Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:30 - ಕನ್ನಡ ಸತ್ಯವೇದವು J.V. (BSI)

30 ಅಬ್ರಹಾಮನು - ಸ್ವಾಮೀ, ಕೋಪಮಾಡಬಾರದು; ಇನ್ನೂ ಮಾತಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು ಎನ್ನಲು ಆತನು - ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶಮಾಡುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅಬ್ರಹಾಮನು, “ಕರ್ತನೇ, ಕೋಪಮಾಡಬಾರದು; ಇನ್ನೂ ಮಾತನಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶ ಮಾಡುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅಬ್ರಹಾಮನು, “ಸ್ವಾಮೀ, ಕೋಪಮಾಡಬೇಡಿ; ಇನ್ನೂ ಮಾತಾಡುತ್ತೇನೆ. ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಸರ್ವೇಶ್ವರ, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೂ ಅದನ್ನು ನಾಶಮಾಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆಮೇಲೆ ಅಬ್ರಹಾಮನು, “ಯೆಹೋವನೇ, ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಈ ಪ್ರಶ್ನೆಯನ್ನೂ ಕೇಳುವೆ: ಆ ಪಟ್ಟಣದಲ್ಲಿ ಕೇವಲ ಮೂವತ್ತು ಮಂದಿ ನೀತಿವಂತರಿದ್ದರೆ ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಮೂವತ್ತು ಮಂದಿ ನೀತಿವಂತರಿದ್ದರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವನು, “ಯೆಹೋವ ದೇವರಿಗೆ ಕೋಪಬಾರದೆ ಇರಲಿ, ನಾನು ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಇದ್ದರೆ,” ಎಂದಾಗ, ದೇವರು, “ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ, ನಾಶಮಾಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:30
12 ತಿಳಿವುಗಳ ಹೋಲಿಕೆ  

ಆಗ ನಾನು - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ನಾಶವಾದೆನಲ್ಲಾ; ನಾನು ಹೊಲಸು ತುಟಿಯವನು, ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು; ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವು ಎಂದು ಕೂಗಿಕೊಳ್ಳಲು


ಆತನು ಪರಿಶುದ್ಧರ ಸಭೆಯಲ್ಲಿ ಭಯಂಕರನಾದ ದೇವರು; ತನ್ನ ಎಲ್ಲಾ ಪರಿವಾರದವರಿಗಿಂತ ಭೀಕರನು.


ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದೀ; ಅವರ ಹೃದಯವನ್ನು ಧೈರ್ಯಪಡಿಸುತ್ತೀ; ಅವರ ಮೊರೆಗೆ ಕಿವಿಗೊಡುತ್ತೀ.


ಆತನು ಕುಗ್ಗಿದವರ ಮೊರೆಯನ್ನು ಮರೆಯದೆ ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವವನಾಗಿ ಅವರನ್ನು ಜ್ಞಾಪಕಮಾಡಿಕೊಂಡನು.


ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯ ಮೇಲೆ ಕೈಯಿಟ್ಟುಕೊಳ್ಳುವೆನು.


ಅವನು ತಿರಿಗಿ ದೇವರಿಗೆ - ಸ್ವಾಮೀ, ಸಿಟ್ಟಾಗಬಾರದು; ಇನ್ನೊಂದು ಸಾರಿ ಮಾತಾಡುತ್ತೇನೆ. ಇನ್ನು ಒಂದೇ ಸಾರಿ ಈ ತುಪ್ಪಟದಿಂದ ನಿನ್ನನ್ನು ಪರೀಕ್ಷಿಸುವದಕ್ಕೆ ಅಪ್ಪಣೆಯಾಗಲಿ; ಈ ತುಪ್ಪಟವು ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿಬಿದ್ದಿರಲಿ ಅಂದನು.


ಆಗ ಯೆಹೂದನು ಹತ್ತರಕ್ಕೆ ಬಂದು - ನಿನ್ನ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ, ನನ್ನ ಮೇಲೆ ಸಿಟ್ಟು ಮಾಡಬಾರದು; ನೀನು ಫರೋಹನಿಗೆ ಸಮಾನನಾಗಿದ್ದೀಯೆಂದು ನಾನು ಬಲ್ಲೆ.


ಅಬ್ರಹಾಮನು ಆತನ ಸಂಗಡ ಇನ್ನೂ ಮಾತಾಡಿ - ಒಂದು ವೇಳೆ ಅಲ್ಲಿ ನಾಲ್ವತ್ತು ಮಂದಿ ಸಿಕ್ಕಾರು ಎನ್ನಲು ಆತನು - ನಾಲ್ವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶಮಾಡುವದಿಲ್ಲ ಅಂದನು.


ಅವನು - ಇಗೋ, ಸ್ವಾವಿುಯ ಸಂಗಡ ಮಾತಾಡುವದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಎನ್ನಲು ಆತನು - ಇಪ್ಪತ್ತು ಮಂದಿಯಿದ್ದರೆ ಅವರ ನಿವಿುತ್ತ ಅದನ್ನು ಉಳಿಸುವೆನು, ನಾಶಮಾಡುವದಿಲ್ಲ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು