Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:13 - ಕನ್ನಡ ಸತ್ಯವೇದವು J.V. (BSI)

13 ನಾವು ಈ ಸ್ಥಳವನ್ನು ನಾಶಮಾಡುವದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಲು ದೊಡ್ಡ ಮೊರೆಯು ಯೆಹೋವನಿಗೆ ಮುಟ್ಟಿದ್ದರಿಂದ ಇವರನ್ನು ನಾಶಮಾಡುವುದಕ್ಕಾಗಿ ಆತನು ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಂದ ಆಪಾದನೆ ದೊಡ್ಡದಾದುದರಿಂದ ಇವರನ್ನು ನಾಶಮಾಡುವುದಕ್ಕಾಗಿ ಸರ್ವೇಶ್ವರ ನಮ್ಮನ್ನು ಕಳಿಸಿದ್ದಾರೆ,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವು ಈ ನಗರವನ್ನು ನಾಶಮಾಡುತ್ತೇವೆ. ಈ ನಗರದ ದುಷ್ಟತನವನ್ನು ಯೆಹೋವನು ನೋಡಿದ್ದಾನೆ. ಆದ್ದರಿಂದ ಇದನ್ನು ನಾಶಮಾಡಲು ಆತನೇ ನಮ್ಮನ್ನು ಕಳುಹಿಸಿದ್ದಾನೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಏಕೆಂದರೆ ಈ ಸ್ಥಳದವರ ಕೂಗು ಯೆಹೋವ ದೇವರ ಸನ್ನಿಧಿಯಲ್ಲಿ ದೊಡ್ಡದಾಗಿರುವುದರಿಂದ ನಾವು ಇದನ್ನು ನಾಶ ಮಾಡುತ್ತೇವೆ. ಯೆಹೋವ ದೇವರು ನಮ್ಮನ್ನು ಕಳುಹಿಸಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:13
21 ತಿಳಿವುಗಳ ಹೋಲಿಕೆ  

ಇದಲ್ಲದೆ ಯೆಹೋವನು - ಸೊದೋಮ್ ಗೊಮೋರಗಳ ವಿಷಯವಾಗಿ ಎಷ್ಟೋ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು;


ಸೊದೋಮ ಗೊಮೋರ ಪಟ್ಟಣಗಳವರೂ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಸ್ವಭಾವವಿರುದ್ಧವಾದ ಭೋಗವನ್ನನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ [ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ] ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಆ ಘನವನ್ನು ಅವನು ದೇವರಿಗೆ ಸಲ್ಲಿಸದೆ ಹೋದದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.


ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಅಗೋ, ಆ ಕೂಲಿ ನಿಮ್ಮ ಮೇಲೆ ಕೂಗಿಕೊಳ್ಳುತ್ತದೆ; ಮತ್ತು ಕೊಯಿದವರ ಕೂಗು ಸಕಲಸೇನಾಧಿಪತಿಯಾಗಿರುವ ಕರ್ತನ ಕಿವಿಗಳಲ್ಲಿ ಬಿದ್ದಿದೆ.


ಆಗ ಯೆಹೋವನ ದೂತನು ಹೊರಟುಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲಾ ಹೆಣಗಳಾಗಿದ್ದರು.


ಈ ದೇಶವನ್ನು ಹಾಳುಮಾಡುವದಕ್ಕೆ ಯೆಹೋವನ ಚಿತ್ತವಿಲ್ಲದೆ ಬಂದೆನೆಂದು ನೆನಸುತ್ತೀಯೋ? ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು ಎಂದು ಯೆಹೋವನೇ ನನಗೆ ಆಜ್ಞಾಪಿಸಿದನು ಎನ್ನುವ ಅರಸನ ಮಾತುಗಳನ್ನು ತಿಳಿಸಿರಿ ಎಂದು ಹೇಳಿದನು.


ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ಲಭಿಸುವದಲ್ಲವೆ.


ಆದರೆ ಸೊದೋಮ್ ಪಟ್ಟಣದವರು ದುಷ್ಟರೂ ಯೆಹೋವನಿಗೆ ಮಹಾಪರಾಧಿಗಳೂ ಆಗಿದ್ದರು.


ಆಗ ಆ ದೂತರು ಲೋಟನಿಗೆ - ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಬೇರೆ ಎಲ್ಲರನ್ನೂ ಊರಹೊರಕ್ಕೆ ಕರೆದುಕೊಂಡು ಬಾ.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು; ನಿಮ್ಮ ಬೊಂಬೆಗಳ ಮುಂಡಗಳ ಮೇಲೆ ನಿಮ್ಮ ಮುಂಡಗಳನ್ನು ಬೀಸಾಡುವೆನು; ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.


ಆತನನ್ನು ಕೋಪಗೊಳಿಸಿದರೆ ನೀವು ಯೊರ್ದನ್ ಹೊಳೆಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ದೇಶದಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿ ಕರೆದು ಎಚ್ಚರಿಸುತ್ತೇನೆ. ನೀವು ಆ ದೇಶದಲ್ಲಿ ಬಹುದಿವಸ ಇರದೆ ನಾಶವಾಗಿಯೇ ಹೋಗುವಿರಿ.


ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆಯೂ ಆತನು ನೇವಿುಸಿದ ಆಜ್ಞಾವಿಧಿಗಳನ್ನು ಅನುಸರಿಸದೆಯೂ ಹೋದದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ ನಿಮ್ಮನ್ನು ಹಿಂದಟ್ಟಿ ಹಿಡಿದು ಕಡೆಗೆ ನಾಶಮಾಡುವವು.


ನೀವು ನಡಿಸಿದ ದುರಾಚಾರಗಳನ್ನೂ ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ಬೆರಗಿಗೂ ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು