Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:19 - ಕನ್ನಡ ಸತ್ಯವೇದವು J.V. (BSI)

19 ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:19
39 ತಿಳಿವುಗಳ ಹೋಲಿಕೆ  

ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.


ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನಿಗೆ ಮೆಚ್ಚಿಗೆಯಾಗಿರುವ ಬಾಲಶಿಕ್ಷೆಯನ್ನೂ ಬಾಲೋಪದೇಶವನ್ನೂ ಮಾಡುತ್ತಾ ಅವರನ್ನು ಸಾಕಿ ಸಲಹಿರಿ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು.


ಸಭಾಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.


ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಹುಡುಗನನ್ನು ಶಿಕ್ಷಿಸು; ಮುಪ್ಪಿನಲ್ಲಿಯೂ ಓರೆಯಾಗನು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಯೆಹೋವನನ್ನು ಸೇವಿಸುವದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳೋ, ಹೇಳಿರಿ. ನಾನೂ ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು ಅಂದನು.


ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸಿರಿ.


ಯೆಹೋವನು ನೀತಿವಂತರನ್ನು ಕಟಾಕ್ಷಿಸುತ್ತಾನೆ; ಅವರು ಮೊರೆಯಿಡುವಾಗ ಕಿವಿಗೊಡುತ್ತಾನೆ.


ಯೆಹೋವನು ತನ್ನ ಪರಿಶುದ್ಧ ಮಂದಿರದಲ್ಲಿದ್ದಾನೆ; ಆತನು ತನ್ನ ಸಿಂಹಾಸನವನ್ನು ಪರಲೋಕದಲ್ಲಿ ಸ್ಥಾಪಿಸಿದ್ದಾನೆ. ಆತನ ಕಣ್ಣುಗಳು ಮಾನವರನ್ನು ನೋಡುತ್ತವೆ; ಆತನು ಅವರನ್ನು ಬಹು ಸೂಕ್ಷ್ಮವಾಗಿ ಪರಿಶೋಧಿಸುತ್ತಾನೆ.


ಔತಣ ಸರದಿ ತೀರಿದನಂತರ ಯೋಬನು ತನ್ನ ಮಕ್ಕಳು ಒಂದು ವೇಳೆ ಹೃದಯದಲ್ಲಿ ದೇವರನ್ನು ದೂಷಿಸಿ ಪಾಪ ಮಾಡಿರಬಹುದು ಎಂದು ಅವರನ್ನು ಕರಿಸಿ ಶುದ್ಧಿಪಡಿಸಿ ಬೆಳಿಗ್ಗೆ ಎದ್ದು ಅವರ ಸಂಖ್ಯೆಗೆ ತಕ್ಕಂತೆ ಹೋಮಗಳನ್ನು ಅರ್ಪಿಸುತ್ತಿದ್ದನು. ಹೀಗೆ ಯೋಬನು ಕ್ರಮವಾಗಿ ಮಾಡುತ್ತಿದ್ದನು.


ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು; ಹಾಗೆಯೇ ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.


ಪೌಲನು ಶತಾಧಿಪತಿಗೂ ಸಿಪಾಯಿಗಳಿಗೂ - ಇವರು ಹಡಗಿನಲ್ಲಿ ನಿಲ್ಲದೆ ಹೋದರೆ ನೀವೂ ಉಳುಕೊಳ್ಳುವದಕ್ಕಾಗುವದಿಲ್ಲವೆಂದು ಹೇಳಿದನು.


ನಾನೇ ಒಳ್ಳೇ ಕುರುಬನು; ತಂದೆಯು ನನ್ನನ್ನು ನಾನು ತಂದೆಯನ್ನು ತಿಳಿದಿರುವಂತೆಯೇ ನಾನು ನನ್ನ ಕುರಿಗಳನ್ನು ತಿಳಿದಿದ್ದೇನೆ; ನನ್ನ ಕುರಿಗಳು ನನ್ನನ್ನು ತಿಳಿದವೆ; ಮತ್ತು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.


ಜೀವಂತನು ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.


ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವದು.


ಕರ್ತನೇ, ಯೆಹೋವನೇ, ನೀನು ನಿನ್ನ ಸೇವಕನಾದ ದಾವೀದನನ್ನು ಬಲ್ಲೆ; ನಾನು ಇನ್ನೇನು ಹೇಳಲಿ?


ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.


ಭೂವಿುಯ ಸಕಲಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಅರಿತುಕೊಂಡಿದ್ದೇನೆ; ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನಿಮಗೆ ತಿನ್ನಿಸುವೆನು.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ನೀನು ಆಶೀರ್ವಾದನಿಧಿಯಾಗುವಿ. ನಿನ್ನನ್ನು ಹರಸುವವರನ್ನು ಹರಸುವೆನು; ನಿನ್ನನ್ನು ಶಪಿಸುವವರನ್ನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿದನು.


ಇದಲ್ಲದೆ ದೇವರು ಅಬ್ರಹಾಮನಿಗೆ - ನೀನಂತೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು. ನೀನು ಮಾತ್ರವಲ್ಲದೆ ನಿನ್ನ ಸಂತತಿಯವರೂ ಎಲ್ಲಾ ತಲಾಂತರಗಳಲ್ಲಿ ಅದನ್ನು ಕೈಕೊಂಡು ನಡೆಯಬೇಕು.


ನೀನು ನನ್ನ ಮಾತನ್ನು ಕೇಳಿದ್ದರಿಂದ ಭೂವಿುಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಎಂಬದಾಗಿ ಯೆಹೋವನು ತನ್ನಾಣೆಯಿಟ್ಟು ಹೇಳಿದ್ದಾನೆ ಅಂದನು.


ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ - ನಿಮ್ಮಲ್ಲಿರುವ ಅನ್ಯದೇವರುಗಳನ್ನು ತಳ್ಳಿಬಿಟ್ಟು ನಿಮ್ಮನ್ನು ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿರಿ; ನಾವು ಬೇತೇಲಿಗೆ ಹೊರಟುಹೋಗೋಣ.


ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.


ಆಕಾಶ ಸೈನ್ಯದವರು ನಿನಗೆ ಅಡ್ಡಬೀಳುತ್ತಾರೆ. ಯೆಹೋವನೇ, ಅಬ್ರಾಮನನ್ನು ಆರಿಸಿಕೊಂಡು ಕಸ್ದೀಯರ ಊರ್ ಎಂಬ ಪಟ್ಟಣದಿಂದ ಬರಮಾಡಿ ಅವನಿಗೆ ಅಬ್ರಹಾಮನೆಂಬ ಹೆಸರನ್ನು ಕೊಟ್ಟ ದೇವರು ನೀನೇ.


ಆಗ ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.


ಅವನು - ಹೌದು, ನಾನೇ ಅಂದನು. ಆಗ ಮಾನೋಹನು - ನೀನು ಹೇಳಿದ್ದು ನೆರವೇರಿದಾಗ ನಾವು ಆ ಮಗುವಿಗೋಸ್ಕರ ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು ಎಂದು ಕೇಳಲು


ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡಿಸಿ ಅಶೇರವಿಗ್ರಹಸ್ತಂಭಗಳನ್ನು ಕಡಿಸಿಬಿಟ್ಟು ಯೆಹೂದ್ಯರಿಗೆ -


ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು