Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 2:17 - ಕನ್ನಡ ಸತ್ಯವೇದವು J.V. (BSI)

17 ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದ ದಿನ ಸತ್ತೇಹೋಗುವಿ ಎಂದು ವಿಧಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ ಒಳಿತು - ಕೆಡಕುಗಳ ಅರಿವನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದೆಯಾದರೆ, ಅದೇ ದಿನ ಸತ್ತುಹೋಗುವೆ,” ಎಂದು ವಿಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಒಳ್ಳೆಯದು ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರದ ಹಣ್ಣನ್ನು ಮಾತ್ರ ನೀನು ತಿನ್ನಕೂಡದು. ಒಂದುವೇಳೆ ಆ ಮರದ ಹಣ್ಣನ್ನು ತಿಂದರೆ ನೀನು ಸಾಯುವೆ!” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಒಳ್ಳೆಯದರ, ಕೆಟ್ಟದ್ದರ ತಿಳುವಳಿಕೆಯ ಮರದ ಹಣ್ಣನ್ನು ನೀನು ತಿನ್ನಬಾರದು. ಏಕೆಂದರೆ, ನೀನು ಅದನ್ನು ತಿಂದ ದಿನವೇ ಸಾಯುವಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 2:17
43 ತಿಳಿವುಗಳ ಹೋಲಿಕೆ  

ಯಾಕಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಉಚಿತಾರ್ಥವರವು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ.


ಆಮೇಲೆ ಆಶೆಯು ಬಸುರಾಗಿ ಪಾಪವನ್ನು ಹೆರುತ್ತದೆ; ಪಾಪವು ತುಂಬಾ ಬೆಳೆದು ಮರಣವನ್ನು ಹಡೆಯುತ್ತದೆ.


ನೀನು ತಿರಿಗಿ ಮಣ್ಣಿಗೆ ಸೇರುವತನಕ ಬೆವರಿಡುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಲ್ಲವೋ; ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ ಎಂದು ಹೇಳಿದನು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಅಪರಾಧಗಳನ್ನು ಮಾಡುವದರಿಂದಲೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ಸಹ ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ.


ಆದರೆ ಭೋಗಿಯಾಗಿರುವ ವಿಧವೆಯು ಬದುಕಿರುವಾಗಲೂ ಸತ್ತವಳೇ.


ನೇಮನಿಷ್ಠೆಗಳನ್ನು ಆಧಾರಮಾಡಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ಧರ್ಮಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತನೆಂದು ಶಾಸ್ತ್ರದಲ್ಲಿ ಬರೆದದೆ.


ಯಾವ ಪ್ರಕಾರ ಆದಾಮನ ಸಂಬಂಧದಿಂದ ಎಲ್ಲರೂ ಸಾಯುವವರಾದರೋ ಅದೇ ಪ್ರಕಾರ ಕ್ರಿಸ್ತನ ಸಂಬಂಧದಿಂದ ಎಲ್ಲರೂ ಜೀವಿತರಾಗುವರು.


ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ; ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುವದಿಲ್ಲ.


ಮರಣದ ಕೊಂಡಿ ಪಾಪವೇ; ಮತ್ತು ಪಾಪದ ಬಲಕ್ಕೆ ಆಧಾರವು ಧರ್ಮಶಾಸ್ತ್ರವೇ.


ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವದಲ್ಲದೆ ಮಾಡುವವರನ್ನೂ ಅನುಮೋದಿಸುತ್ತಾರೆ.


ಸಾಯುವವರ ಸಾವಿನಲ್ಲಿ ನನಗೆ ಸಂತೋಷವಿಲ್ಲ; ತಿರುಗಿಕೊಂಡು ಬಾಳಿರಿ; ಇದು ಕರ್ತನಾದ ಯೆಹೋವನ ನುಡಿ.


ಮತ್ತು ಪುರುಷನಿಗೆ - ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನೀನು ಹೆಂಡತಿಯ ಮಾತು ಕೇಳಿ ತಿಂದಕಾರಣ ನಿನ್ನ ನಿವಿುತ್ತ ಭೂವಿುಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ದುಡಿದು ದುಡಿದು ಭೂವಿುಯ ಹುಟ್ಟುವಳಿಯನ್ನು ತಿನ್ನಬೇಕು.


ಅದಕ್ಕಾತನು - ನೀನು ಬೆತ್ತಲೆಯಾಗಿದ್ದಿ ಎಂದು ನಿನಗೆ ತಿಳಿಸಿದವರಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿಯಾ ಎಂದು ಕೇಳಲು


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; [ನಂಬಿಕೆಯೆಂಬ] ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ.


ನಾನು ದುಷ್ಟನಿಗೆ - ದುಷ್ಟನೇ, ಸತ್ತೇಸಾಯುವಿ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆ ಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವದು; ಅವನ ಮರಣಕ್ಕೆ ಹೊಣೆಯಾದ ನಿನಗೆ ನಾನು ಮುಯ್ಯಿತೀರಿಸುವೆನು.


ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.


ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ಯಾಕಂದರೆ ಜೀವವನ್ನುಂಟುಮಾಡುವ ಪವಿತ್ರಾತ್ಮನಿಂದಾದ ನಿಯಮವು ನಿನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ಕ್ರಿಸ್ತ ಯೇಸುವಿನ ಮೂಲಕ ಬಿಡಿಸಿತು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.


ನಾನು ದುಷ್ಟನಿಗೆ - ನೀನು ಸತ್ತೇ ಸಾಯುವಿ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನೀತಿನ್ಯಾಯಗಳನ್ನು ನಡಿಸುವ ಪಕ್ಷದಲ್ಲಿ,


ನಾನು ಜೀವಮರಣಗಳನ್ನೂ ಆಶೀರ್ವಾದಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮ್ಯಾಕಾಶಗಳು ಸಾಕ್ಷಿಗಳಾಗಿರಲಿ. ಆದದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆದುಕೊಳ್ಳಿರಿ;


ನೋಡಿರಿ; ನಾನು ಜೀವಶುಭಗಳನ್ನೂ ಮರಣಾಶುಭಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ.


ಸಾಲಕ್ಕೆ ಬಡ್ಡಿತೆಗೆದು ಲಾಭಕ್ಕೆ ಹಣಕೊಟ್ಟು ಬಲಾತ್ಕಾರಿಯೂ ರಕ್ತ ಸುರಿಸುವವನೂ ಆಗಿದ್ದರೆ ಬಾಳುವನೇ? ಬಾಳಲೇ ಬಾಳನು; ಈ ದುರಾಚಾರಗಳನ್ನೆಲ್ಲಾ ನಡಿಸಿದನಲ್ಲಾ; ಸತ್ತೇ ಸಾಯುವನು; ತನ್ನ ಮರಣದಂಡನೆಗೆ ತಾನೇ ಕಾರಣ.


ನೀನು ಈ ಊರನ್ನು ಬಿಟ್ಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವದೆಂದು ಖಂಡಿತವಾಗಿ ಹೇಳಿ ಯೆಹೋವನ ಹೆಸರಿನಲ್ಲಿ ನಿನ್ನಿಂದ ಪ್ರಮಾಣತೆಗೆದುಕೊಂಡೆನಲ್ಲವೋ?


ಇಸ್ರಾಯೇಲ್ಯರ ರಕ್ಷಕನಾದ ಯೆಹೋವನ ಆಣೆ, ಪಾಪಮಾಡಿದವನು ನನ್ನ ಮಗನಾದ ಯೋನಾತಾನನಾಗಿದ್ದರೂ ಸರಿಯೇ ಅವನು ಸಾಯಲೇಬೇಕು ಎಂದು ಹೇಳಿದನು; ಜನರು ಏನೂ ಮಾತಾಡದೆ ಮೌನವಾಗಿದ್ದರು.


ಅವರು - ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನಷ್ಟೆ; ಆದದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರೇ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.


ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ತಿರಿಗಿ ಅವನಿಗೆ ಒಪ್ಪಿಸಿ ಬಿಡು. ಅವನು ಪ್ರವಾದಿ, ನಿನಗೋಸ್ಕರ ನನಗೆ ಪ್ರಾರ್ಥಿಸುವನು, ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸುವದಿಲ್ಲವೆಂದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೋ ಎಂದು ಕನಸಿನಲ್ಲಿ ಹೇಳಿದನು.


ಮತ್ತು ಯೆಹೋವದೇವರು ನೋಟಕ್ಕೆ ರಮ್ಯವಾಗಿಯೂ ಊಟಕ್ಕೆ ಅನುಕೂಲವಾಗಿಯೂ ಇರುವ ಎಲ್ಲಾ ತರದ ಮರಗಳನ್ನು ಆ ಭೂವಿುಯಲ್ಲಿ ಬೆಳೆಯ ಮಾಡಿದನು. ಅದಲ್ಲದೆ ಆ ವನಮಧ್ಯದಲ್ಲಿ ಜೀವದಾಯಕ ವೃಕ್ಷವನ್ನೂ ಒಳ್ಳೇದರ ಕೆಟ್ಟದ್ದರ ಅರುಹನ್ನು ಹುಟ್ಟಿಸುವ ವೃಕ್ಷವನ್ನೂ ಬೆಳೆಯಿಸಿದನು.


ಪ್ರಥಮ ಪುನರುತ್ಥಾನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರುಷ ಆಳುವರು.


ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು ನಿನಗೆ ಮರಣವೇ ಆಗಬೇಕು;


ಆಗ ಅರಸನು ಅವನಿಗೆ - ಅಹೀಮೆಲೆಕನೇ, ನೀನೂ ನಿನ್ನ ಮನೆಯವರೂ ಸಾಯಲೇಬೇಕು ಎಂದು ಹೇಳಿ ತನ್ನ ಬಳಿಯಲ್ಲಿದ್ದ ಸಿಪಾಯಿಗಳಿಗೆ -


ಆ ಇಷಯನ ಮಗನು ಭೂಲೋಕದಲ್ಲಿರುವವರೆಗೆ ನಿನಗಾದರೂ ನಿನ್ನ ರಾಜ್ಯಕ್ಕಾದರೂ ನೆಲೆಯಿಲ್ಲ; ಆದದರಿಂದ ಅವನನ್ನು ಕರಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ; ಅವನು ಸಾಯಬೇಕು ಅಂದನು.


ಅದಕ್ಕೆ ಸೌಲನು - ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ ಅನ್ನಲು ಜನರು ಅವನಿಗೆ -


ನೀನು ಇದನ್ನು ಬಿಟ್ಟು ಕಿದ್ರೋನ್‍ಹಳ್ಳದ ಆಚೆಗೆ ಹೋದಿಯಾದರೆ ಅದೇ ದಿವಸದಲ್ಲಿ ನಿನಗೆ ಮರಣಶಿಕ್ಷೆಯಾಗುವದೆಂದು ತಿಳಿದುಕೋ; ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವದು ಎಂದು ಹೇಳಿದನು.


ಇಸ್ರಾಯೇಲ್ ಸಂತತಿಯವರಲ್ಲಿ ಯುದ್ಧವಿದ್ಯೆಯನ್ನು ಅರಿಯದವರಿಗೆ ಅದನ್ನು ಕಲಿಸಿಕೊಡುವದಕ್ಕೂ ಯೆಹೋವನು ಉಳಿಸಿದ ಜನಾಂಗಗಳವರು ಯಾರಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು