Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:16 - ಕನ್ನಡ ಸತ್ಯವೇದವು J.V. (BSI)

16 ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಊರಾಚೆಗೆ ಬಿಟ್ಟರು. ಹೊರಗೆ ತಂದ ಮೇಲೆ ಆತನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ತಡಮಾಡಲು ಯೆಹೋವನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಮಕ್ಕಳನ್ನೂ ಕೈಹಿಡಿದು ಹೊರಗೆ ತಂದು ಪಟ್ಟಣದ ಆಚೆಗೆ ಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನು ಇನ್ನೂ ತಡಮಾಡುತ್ತಿರುವುದನ್ನು ಕಂಡು, ಆ ಮನುಷ್ಯರು ಅವನನ್ನು ಹಾಗು ಅವನ ಹೆಂಡತಿ ಮಕ್ಕಳನ್ನು ಕೈಹಿಡಿದು ಹೊರಗೆ ತಂದು ಊರಾಚೆಗೆ ಬಿಟ್ಟರು. ಸರ್ವೇಶ್ವರ ಸ್ವಾಮಿಗೆ ಅವನ ಮೇಲೆ ಅಷ್ಟು ಕನಿಕರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಲೋಟನು ಗಲಿಬಿಲಿಗೊಂಡು ತಡಮಾಡಲು ಆ ಇಬ್ಬರು ಪುರುಷರು ಲೋಟನನ್ನೂ ಅವನ ಹೆಂಡತಿಯನ್ನೂ ಅವನ ಇಬ್ಬರು ಹೆಣ್ಣುಮಕ್ಕಳನ್ನೂ ಕೈಹಿಡಿದುಕೊಂಡು ನಗರದ ಹೊರಕ್ಕೆ ಸುರಕ್ಷಿತವಾಗಿ ತಂದುಬಿಟ್ಟರು. ಹೀಗೆ ಯೆಹೋವನು ಲೋಟನಿಗೂ ಅವನ ಕುಟುಂಬದವರಿಗೂ ದಯೆತೋರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರು ತಡಮಾಡಿದಾಗ ಯೆಹೋವ ದೇವರು ಅವನನ್ನು ಕನಿಕರಿಸಿದ್ದರಿಂದ, ಆ ದೂತರು ಅವನ ಕೈಯನ್ನೂ, ಅವನ ಹೆಂಡತಿಯ ಕೈಯನ್ನೂ, ಅವನ ಇಬ್ಬರು ಪುತ್ರಿಯರ ಕೈಗಳನ್ನೂ ಹಿಡಿದು, ಅವರನ್ನು ಪಟ್ಟಣದ ಹೊರಗೆ ತಂದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:16
39 ತಿಳಿವುಗಳ ಹೋಲಿಕೆ  

ಕರ್ತನು ಭಕ್ತರನ್ನು ಕಷ್ಟಗಳೊಳಗಿಂದ ತಪ್ಪಿಸುವದಕ್ಕೂ ದುರ್ಮಾರ್ಗಿಗಳನ್ನು ನ್ಯಾಯತೀರ್ಪಿನ ದಿನದ ತನಕ ಶಿಕ್ಷಾನುಭವದಲ್ಲಿ ಇಡುವದಕ್ಕೂ ಬಲ್ಲವನಾಗಿದ್ದಾನೆ.


ನಾವು ಮಾಡಿದ ಪುಣ್ಯಕ್ರಿಯೆಗಳ ನಿವಿುತ್ತದಿಂದಲ್ಲ ಆತನ ಕರುಣೆಯಲ್ಲಿಯೇ ಪುನರ್ಜನ್ಮವನ್ನು ಸೂಚಿಸುವ ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನು ನಮ್ಮಲ್ಲಿ ನೂತನಸ್ವಭಾವವನ್ನು ಉಂಟುಮಾಡುವದರ ಮೂಲಕವಾಗಿಯೂ ಆತನು ನಮ್ಮನ್ನು ರಕ್ಷಿಸಿದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ; ಆತನು ಕನಿಕರವುಳ್ಳ ತಂದೆಯೂ ಸಕಲವಿಧವಾಗಿ ಸಂತೈಸುವ ದೇವರೂ ಆಗಿದ್ದು


ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಎಳೆದ ಹೊರತು ಯಾವನೂ ನನ್ನ ಬಳಿಗೆ ಬರಲಾರನು; ಮತ್ತು ನಾನು ಅವನನ್ನು ಕಡೇದಿನದಲ್ಲಿ ಎಬ್ಬಿಸುವೆನು.


ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ಎದೆಯನ್ನು ಬಡುಕೊಳ್ಳುತ್ತಾ - ದೇವರೇ, ಪಾಪಿಯಾದ ನನ್ನನ್ನು ಕರುಣಿಸು ಅಂದನು.


ನಾವು ಉಳಿದಿರುವದು ಯೆಹೋವನ ಕರುಣೆಯೇ; ಆತನ ಕೃಪಾವರಗಳು ನಿಂತುಹೋಗವು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾದದ್ದು.


ನಿನ್ನ ಆಜ್ಞೆಗಳನ್ನು ಅನುಸರಿಸುವದರಲ್ಲಿ ಆಸಕ್ತನಾದೆನು; ಆಲಸ್ಯಮಾಡಲಿಲ್ಲ.


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವು.


ಆತನು ತನ್ನ ಅದ್ಭುತಕೃತ್ಯಗಳ ಜ್ಞಾಪಕವನ್ನು ಉಳಿಯಮಾಡಿದ್ದಾನೆ. ಯೆಹೋವನು ದಯೆಯೂ ಕನಿಕರವೂ ಉಳ್ಳವನು.


ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವದು.


ಆದರೂ ಆತನು ತನ್ನ ಹೆಸರಿನ ನಿವಿುತ್ತವಾಗಿಯೂ ತನ್ನ ಶೌರ್ಯವನ್ನು ಪ್ರಕಟಿಸುವದಕ್ಕಾಗಿಯೂ ಅವರನ್ನು ರಕ್ಷಿಸಿದನು.


ಯಾಹುವಿಗೆ ಸ್ತೋತ್ರ! ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವದು.


ತಂದೆಯು ಮಕ್ಕಳನ್ನು ಕನಿಕರಿಸುವಂತೆ ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.


ಕರ್ತನೇ, ನೀನು ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ ನಂಬಿಕೆಯೂ ಉಳ್ಳವನು.


ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ.


ದೀರ್ಘಾಯುಷ್ಯವು ಬೇಕೋ? ಬಹುದಿವಸ ಬದುಕಿ ಸುಖವನ್ನು ಅನುಭವಿಸಬೇಕೋ?


ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು; ಆತನ ಕೃಪೆಯು ಶಾಶ್ವತವಾಗಿರುವದು.


ನಿಮ್ಮ ದೇವರಾದ ಯೆಹೋವನು ಕನಿಕರವುಳ್ಳ ದೇವರಾದದರಿಂದ ಆತನು ನಿಮ್ಮನ್ನು ಅಲಕ್ಷ್ಯಮಾಡುವದಿಲ್ಲ, ನಾಶನಕ್ಕೆ ಬಿಡುವದಿಲ್ಲ; ತಾನು ನಿಮ್ಮ ಪಿತೃಗಳ ಸಂಗಡ ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆಯುವದಿಲ್ಲ.


ಯೆಹೋವನು ದೀರ್ಘಶಾಂತನು, ಬಹು ಪ್ರೀತಿಯುಳ್ಳವನು, ಅಪರಾಧ ಪಾಪಗಳನ್ನು ಕ್ಷವಿುಸುವವನು; ಆದಾಗ್ಯೂ [ಅಪರಾಧಿಗಳನ್ನು] ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವನು ಎಂದು ಹೇಳಿದಿಯಲ್ಲಾ. ಈ ಮಾತಿಗೆ ದೃಷ್ಟಾಂತವನ್ನು ಕೊಟ್ಟು ನಿನ್ನ ಮಹಿಮೆಯನ್ನು ದೃಢಪಡಿಸಬೇಕು.


ಯೆಹೋವನು ಮೋಶೆಯ ಎದುರಾಗಿ ಹೋಗುತ್ತಾ ಪ್ರಕಟವಾಗಿ ಹೇಳಿದ್ದೇನಂದರೆ :- ಯೆಹೋವ, ಯೆಹೋವ ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಫಶಾಂತನೂ ಪ್ರೀತಿಯೂ ನಂಬಿಕೆಯೂ ಉಳ್ಳವನು;


ದೇವರು ಯಾರನ್ನು ಕರುಣಿಸಿದರೂ ಯಾರನ್ನು ಕಠಿಣಪಡಿಸಿದರೂ ಅದೆಲ್ಲವು ಆತನ ಇಷ್ಟಾನುಸಾರವಾಗಿಯೇ ಇದೆ ಎಂಬದು ಇದರಿಂದ ತೋರಿಬರುತ್ತದೆ.


ಯೆಹೋಶುವನು ದೇಶವನ್ನು ಸಂಚರಿಸಿ ನೋಡಿದ್ದ ಇಬ್ಬರು ಮನುಷ್ಯರಿಗೆ - ನೀವು ಆ ಸೂಳೆಯ ಮನೆಗೆ ಹೋಗಿ ಅವಳಿಗೆ ಪ್ರಮಾಣ ಮಾಡಿದಂತೆ ಅವಳನ್ನೂ ಅವಳಿಗಿರುವದೆಲ್ಲವನ್ನೂ ಹೊರಗೆ ತೆಗೆದುಕೊಂಡು ಬನ್ನಿರಿ ಎಂದು ಹೇಳಲು


ಆದರೆ ಆ ಅಧರ್ಮಿಗಳ ನಾಚಿಕೆಗೆಟ್ಟ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.


ಹೊತ್ತು ಮೂಡುವದಕ್ಕೆ ಮುಂಚೆ ಆ ದೂತರು ಲೋಟನಿಗೆ - ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣು ಮಕ್ಕಳನ್ನೂ ಬೇಗ ಕರಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು ಎಂದು ಹೇಳಿ ತ್ವರೆಪಡಿಸಿದರು.


ಸಾವಿರಾರು ತಲೆಗಳವರೆಗೂ ದಯೆತೋರಿಸುವವನು; ದೋಷಾಪರಾಧಪಾಪಗಳನ್ನು ಕ್ಷವಿುಸುವವನು; ಆದರೂ [ಅಪರಾಧಗಳನ್ನು] ಶಿಕ್ಷಿಸದೆ ಬಿಡದವನು; ತಂದೆಗಳ ದೋಷ ಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು ಎಂಬದೇ.


ಐಗುಪ್ತದೇಶದಲ್ಲಿ ನೀವೂ ದಾಸತ್ವದಲ್ಲಿದ್ದದ್ದನ್ನೂ ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂಬದನ್ನು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.


ನೀವು ಅವರಿಗೆ - ನಾವು ಐಗುಪ್ತದೇಶದಲ್ಲಿ ಫರೋಹನಿಗೆ ದಾಸರಾಗಿದ್ದಾಗ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡುಗಡೆ ಮಾಡಿದನು;


ಯೆಹೋವನು ನಿಮ್ಮನ್ನು ಪ್ರೀತಿಸಿ ತಾನು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿ ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.


ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವದು.


ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.


ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.


ನಾವು ತಡಮಾಡದಿದ್ದರೆ ಇಷ್ಟರೊಳಗೆ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು