Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:10 - ಕನ್ನಡ ಸತ್ಯವೇದವು J.V. (BSI)

10 ಅದಕ್ಕಾತನು - ಬರುವ ವರುಷದ ಇದೇ ಕಾಲದಲ್ಲಿ ನಾನು ತಪ್ಪದೆ ತಿರಿಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು ಅಂದನು. ಆ ಮಾತು ಹಿಂದೆ ಗುಡಾರದ ಬಾಗಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದಕ್ಕೆ ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಆ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಸರ್ವೇಶ್ವರ ಸ್ವಾಮಿ, “ಬರುವ ವರ್ಷ ಇದೇ ಕಾಲದಲ್ಲಿ ನಾನು ತಪ್ಪದೆ ಮರಳಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಹೆಂಡತಿ ಸಾರಳಿಗೆ ಮಗನಿರುತ್ತಾನೆ,” ಎಂದರು. ಈ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿದ್ದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ಯೆಹೋವನು ಅವನಿಗೆ, “ನಾನು ಮತ್ತೆ ವಸಂತಕಾಲದಲ್ಲಿ ಬರುತ್ತೇನೆ. ಆ ಸಮಯದಲ್ಲಿ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿರುವನು” ಎಂದು ಹೇಳಿದನು. ಸಾರಳು ಗುಡಾರದಲ್ಲಿದ್ದುಕೊಂಡು ಇದನ್ನೆಲ್ಲಾ ಕೇಳಿಸಿಕೊಳ್ಳುತ್ತಿದ್ದಳು. ಅವಳಿಗೆ ಈ ಸಂಗತಿಯೂ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಆ ಮೂವರಲ್ಲಿ ಒಬ್ಬರು, “ಬರುವ ವರ್ಷ ಇದೇ ಸಮಯದಲ್ಲಿ ನಾನು ನಿಶ್ಚಯವಾಗಿ ತಿರುಗಿ ನಿನ್ನ ಬಳಿಗೆ ಬರುವೆನು. ಆಗ ನಿನ್ನ ಹೆಂಡತಿ ಸಾರಳಿಗೆ ಒಬ್ಬ ಮಗನಿರುವನು,” ಎಂದನು. ಸಾರಳು ಅವರ ಹಿಂದೆ ಇದ್ದ ಡೇರೆಯ ಬಾಗಿಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:10
15 ತಿಳಿವುಗಳ ಹೋಲಿಕೆ  

ಹೇಗಂದರೆ ಸಾರಳು ಬಸುರಾಗಿ ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಮಗನನ್ನು ಹೆತ್ತಳು.


ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನ ಸಂಗಡಲೇ ಸ್ಥಾಪಿಸಿಕೊಳ್ಳುತ್ತೇನೆ; ಬರುವ ವರುಷ ಇದೇ ಕಾಲದಲ್ಲಿ ಸಾರಳು ಅವನನ್ನು ಹೆರುವಳು ಅಂದನು.


ಹಾಗಲ್ಲ, ನಿನ್ನ ಪತ್ನಿಯಾದ ಸಾರಳಲ್ಲಿಯೇ ನಿನ್ನಿಂದ ಮಗನು ಹುಟ್ಟುವನು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರಬೇಕು.


ನಾನು ಆಕೆಯನ್ನು ಆಶೀರ್ವದಿಸಿ ಆಕೆಯಲ್ಲಿ ನಿನಗೆ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು ಎಂದು ಹೇಳಲು ಅಬ್ರಹಾಮನು ಅಡ್ಡಬಿದ್ದು ನಕ್ಕು -


ಸಹೋದರರೇ, ನಾವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳಾಗಿದ್ದೇವೆ.


ತೊತ್ತಿನ ಮಗನು ಸ್ವಾಭಾವಿಕವಾಗಿ ಹುಟ್ಟಿದನು. ಧರ್ಮಪತ್ನಿಯ ಮಗನೋ ವಾಗ್ದಾನದ ಫಲವಾಗಿ ಹುಟ್ಟಿದನು.


ಆದರೆ ಆ ದೂತನು ಅವನಿಗೆ - ಜಕರೀಯಾ, ಭಯಪಬೇಡ; ನಿನ್ನ ವಿಜ್ಞಾಪನೆ ದೇವರಿಗೆ ಮುಟ್ಟಿತು; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು.


ಅದಲ್ಲದೆ ಯೆಹೋವನ ದೂತನು ಅವಳಿಗೆ - ನಿನಗೆ ಬಹುಸಂತಾನವಾಗ ಮಾಡುವೆನು; ಅದು ಲೆಕ್ಕಿಸಕೂಡದಷ್ಟು ಅಪರಿವಿುತವಾಗುವದು ಎಂದು ಹೇಳಿದನು.


ಬಳಿಕ ಅವರು ಅವನನ್ನು - ನಿನ್ನ ಪತ್ನಿಯಾದ ಸಾರಳು ಎಲ್ಲಿದ್ದಾಳೆ ಎಂದು ಕೇಳಲು ಅವನು - ಅಗೋ, ಗುಡಾರದಲ್ಲಿದ್ದಾಳೆ ಅಂದನು.


ಯೆಹೋವನು ತಾನು ಹೇಳಿದ್ದಂತೆಯೇ ಸಾರಳ ಮೇಲೆ ದಯವಿಟ್ಟು ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು