Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 18:31 - ಕನ್ನಡ ಸತ್ಯವೇದವು J.V. (BSI)

31 ಅವನು - ಇಗೋ, ಸ್ವಾವಿುಯ ಸಂಗಡ ಮಾತಾಡುವದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಎನ್ನಲು ಆತನು - ಇಪ್ಪತ್ತು ಮಂದಿಯಿದ್ದರೆ ಅವರ ನಿವಿುತ್ತ ಅದನ್ನು ಉಳಿಸುವೆನು, ನಾಶಮಾಡುವದಿಲ್ಲ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವನು, “ಇಗೋ, ಸ್ವಾಮಿಯ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಆತನು, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಆ ಪಟ್ಟಣವನ್ನು ಉಳಿಸುವೆನು, ನಾಶ ಮಾಡುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅವನು, “ಸ್ವಾಮಿಯ ಸಂಗಡ ಮಾತನಾಡಲು ನಾನು ಇನ್ನೂ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತೇ ಮಂದಿ ಅಲ್ಲಿ ಸಿಕ್ಕಾರು,” ಎನ್ನಲು, ಸರ್ವೇಶ್ವರ, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಅದನ್ನು ಉಳಿಸುತ್ತೇನೆ, ನಾಶಮಾಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆಮೇಲೆ ಅಬ್ರಹಾಮನು, “ನನ್ನ ಯೆಹೋವನು ಏನೂ ತಿಳಿದುಕೊಳ್ಳದಿರಲಿ. ನಾನು ಮತ್ತೊಂದು ಪ್ರಶ್ನೆ ಕೇಳುವೆ. ಅಲ್ಲಿ ಇಪ್ಪತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಇಪ್ಪತ್ತು ಮಂದಿ ನೀತಿವಂತರನ್ನು ಕಂಡರೆ ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವನು, “ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಬಂದಿದ್ದೇನೆ. ಒಂದು ವೇಳೆ ಇಪ್ಪತ್ತು ಮಂದಿ ಸಿಕ್ಕಿದರೆ ಏನು ಮಾಡುವಿರಿ?” ಎಂದನು. ಅದಕ್ಕೆ ದೇವರು, “ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 18:31
10 ತಿಳಿವುಗಳ ಹೋಲಿಕೆ  

ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ದಯೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾಸನದ ಮುಂದೆ ಬರೋಣ.


ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.


ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.


ಆದರೆ ಸ್ನೇಹದ ನಿವಿುತ್ತವಾಗಿ ಎದ್ದು ಕೊಡದೆ ಇದ್ದರೂ ಅವನ ಕಾಟದ ದೆಸೆಯಿಂದ ಎದ್ದು ಬಂದು ಕೇಳಿದಷ್ಟು ಅವನಿಗೆ ಕೊಡುವನೆಂದು ನಿಮಗೆ ಹೇಳುತ್ತೇನೆ.


ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ನಿಮಗೆ ತೆರೆಯುವದು;


ಅದಕ್ಕೆ ಅಬ್ರಹಾಮನು - ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಸ್ವಾವಿುಯ ಸಂಗಡ ವಾದಿಸುವದಕ್ಕೆ ಧೈರ್ಯಗೊಂಡಿದ್ದೇನೆ;


ಅಬ್ರಹಾಮನು - ಸ್ವಾಮೀ, ಕೋಪಮಾಡಬಾರದು; ಇನ್ನೂ ಮಾತಾಡುತ್ತೇನೆ; ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು ಎನ್ನಲು ಆತನು - ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ಅದನ್ನು ನಾಶಮಾಡುವದಿಲ್ಲ ಅಂದನು.


ಅಬ್ರಹಾಮನು - ಸ್ವಾಮೀ, ನಿನಗೆ ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು ಎನ್ನಲು ಆತನು - ಹತ್ತು ಮಂದಿಯ ನಿವಿುತ್ತವೂ ಅದನ್ನು ಉಳಿಸುವೆನು, ನಾಶಮಾಡುವದಿಲ್ಲ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು