Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 20:16 - ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಅವನು ಸಾರಳಿಗೆ - ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಲಕ್ಷ್ಯಕ್ಕೆ ತೆಗೆದುಕೊಳ್ಳದಂತೆ ಇದು ಪ್ರಾಯಶ್ಚಿತ್ತವಾಗಿರಲಿ; ನೀನು ಮಾನಸ್ಥಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ಅವನು ಸಾರಳಿಗೆ, “ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಗಮನಕ್ಕೆ ತೆಗೆದುಕೊಳ್ಳದಂತೆ ಇರಲು ಇದು ಪ್ರಾಯಶ್ಚಿವಾಗಿರಲಿ; ನೀನು ಮಾನಸ್ಥಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸಾರಳಿಗೆ ಅವನು ಹೇಳಿದ್ದೇನೆಂದರೆ, “ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟಿದ್ದೇನೆ. ಇದರಿಂದ ನೀನು ನಿರ್ದೋಷಿಯೆಂದು ರುಜುವಾತಾಗಲಿ; ನೀನು ತಪ್ಪು ಮಾಡಿಲ್ಲವೆಂದು ಎಲ್ಲರಿಗೂ ಸ್ಪಷ್ಟವಾಗಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಬೀಮೆಲೆಕನು ಸಾರಳಿಗೆ, “ನಾನು ನಿನ್ನ ಅಣ್ಣನಾದ ಅಬ್ರಹಾಮನಿಗೆ ಒಂದು ಸಾವಿರ ಬೆಳ್ಳಿಯ ನಾಣ್ಯಗಳನ್ನು ಕೊಡುವೆ. ನಡೆದ ಈ ಘಟನೆಗಳಿಗೆ ಇದು ಪ್ರಾಯಶ್ಚಿತ್ತವಾಗಿದೆ. ನೀನು ನಿಷ್ಕಳಂಕಳೆಂದು ಇದು ಪ್ರತಿಯೊಬ್ಬರಿಗೂ ಸಾಕ್ಷಿಯಾಗಿರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸಾರಳಿಗೆ, “ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣವನ್ನು ಕೊಟ್ಟಿದ್ದೇನೆ. ನೋಡು, ನಡೆದ ಘಟನೆಗೆ ಇದು ಪ್ರಾಯಶ್ಚಿತ್ತವಾಗಿದೆ. ನಿನ್ನ ಸಂಗಡ ಇರುವವರೆಲ್ಲರಿಗೂ ಉಳಿದವರೆಲ್ಲರಿಗೂ ನೀನು ನಿರ್ದೋಷಿಯೆಂದು ಇದು ಸಾಕ್ಷಿಯಾಗಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 20:16
11 ತಿಳಿವುಗಳ ಹೋಲಿಕೆ  

[ಕಾರ್ಯದಿಂದ] ಹೊರಪಡದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯು ಲೇಸು.


ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ತಾನೇ ಹೇಳಲಿಲ್ಲವೇ. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯರ್ಥಾರ್ಥಮನಸ್ಸಿನಿಂದಲೂ ಶುದ್ಧಹಸ್ತದಿಂದಲೂ ಇದನ್ನು ಮಾಡಿದೆನು ಅಂದನು.


ನಮ್ಮನ್ನು ಎದುರುಗೊಳ್ಳುವದಕ್ಕೆ ಅಡವಿಯಲ್ಲಿ ನಡೆದು ಬರುವ ಆ ಮನುಷ್ಯನು ಯಾರೆಂದು ಆ ಸೇವಕನನ್ನು ಕೇಳಿದಳು. ಅವನೇ ನನ್ನ ದಣಿಯೆಂದು ಅವನು ಹೇಳಿದಾಗ ಆಕೆ ಮುಸುಕುಹಾಕಿಕೊಂಡಳು.


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ.


ಹೀಗಿರಲು ಹಡಗಿನ ಯಜಮಾನನು ಅವನ ಬಳಿಗೆ ಬಂದು - ಇದೇನು, ನಿದ್ದೆ ಮಾಡುತ್ತೀ! ಎದ್ದು ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾಶವಾಗದೆ ಉಳಿದೇವು ಎಂದು ಹೇಳಿದನು.


ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ ಅಪರಂಜಿಯ ಆಭರಣಕ್ಕೂ ಸಮಾನ.


ತಿಳುವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ; ಪಶುಪ್ರಾಯನು ಗದರಿಕೆಯನ್ನು ದ್ವೇಷಿಸುತ್ತಾನೆ.


ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ತಪ್ಪದೆ ಮರಣದಂಡನೆಯಾಗುವದು ಎಂದು ಆಜ್ಞೆಮಾಡಿದನು.


ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ ಅವನ ಪತ್ನಿಯನ್ನೂ ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು