Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 17:23 - ಕನ್ನಡ ಸತ್ಯವೇದವು J.V. (BSI)

23 ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದೇ ದಿನದಲ್ಲಿ ಅಬ್ರಹಾಮನು ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೂ, ಅಂದರೆ ಮನೆಯಲ್ಲಿ ಹುಟ್ಟಿದವರಿಗೆ ಮಾತ್ರವಲ್ಲದೆ, ತಾನು ಕ್ರಯಕ್ಕೆ ತೆಗೆದುಕೊಂಡವರಿಗೂ ದೇವರ ಅಪ್ಪಣೆಯಂತೆ ಸುನ್ನತಿಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದೇ ದಿನದಂದು ಅಬ್ರಹಾಮನು ದೇವರ ಅಪ್ಪಣೆಯ ಪ್ರಕಾರ ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲ ಗಂಡಸರಿಗೂ ಮನೆಯಲ್ಲಿ ಹುಟ್ಟಿದ ಹಾಗು ತಾನು ಕ್ರಯಕ್ಕೆ ಕೊಂಡುಕೊಂಡ ಜೀತದಾರರಿಗೂ ಸುನ್ನತಿಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅದೇ ದಿನದಲ್ಲಿ ಅಬ್ರಹಾಮನು ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಸೇವಕರಿಗೆ ಹುಟ್ಟಿದ ಗಂಡುಮಕ್ಕಳಿಗೂ ಪರದೇಶಿಯರಿಂದ ಕೊಂಡುತಂದಿದ್ದ ಸೇವಕರಿಗೂ ದೇವರು ಹೇಳಿದಂತೆಯೇ ಸುನ್ನತಿ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅಬ್ರಹಾಮನು ತನ್ನ ಮಗ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರಿಗೂ ತಾನು ಕ್ರಯಕ್ಕೆ ತೆಗೆದುಕೊಂಡವರೆಲ್ಲರಿಗೂ ಹೀಗೆ ತನ್ನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ದೇವರು ತನಗೆ ಹೇಳಿದ ಹಾಗೆ, ಆ ದಿನವೇ ಸುನ್ನತಿ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 17:23
16 ತಿಳಿವುಗಳ ಹೋಲಿಕೆ  

ನಾಳೆ ಎಂದು ಕೊಚ್ಚಿಕೊಳ್ಳಬೇಡ; ಒಂದು ದಿನದೊಳಗೇ ಏನಾಗುವದೋ ನಿನಗೆ ತಿಳಿಯದು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ನಿನ್ನ ಆಜ್ಞೆಗಳನ್ನು ಅನುಸರಿಸುವದರಲ್ಲಿ ಆಸಕ್ತನಾದೆನು; ಆಲಸ್ಯಮಾಡಲಿಲ್ಲ.


ಹಮೋರನೂ ಅವನ ಮಗನಾದ ಶೆಕೆಮನೂ ಹೇಳಿದ ಮಾತಿಗೆ ಊರಿನವರೆಲ್ಲರೂ ಸಮ್ಮತಿಪಟ್ಟದ್ದರಿಂದ ಅವರಲ್ಲಿದ್ದ ಪುರುಷರೆಲ್ಲರೂ ಸುನ್ನತಿಮಾಡಿಸಿಕೊಂಡರು.


ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು.


ಸುನ್ನತಿಯಾಗುವದರಲ್ಲಿ ಏನೂ ಇಲ್ಲ, ಸುನ್ನತಿಯಾಗದೆ ಇರುವದರಲ್ಲಿಯೂ ಏನೂ ಇಲ್ಲ; ಹೊಸ ಸೃಷ್ಟಿಯೇ ಬೇಕು.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋಜನವಿಲ್ಲ. ಪ್ರೀತಿಯಿಂದ ಕೆಲಸ ನಡಿಸುವ ನಂಬಿಕೆಯಿಂದಲೇ ಪ್ರಯೋಜನವಾಗಿದೆ.


ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆಯಾ ಸ್ಥಳಗಳಲ್ಲಿದ್ದ ಯೆಹೂದ್ಯರ ನಿವಿುತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು. ಯಾಕಂದರೆ ಅವನ ತಂದೆ ಗ್ರೀಕನೆಂದು ಎಲ್ಲರಿಗೂ ಗೊತ್ತಿತ್ತು.


ಅಬ್ರಾಮನು ತನ್ನ ತಮ್ಮನ ಮಗನು ಸೆರೆಗೆ ಸಿಕ್ಕಿದ್ದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದ ಶಿಕ್ಷಿತರಾದ ಮುನ್ನೂರ ಹದಿನೆಂಟು ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟು ಆ ರಾಜರನ್ನು ದಾನೂರಿನವರೆಗೆ ಹಿಂದಟ್ಟಿದನು.


ಇದಲ್ಲದೆ ದೇವರು ಅಬ್ರಹಾಮನಿಗೆ - ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರೂ ಎಲ್ಲಾ ತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು