Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:11 - ಕನ್ನಡ ಸತ್ಯವೇದವು J.V. (BSI)

11 ಅದಕ್ಕೆ ಅಬ್ರಹಾಮನು - ಈ ಸ್ಥಳದವರು ದೇವರ ಭಯವಿಲ್ಲದವರಾಗಿ ನನ್ನ ಹೆಂಡತಿಯ ನಿವಿುತ್ತ ನನ್ನನ್ನು ಕೊಂದಾರೆಂದು ನೆನಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಅಬ್ರಹಾಮನು, “ಇಲ್ಲಿಯ ಜನರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದೂ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರು ಎಂದೂ ಭಾವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅಬ್ರಹಾಮನು ಅವನಿಗೆ, “ನನಗೆ ಹೆದರಿಕೆಯಾಗಿತ್ತು. ಈ ಸ್ಥಳದವರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದು ನಾನು ಭಾವಿಸಿಕೊಂಡೆ. ಯಾರಾದರೂ ನನ್ನನ್ನು ಕೊಂದು ಸಾರಳನ್ನು ತೆಗೆದುಕೊಳ್ಳಬಹುದೆಂದು ಯೋಚಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಅಬ್ರಹಾಮನು, “ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ನೆನಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:11
16 ತಿಳಿವುಗಳ ಹೋಲಿಕೆ  

ಕೃಪಾಸತ್ಯತೆಗಳಿಂದ ಪಾಪನಿವಾರಣೆ; ಯೆಹೋವನ ಭಯಭಕ್ತಿಯಿಂದ ಹಾನಿ ನಿವಾರಣೆ.


ಆಗ ನೀನು ಯೆಹೋವನ ಭಯವನ್ನು ಅರಿತು ದೈವಜ್ಞಾನವನ್ನು ಪಡೆದುಕೊಳ್ಳುವಿ.


ನನಗಿಂತ ಮುಂಚೆಯಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ [ದಿನಕ್ಕೆ] ನಾಲ್ವತ್ತು ರೂಪಾಯಿಯ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡಿಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವದರಿಂದ ಹಾಗೆ ಮಾಡದೆ ಆ ಗೋಡೆ ಕಟ್ಟುವದರಲ್ಲಿ ನಿರತನಾಗಿದ್ದೆನು.


ಕೇಳು, ನೀನು ಸುಂದರಿ ಎಂದು ನಾನು ಬಲ್ಲೆ; ಐಗುಪ್ತದೇಶದವರು ನಿನ್ನನ್ನು ಕಂಡು - ಈಕೆಯು ಇವನ ಹೆಂಡತಿ ಎಂದು ನನ್ನನ್ನು ಕೊಂದು ನಿನ್ನನ್ನು ಉಳಿಸಾರು.


ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು.


ಮೂರನೆಯ ದಿನದಲ್ಲಿ ಯೋಸೇಫನು ಅವರನ್ನು ಕರಸಿ - ನಾನು ದೇವರಿಗೆ ಭಯಪಡುವವನು; ನೀವು ಸತ್ಯವಂತರಾಗಿದ್ದರೆ ಒಂದು ಕೆಲಸವನ್ನು ಮಾಡಿ ಬದುಕಿಕೊಳ್ಳಿರಿ.


ಆ ದೂತನು ಅವನಿಗೆ - ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು.


ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ.


ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.


ಯೆಹೋವನ ಭಯವೇ ತಿಳುವಳಿಕೆಗೆ ಮೂಲವು, ಮೂರ್ಖರಾದರೋ ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆ ಮಾಡುವರು.


ದುಷ್ಟತ್ವವನ್ನು ನಡಿಸುವವರೆಲ್ಲರು ತಿಳಿಯುವದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವದಿಲ್ಲ.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು.


ನೀನು ಯಾವ ಉದ್ದೇಶದಿಂದ ಈ ಕಾರ್ಯವನ್ನು ಮಾಡಿದೆ ಎಂದು ಅಬ್ರಹಾಮನನ್ನು ಕೇಳಿದನು.


ಅದಲ್ಲದೆ ಆಕೆ ನಿಜವಾಗಿ ನನ್ನ ತಂಗಿ ನನ್ನ ತಂದೆಯ ಮಗಳೇ; ಆದರೆ ನನ್ನ ತಾಯಿಯ ಮಗಳಲ್ಲವಾದದರಿಂದ ನನಗೆ ಹೆಂಡತಿಯಾದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು