Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:14 - ಕನ್ನಡ ಸತ್ಯವೇದವು J.V. (BSI)

14 ಮಾರಣೇ ದಿನ ಬೆಳಿಗ್ಗೆ ಅಬ್ರಹಾಮನು ಎದ್ದು ಹಾಗರಳಿಗೆ ಬುತ್ತಿಯನ್ನೂ ಒಂದು ತಿತ್ತಿ ತಣ್ಣೀರನ್ನೂ ಕೊಟ್ಟು ಅವಳ ಹೆಗಲಿನ ಮೇಲೆ ಇಟ್ಟು ಮಗುವನ್ನು ಒಪ್ಪಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮರುದಿನ ಮುಂಜಾನೆ, ಅಬ್ರಹಾಮನು ಸ್ವಲ್ಪ ಆಹಾರವನ್ನು ಮತ್ತು ಸ್ವಲ್ಪ ನೀರನ್ನು ತೆಗೆದು ಹಾಗರಳಿಗೆ ಕೊಟ್ಟನು. ಹಾಗರಳು ಅವುಗಳನ್ನು ತೆಗೆದುಕೊಂಡು ತನ್ನ ಮಗನೊಡನೆ ಅಲ್ಲಿಂದ ಹೊರಟುಹೋದಳು. ಹಾಗರಳು ಆ ಸ್ಥಳವನ್ನು ಬಿಟ್ಟು ಬೇರ್ಷೆಬದ ಮರಳುಗಾಡಿನಲ್ಲಿ ಅಲೆಯತೊಡಗಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ, ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು, ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ, ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಮರುಭೂಮಿಯಲ್ಲಿ ಅಲೆದಾಡುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:14
28 ತಿಳಿವುಗಳ ಹೋಲಿಕೆ  

ದಾಸನು ಮನೆಯಲ್ಲಿ ಶಾಶ್ವತವಾಗಿ ಇರುವದಿಲ್ಲ; ಮಗನು ಶಾಶ್ವತವಾಗಿ ಇರುವನು;


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.


ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನು ಶಪಿಸುವವನೆನಿಸಿಕೊಳ್ಳುವನು.


ನಿನ್ನ ಆಜ್ಞೆಗಳನ್ನು ಅನುಸರಿಸುವದರಲ್ಲಿ ಆಸಕ್ತನಾದೆನು; ಆಲಸ್ಯಮಾಡಲಿಲ್ಲ.


ಅವರು ಅರಣ್ಯದಲ್ಲಿಯೂ ಮರಳುಕಾಡಿನಲ್ಲಿಯೂ ದಾರಿತಪ್ಪಿ ಅಲೆಯುವವರಾಗಿ ಜನವಿರುವ ಊರನ್ನು ಕಾಣದೆ


ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.


ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಇಸಾಕನು ಅವರನ್ನು ಸಾಗಕಳುಹಿಸಲು ಅವರು ಸಮಾಧಾನದೊಡನೆ ಹೊರಟುಹೋದರು.


ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿದನು.


ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಹೆಸರಾಯಿತು.


ಅವಳು ಮರಳುಕಾಡಿನಲ್ಲಿ ಶೂರಿನ ಮಾರ್ಗದ ಒರತೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು -


ಹೆಷ್ಬೋನಿನ ಭೂವಿುಯೂ ಸಿಬ್ಮದ ದ್ರಾಕ್ಷಾಲತೆಯೂ ನಿಸ್ಸಾರವಾಗಿವೆ; ಯಜ್ಜೇರಿನವರೆಗೆ ವ್ಯಾಪಿಸಿ ಅರಣ್ಯದಲ್ಲಿ ಹಬ್ಬಿ ಸಮುದ್ರದಾಚೆಗೆ ಸೇರುವಷ್ಟು ವಿಶಾಲವಾಗಿ ತನ್ನ ಶಾಖೆಗಳನ್ನು ಹರಡಿಕೊಂಡಿದ್ದ ಮೋವಾಬಿನ ರಾಜ ದ್ರಾಕ್ಷೆಗಳನ್ನು ಜನಾಂಗಗಳ ಒಡೆಯರು ಮುರಿದು ಬಿಟ್ಟಿದ್ದಾರೆ.


ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು ಪ್ರಯಾಣಮಾಡಿ ಬೇರ್ಷಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಮಾಡಿದನು.


ಅವನು ಶೆಕೆವಿುಗೆ ಬಂದು ಅಲ್ಲಿ ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು -


ಅವನು ಆ ಬಾವಿಗೆ ಷಿಬಾ ಎಂದು ಹೆಸರಿಟ್ಟನು. ಆದದರಿಂದ ಅಲ್ಲಿರುವ ಊರಿಗೆ ಇಂದಿನವರೆಗೂ ಬೇರ್ಷೆಬ ಎಂದು ಹೆಸರಾಯಿತು.


ಬಳಿಕ ಅವನೂ ಅವನ ಸಂಗಡ ಬಂದ ಮನುಷ್ಯರೂ ಊಟ ಉಪಚಾರಗಳನ್ನು ತೀರಿಸಿಕೊಂಡು ರಾತ್ರಿಯೆಲ್ಲಾ ಅಲ್ಲೇ ಇದ್ದರು. ಬೆಳಿಗ್ಗೆ ಎದ್ದಾಗ ಅವನು - ನನ್ನ ದಣಿಯ ಬಳಿಗೆ ಹೊರಡುವದಕ್ಕೆ ನನಗೆ ಅಪ್ಪಣೆಯಾಗಲಿ ಎಂದು ಕೇಳಲು


ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ತಿರಿಗಿ ಬಂದನು. ಅವರು ಹೊರಟು ಅವನ ಜೊತೆಯಲ್ಲಿ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸವಾಗಿದ್ದನು.


ಬೆಳಿಗ್ಗೆ ಅಬ್ರಹಾಮನು ಎದ್ದು ಕತ್ತೆಗೆ ತಡಿಹಾಕಿಸಿ ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡಿಸಿ ತನ್ನ ಸೇವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲವೃಕ್ಷವನ್ನು ನೆಟ್ಟು ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.


ಇತ್ತಲಾಗಿ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ತಿರಿಗಿ ಬಂದು


ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದ್ದರಿಂದ ಅವನಿಂದಲೂ ಜನಾಂಗವಾಗುವಂತೆ ಮಾಡುವೆನು ಎಂದು ಹೇಳಿದನು.


ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಹಾಕಿ


ಸ್ಥಳವನ್ನು ಬಿಟ್ಟು ಅಲೆಯುವ ಮನುಷ್ಯನು ಗೂಡನ್ನು ಬಿಟ್ಟು ಅಲೆಯುವ ಹಕ್ಕಿಯ ಹಾಗೆ.


ಹೊತ್ತಾರೆ ಅವನು ಎದ್ದಾಗ ತಾನು ತಲೆಗಿಂಬಿಗೆ ಇಟ್ಟುಕೊಂಡಿದ್ದ ಕಲ್ಲನ್ನು ಕಂಬವಾಗಿ ನಿಲ್ಲಿಸಿ ಅದರ ತುದಿಯಲ್ಲಿ ಎಣ್ಣೇ ಹೊಯಿದನು.


ಯೆಹೋಶುವನು ಬೆಳಿಗ್ಗೆ ಎದ್ದನು; ಅವನೂ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲಿ ಇಳುಕೊಂಡರು.


ಅವನು ಬೆಳಿಗ್ಗೆ ಎದ್ದು ಸೌಲನನ್ನು ನೋಡುವದಕ್ಕೆ ಹೊರಟಾಗ ಅವನಿಗೆ - ಸೌಲನು ಕರ್ಮೆಲಿಗೆ ಹೋಗಿ ಅಲ್ಲಿ ತನಗೋಸ್ಕರ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ ಅಲ್ಲಿಂದ ಗಟ್ಟಾ ಇಳಿದು ಗಿಲ್ಗಾಲಿಗೆ ಹೋದನೆಂಬ ವರ್ತಮಾನವು ಬಂದದರಿಂದ ಸಮುವೇಲನು ಅಲ್ಲಿಗೆ ಹೋದನು.


ಅರಸನಾದ ಹಿಜ್ಕೀಯನು [ಮರುದಿನ] ಬೆಳಗಿನ ಜಾವದಲ್ಲೆದ್ದು ಪಟ್ಟಣದ ಮುಖಂಡರನ್ನು ಕೂಡಿಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು