Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 21:15 - ಕನ್ನಡ ಸತ್ಯವೇದವು J.V. (BSI)

15 ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಹಾಕಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಮಲಗಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ತಿತ್ತಿಯಲ್ಲಿದ್ದ ನೀರು ಮುಗಿದುಹೋಯಿತು. ಮಗು ಸಾಯುವುದನ್ನು ನಾನು ನೋಡಲಾರೆ ಎಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಸ್ವಲ್ಪ ಸಮಯದ ನಂತರ, ಇದ್ದ ನೀರೆಲ್ಲಾ ಮುಗಿದುಹೋಯಿತು. ಕುಡಿಯುವುದಕ್ಕೆ ಏನೂ ಇರಲಿಲ್ಲ. ಆದ್ದರಿಂದ ಹಾಗರಳು ತನ್ನ ಮಗನನ್ನು ಪೊದೆಯ ಕೆಳಗೆ ಮಲಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ತಿತ್ತಿಯೊಳಗಿನ ನೀರು ಮುಗಿದಾಗ, ಆಕೆ ಮಗುವನ್ನು ಒಂದು ಮರದ ಕೆಳಗೆ ಮಲಗಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 21:15
9 ತಿಳಿವುಗಳ ಹೋಲಿಕೆ  

ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರಿಗೆ ಕಳುಹಿಸುತ್ತಾರೆ; ಅವರು ಕೊಳಗಳಿಗೆ ಹೋದಾಗ ನೀರು ಕಾಣುವದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ; ಆಶೆಗೆಟ್ಟು ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.


ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನೀರಿಲ್ಲದೆ ಒಣಗಿದ ಭೂವಿುಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.


ಆಗ ಇಸ್ರಾಯೇಲ್ ಯೆಹೂದ ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತಾದ ದಾರಿಯಿಂದ ಏಳು ದಿವಸ ಪ್ರಯಾಣಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ ಅವರು ತಂದ ಪಶುಗಳಿಗೂ ನೀರು ಸಿಕ್ಕದೆಹೋದದರಿಂದ ಇಸ್ರಾಯೇಲ್ಯರ ಅರಸನು -


ಕಮ್ಮಾರನು ಮುಟ್ಟನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು; ಅವನೂ ಹಸಿದು ಬಳಲುವನು, ನೀರಿಲ್ಲದೆ ಕಂಗೆಡುವನು.


ಮಾರಣೇ ದಿನ ಬೆಳಿಗ್ಗೆ ಅಬ್ರಹಾಮನು ಎದ್ದು ಹಾಗರಳಿಗೆ ಬುತ್ತಿಯನ್ನೂ ಒಂದು ತಿತ್ತಿ ತಣ್ಣೀರನ್ನೂ ಕೊಟ್ಟು ಅವಳ ಹೆಗಲಿನ ಮೇಲೆ ಇಟ್ಟು ಮಗುವನ್ನು ಒಪ್ಪಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಮಗುವು ಸಾಯುವದನ್ನು ನೋಡಲಾರೆನು ಅಂದುಕೊಂಡು ಬಿಲ್ಲೆಸುಗೆಯಷ್ಟು ದೂರ ಹೋಗಿ ಅವನೆದುರಾಗಿ ಕೂತುಕೊಂಡು ಗಟ್ಟಿಯಾಗಿ ಅತ್ತಳು.


ಆಕೆಯು ಅವನಿಗೆ - ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿಯಿರುವದಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಹೆಕ್ಕಿ ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ ಎಂದು ಉತ್ತರಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು