡುವದಕ್ಕಾಗುವದಿಲ್ಲ; ಹಾಗೆ ಕೊಡುವದು ನಮಗೆ ಅಪಮಾನ.


ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನು ಕುಲದಿಂದ ತೆಗೆದು ಹಾಕಲ್ಪಡಬೇಕು.


ಆದರೆ ಯಾವನಾದರೂ ಶುದ್ಧನಾಗಿಯೂ ಪ್ರಯಾಣಮಾಡದೆಯೂ ಇದ್ದು ಪಸ್ಕಹಬ್ಬವನ್ನು ಆಚರಿಸದೆ ತಪ್ಪಿದರೆ ಅವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು. ಅವನು ಯೆಹೋವನಿಂದ ನೇವಿುತವಾದ ಯಜ್ಞವನ್ನು ಗೊತ್ತಾದ ಕಾಲದಲ್ಲಿ ಸಮರ್ಪಿಸದೆ ಹೋದದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.


ಇಸ್ರಾಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಫರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಹೊಲೆಗೆಡಿಸಿ ನನ್ನ ಒಡಂಬಡಿಕೆಯನ್ನು ಭಂಗಪಡಿಸಿ ನಿಮ್ಮ ಅವಿುತದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು