Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:27 - ಕನ್ನಡ ಸತ್ಯವೇದವು J.V. (BSI)

27 ಅದಕ್ಕೆ ಅಬ್ರಹಾಮನು - ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾವಿುಯ ಸಂಗಡ ವಾದಿಸುವದಕ್ಕೆ ಧೈರ್ಯಗೊಂಡಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅದಕ್ಕೆ ಅಬ್ರಹಾಮನು, “ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ಅಬ್ರಹಾಮನು, “ನಾನಂತೂ ಮಣ್ಣುಬೂದಿ, ಆದರೂ ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ಅಬ್ರಹಾಮನು ಯೆಹೋವನಿಗೆ, “ನಿನಗೆ ನನ್ನನ್ನು ಹೋಲಿಸಿಕೊಂಡರೆ, ನಾನು ಕೇವಲ ಧೂಳು ಮತ್ತು ಬೂದಿ. ಆದರೆ ಈ ಪ್ರಶ್ನೆಯನ್ನೂ ಕೇಳಲು ನನಗೆ ಅವಕಾಶಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಅಬ್ರಹಾಮನು, “ಇಗೋ, ಮಣ್ಣೂ, ಬೂದಿಯೂ ಆಗಿರುವ ನಾನು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:27
18 ತಿಳಿವುಗಳ ಹೋಲಿಕೆ  

ಆಗ ನಾನು - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ನಾಶವಾದೆನಲ್ಲಾ; ನಾನು ಹೊಲಸು ತುಟಿಯವನು, ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು; ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವು ಎಂದು ಕೂಗಿಕೊಳ್ಳಲು


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು - ಸ್ವಾಮೀ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗಬೇಕು ಅಂದನು.


ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ ಎಂದು ಹೇಳಿದನು.


ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.


ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದೀ; ನಾವು ಜೇಡಿಮಣ್ಣು, ನೀನು ಕುಂಬಾರ, ನಾವೆಲ್ಲರೂ ನಿನ್ನ ಕೈಕೆಲಸವೇ.


ಮಣ್ಣು ಭೂವಿುಗೆ ಸೇರಿ ಇದ್ದ ಹಾಗಾಗುವದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವದು; ಇಷ್ಟರೊಳಗಾಗಿ [ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ.]


ಆತನು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾನೆ, ದೂಳುಬೂದಿಗಳಿಗೆ ಸಮಾನನಾಗಿದ್ದೇನೆ.


ದೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನಿಂದಾದ [ಶರೀರಗಳೆಂಬ] ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪುಕಂಡುಹಿಡಿಯಬೇಕಲ್ಲವೇ. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ.


ಹೀಗಿರಲು ಯೆಹೋವದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು; ಆಗ ಮನುಷ್ಯನು ಬದುಕುವ ಪ್ರಾಣಿಯಾದನು.


ಯೆಹೋವನೇ, ಮನುಷ್ಯನು ಎಷ್ಟು ಮಾತ್ರದವನು? ಅವನನ್ನು ನೀನು ಯಾಕೆ ನೆನಸಬೇಕು? ಮಾನವನು ಎಷ್ಟರವನು? ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?


ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಸಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?


ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ; ನಿನ್ನ ಕಡೆಗೆ ಮುಖವನ್ನೆತ್ತುವದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದವು. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಯಿತು.


ಒಂದು ವೇಳೆ ಐವತ್ತು ಮಂದಿ ನೀತಿವಂತರಿಗೆ ಐದು ಮಂದಿ ಕಡಿಮೆಯಾಗಿದ್ದಾರು; ಐದು ಮಂದಿ ಕಡಿಮೆಯಾದದ್ದಕ್ಕೆ ಪಟ್ಟಣವನ್ನೆಲ್ಲಾ ನಾಶಮಾಡುವಿಯಾ ಎಂದು ಹೇಳಲು ಯೆಹೋವನು - ಅಲ್ಲಿ ನಾಲ್ವತ್ತೈದು ಮಂದಿ ಸಿಕ್ಕಿದರೆ ಅದನ್ನು ನಾಶಮಾಡುವದಿಲ್ಲ ಅಂದನು.


ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು - ಯೆಹೋವನೇ, ನೀನು ಮಹಾಶಕ್ತಿಯಿಂದಲೂ ಭುಜಬಲದಿಂದಲೂ ಐಗುಪ್ತದೇಶದಿಂದ ಬಿಡಿಸಿದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು