Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 19:22 - ಕನ್ನಡ ಸತ್ಯವೇದವು J.V. (BSI)

22 ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಅಲ್ಲಿಗೆ ಮುಟ್ಟುವ ತನಕ ನಾನೇನೂ ಮಾಡುವದಕ್ಕಾಗುವದಿಲ್ಲ ಅಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಬೇಗ ಅಲ್ಲಿಗೆ ಹೋಗಿ ತಪ್ಪಿಸಿಕೋ; ನೀನು ಆ ಪಟ್ಟಣವನ್ನು ಮುಟ್ಟುವ ತನಕ ನಾನೇನೂ ಮಾಡುವುದಕ್ಕಾಗುವುದಿಲ್ಲ” ಎಂದನು. ಇದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಬೇಗನೆ ಅಲ್ಲಿಗೆ ಹೋಗಿ ಸುರಕ್ಷಿತವಾಗಿರು, ನೀನು ಅಲ್ಲಿಗೆ ಮುಟ್ಟುವ ತನಕ ನಾನು ಏನನ್ನೂ ಮಾಡಲಿಕ್ಕಾಗುವುದಿಲ್ಲ,” ಎಂದನು. ಲೋಟನು ಆ ಊರನ್ನು ಚಿಕ್ಕದು ಎಂದು ಕರೆದುದಕ್ಕಾಗಿ ಅದಕ್ಕೆ “ಚೋಗರ್” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ಅಲ್ಲಿಗೆ ಬೇಗನೆ ಓಡಿಹೋಗು, ನೀನು ಆ ಊರಿಗೆ ಸುರಕ್ಷಿತವಾಗಿ ಸೇರುವತನಕ ನಾನು ಸೊದೋಮನ್ನು ನಾಶಗೊಳಿಸಲಾಗುವುದಿಲ್ಲ” ಎಂದು ಹೇಳಿದನು. (ಆ ಊರಿಗೆ ಚೋಗರ್ ಎಂದು ಕರೆಯಲಾಯಿತು; ಯಾಕೆಂದರೆ ಅದು ಚಿಕ್ಕ ಊರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಬೇಗನೆ ತಪ್ಪಿಸಿಕೊಂಡು ಅಲ್ಲಿಗೆ ಹೋಗು, ಏಕೆಂದರೆ ನೀನು ಅಲ್ಲಿ ಸೇರುವ ತನಕ ನಾನೇನೂ ಮಾಡಲಾರೆನು,” ಎಂದನು. ಆದ್ದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 19:22
15 ತಿಳಿವುಗಳ ಹೋಲಿಕೆ  

ಲೋಟನು ಕಣ್ಣೆತ್ತಿ ನೋಡಲಾಗಿ ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರೂರಿನ ತನಕ ಎಲ್ಲಾ ಕಡೆಯಲ್ಲಿಯೂ ನೀರಾವರಿಯ ಸ್ಥಳವೆಂದು ತಿಳುಕೊಂಡನು. ಯೆಹೋವನು ಸೊದೋಮ್‍ಗೊಮೋರ ಪಟ್ಟಣಗಳನ್ನು ನಾಶಮಾಡುವದಕ್ಕಿಂತ ಮುಂಚೆ ಆ ಸೀಮೆಯು ಯೆಹೋವನ ವನದಂತೆಯೂ ಐಗುಪ್ತದೇಶದಂತೆಯೂ ನೀರಾವರಿಯಾಗಿತ್ತು.


ಈಗ ಲವಣಸಮುದ್ರವಾಗಿರುವ ಸಿದ್ದೀಮ್ ತಗ್ಗಿನೊಳಗೆ ಕೂಡಿದ್ದ ಸೊದೋವಿುನ ಅರಸನಾದ ಬೆರಗನು, ಗೊಮೋರದ ಅರಸನಾದ ಬಿರ್ಶಗನು, ಅದ್ಮಾಹದ ಅರಸನಾದ ಶಿನಾಬನು, ಚೆಬೋಯೀವಿುನ ಅರಸನಾದ ಶೆಮೇಬರನು, ಬೇಲಗಿನ ಅಂದರೆ ಚೋಗರದ ಅರಸನು ಇವರೊಡನೆ ಯುದ್ಧಮಾಡಿದರು.


ಬಿಡು, ನಾನು ಅವರನ್ನು ನಾಶಮಾಡಿ ಅವರ ಹೆಸರನ್ನು ಭೂವಿುಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾಬಲಿಷ್ಠ ಜನಾಂಗವು ನಿನ್ನಿಂದುಂಟಾಗುವಂತೆ ಮಾಡುವೆನು ಎಂದು ಹೇಳಿದನು.


ಆದಕಾರಣ ನೀನು ನನ್ನನ್ನು ತಡೆಯಬೇಡ; ನನ್ನ ಕೋಪಾಗ್ನಿ ಉರಿಯಲಿ, ಅವರನ್ನು ಭಸ್ಮಮಾಡುವೆನು. ತರುವಾಯ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗವುಂಟಾಗುವಂತೆ ಮಾಡುವೆನು ಎಂದು ಹೇಳಿದನು.


ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ತನ್ನ ಸ್ವಭಾವಕ್ಕೆ ವಿರುದ್ಧವಾಗಿ ಏನೂ ಮಾಡಲಾರನು.


ಆತನು ಅಲ್ಲಿ ಕೆಲವು ಮಂದಿ ರೋಗಿಗಳ ಮೇಲೆ ಕೈಯಿಟ್ಟು ಸ್ವಸ್ಥಮಾಡಿದ್ದೇ ಹೊರತು ಬೇರೆ ಯಾವ ಮಹತ್ಕಾರ್ಯವನ್ನೂ ಮಾಡುವದಕ್ಕಾಗಲಿಲ್ಲ.


ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಅರಿಚಿಕೊಳ್ಳುತ್ತಾರೆ. ಚೋಯರಿನಿಂದ ಹೊರೊನಯಿವಿುನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.


ಯೆಹೋವನು ಹೀಗನ್ನುತ್ತಾನೆ - ರಸ ದೊರೆಯಬಹುದಾದ ದ್ರಾಕ್ಷೆಯ ಗೊಂಚಲನ್ನು ಒಬ್ಬನು ನೋಡಿ - ಹಾಳುಮಾಡಬೇಡ, ಅದರಲ್ಲಿ ಪ್ರಯೋಜನವಿದೆ ಎನ್ನುವಂತೆ ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು ಇವರನ್ನೆಲ್ಲಾ ಹಾಳುಮಾಡಬಾರದು ಎಂದು ಅಂದುಕೊಳ್ಳುವೆನು,


ನನ್ನ ಹೃದಯವು ಮೋವಾಬಿನ ನಿವಿುತ್ತವಾಗಿ ಮೊರೆಯಿಡುತ್ತದೆ; ಅಲ್ಲಿಂದ ಪಲಾಯನವಾದವರು ಚೋಯರಿಗೂ ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀಥ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿವಿುನ ದಾರಿಯಲ್ಲಿ ನಡೆಯುತ್ತಾ ನಾಶನವಾದೆವಲ್ಲಾ ಎಂದು ದನಿಗೈಯುತ್ತಾರೆ.


ಅದಕ್ಕಾತನು - ಈ ವಿಷಯದಲ್ಲಿಯೂ ನಿನಗೆ ಅನುಗ್ರಹಮಾಡಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡಹುವದಿಲ್ಲ.


ಲೋಟನು ಚೋಗರಿಗೆ ಮುಟ್ಟುವಷ್ಟರಲ್ಲಿ ಸೂರ್ಯನು ಮೂಡಿದನು.


ದಕ್ಷಿಣಪ್ರದೇಶ, ಚೋಗರೂರಿನ ತನಕ ಯೆರಿಕೋ ಎಂಬ ಖರ್ಜೂರಗಳ ಪಟ್ಟಣದ ಸುತ್ತಲಿರುವ ಮೈದಾನ ಇದನ್ನೆಲ್ಲಾ ಅವನಿಗೆ ತೋರಿಸಿ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು