Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:23 - ಕನ್ನಡ ಸತ್ಯವೇದವು J.V. (BSI)

23 ಆಗ ಅಬ್ರಹಾಮನು ಹತ್ತಿರಕ್ಕೆ ಬಂದು - ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಅಬ್ರಹಾಮನು ಹತ್ತಿರಕ್ಕೆ ಬಂದು, “ನೀನು ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅವನು ಅವರ ಹತ್ತಿರಕ್ಕೆ ಬಂದು, “ನೀವು ದುರ್ಜನರ ಸಂಗಡ ಸಜ್ಜನರನ್ನೂ ನಾಶಮಾಡುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅಬ್ರಹಾಮನು ಯೆಹೋವನ ಸಮೀಪಕ್ಕೆ ಬಂದು, “ಯೆಹೋವನೇ, ನೀನು ಕೆಟ್ಟವರನ್ನು ನಾಶಮಾಡುವಾಗ ನೀತಿವಂತರನ್ನು ಸಹ ನಾಶಮಾಡಬೇಕೆಂದಿರುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಅಬ್ರಹಾಮನು ಹತ್ತಿರ ಬಂದು, “ದುಷ್ಟರ ಜೊತೆ ನೀತಿವಂತರನ್ನೂ ನಾಶಮಾಡುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:23
15 ತಿಳಿವುಗಳ ಹೋಲಿಕೆ  

ಅವರು ಅಡ್ಡಬಿದ್ದು - ದೇವರೇ, ಎಲ್ಲಾ ಮನುಷ್ಯರ ಆತ್ಮಗಳಿಗೆ ದೇವರಾಗಿರುವವನೇ,


ದಾವೀದನು ಜನಸಂಹಾರಕದೂತನನ್ನು ಕಂಡಾಗ ಯೆಹೋವನಿಗೆ - ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿನ್ನ ಕೈ ನನಗೂ ನನ್ನ ಮನೆಯವರಿಗೂ ವಿರೋಧವಾಗಿರಲಿ ಎಂದು ಬೇಡಿಕೊಂಡನು.


ಅಬೀಮೆಲೆಕನು ಆಕೆಯನ್ನು ಕೂಡಲಿಲ್ಲವಾದ್ದರಿಂದ ಅವನು - ಸ್ವಾಮೀ, ನಿರಪರಾಧಿಯಾದ ಜನವನ್ನೂ ನಾಶಮಾಡುವಿಯಾ?


ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.


ನ್ಯಾಯವನ್ನು ದ್ವೇಷಿಸುವವನು ಕಟ್ಟುಪಾಡು ಮಾಡಾನೇ? ಧರ್ಮಸ್ವರೂಪನೂ ಮಹಾಶಕ್ತನೂ ಆಗಿರುವಾತನನ್ನು ಕೆಟ್ಟವನೆಂದು ನಿರ್ಣಯಿಸುವಿಯಾ?


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ ಎಂದು ಹೇಳಲು ಯೆಹೋವನು -


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು; ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು; ನನ್ನನ್ನು ಸಮೀಪಿಸುವದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.


ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.


ದೇವರು ಅನ್ಯಾಯವಾದ ತೀರ್ಪನ್ನು ಕೊಡುವನೋ? ಸರ್ವಶಕ್ತನು ನೀತಿಯನ್ನು ಡೊಂಕುಮಾಡುವನೋ?


ಎಲೀಯನು ನಮ್ಮಂಥ ಸ್ವಭಾವವುಳ್ಳವನಾಗಿದ್ದನು; ಅವನು ಮಳೆಬರಬಾರದೆಂದು ಬಹಳವಾಗಿ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳವರೆಗೂ ಮಳೆಬೀಳಲಿಲ್ಲ.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ ಒಬ್ಬರಿಗೋಸ್ಕರ ಒಬ್ಬರು ದೇವರನ್ನು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ವಿಜ್ಞಾಪನೆಯು ಬಹು ಬಲವಾಗಿದೆ.


ಒಂದು ವೇಳೆ ಆ ಊರೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?


ನಿರಪರಾಧಿಯಾಗಿಯೂ ಸನ್ಮಾರ್ಗಸ್ಥನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇ ಬಾರದು; ಅಂಥ ದುಷ್ಟತ್ವವನ್ನು ಮಾಡಿದವನಿಗೆ ನಾನು ಶಿಕ್ಷೆಯನ್ನು ವಿಧಿಸದೆ ಬಿಡುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು