Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:15 - ಕನ್ನಡ ಸತ್ಯವೇದವು J.V. (BSI)

15 ಯೆಹೋವನ ದೂತನು ಆಕಾಶದೊಳಗಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನ ದೂತನು ಆಕಾಶದೊಳಗಿನಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ಬೆಟ್ಟದ ಮೇಲೆ ಸರ್ವೇಶ್ವರ ಸ್ವಾಮಿಯೇ ಒದಗಿಸುತ್ತಾರೆ” ಎಂಬ ಹೇಳಿಕೆ ಇಂದಿಗೂ ರೂಢಿಯಲ್ಲಿದೆ. ಸರ್ವೇಶ್ವರ ಸ್ವಾಮಿಯ ದೂತನು ಆಕಾಶದಿಂದ ಮತ್ತೊಮ್ಮೆ ಅಬ್ರಹಾಮನನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನ ದೂತನು ಆಕಾಶದಿಂದ ಅಬ್ರಹಾಮನನ್ನು ಎರಡನೆ ಸಲ ಕರೆದು ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರ ದೂತನು ಆಕಾಶದೊಳಗಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:15
15 ತಿಳಿವುಗಳ ಹೋಲಿಕೆ  

ಅವಳು ಮರಳುಕಾಡಿನಲ್ಲಿ ಶೂರಿನ ಮಾರ್ಗದ ಒರತೆಯ ಹತ್ತಿರ ಇರುವಾಗ ಯೆಹೋವನ ದೂತನು ಅವಳನ್ನು ಕಂಡು -


ಅದಲ್ಲದೆ ಯೆಹೋವನ ದೂತನು ಅವಳಿಗೆ - ನಿನಗೆ ಬಹುಸಂತಾನವಾಗ ಮಾಡುವೆನು; ಅದು ಲೆಕ್ಕಿಸಕೂಡದಷ್ಟು ಅಪರಿವಿುತವಾಗುವದು ಎಂದು ಹೇಳಿದನು.


ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. ಯೆಹೋವನ ಬೆಟ್ಟದಲ್ಲಿ ಒದಗುವದು ಎಂಬದಾಗಿ ಇಂದಿನವರೆಗೂ ಹೇಳುವದುಂಟಲ್ಲಾ.


ಯೆಹೋವನು ನುಡಿದದ್ದನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವದಕ್ಕೆ ಹಿಂದೆಗೆಯದೆ ಹೋದದ್ದರಿಂದ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು;


ಆ ಕನಸಿನಲ್ಲಿ ದೇವದೂತನು - ಯಾಕೋಬನೇ ಎಂದು ಕರೆಯಲು ನಾನು - ಇದ್ದೇನೆ ಎಂದು ಹೇಳಿದಾಗ


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ; ಇವರು ನನ್ನ ಹೆಸರನ್ನೂ ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರ ಹೆಸರುಗಳನ್ನೂ ಮುಂದಕ್ಕೆ ತರಲಿ; ಇವರು ಭೂವಿುಯ ಮೇಲೆ ಹೆಚ್ಚಿ ಬಹುಸಂತಾನವನ್ನು ಪಡೆಯಲಿ ಅಂದನು.


ಅಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಯೆಹೋವನ ದೂತನು ಅವನಿಗೆ ಕಾಣಿಸಿಕೊಂಡನು. ಹೇಗಂದರೆ ಅವನು ಒಂದು ಮುಳ್ಳಿನ ಪೊದೆಯನ್ನು ಕಂಡನು ಆ ಪೊದೆಯು ಬೆಂಕಿಯಿಂದ ಉರಿಯುತ್ತಿದ್ದರೂ ಅದು ಸುಟ್ಟುಹೋಗದೆ ಇತ್ತು.


ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ವಾಗ್ದಾನಗಳನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.


ಅದಕ್ಕಾತನು - ಬರುವ ವರುಷದ ಇದೇ ಕಾಲದಲ್ಲಿ ನಾನು ತಪ್ಪದೆ ತಿರಿಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು ಅಂದನು. ಆ ಮಾತು ಹಿಂದೆ ಗುಡಾರದ ಬಾಗಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.


ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು ಎಂಬ ನುಡಿ ನನ್ನ ಸತ್ಯದ ಬಾಯಿಂದ ಹೊರಟಿದೆ, ಅದನ್ನು ಹಿಂತೆಗೆಯೆನು, ನನ್ನ ಮೇಲೆ ಆಣೆಯಿಟ್ಟಿದ್ದೇನೆ.


ಮತ್ತು ಯೆಹೋವನ ದೂತನು ಯೆಹೋಶುವನಿಗೆ ಈ ಮಾತು ಕೊಟ್ಟನು -


ಆ ದಿನದಲ್ಲಿ ಯೆಹೋವನು ಯೆರೂಸಲೇವಿುನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವದು.


ನಾಲ್ವತ್ತು ವರುಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.


ದೇವರು ಅಬ್ರಹಾಮನಿಗೆ ವಾಗ್ದಾನಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದರಿಂದ ತನ್ನಾಣೆಯಿಟ್ಟು -


ಅನಂತರ ಸಮುದ್ರದ ಮೇಲೆಯೂ ಭೂವಿುಯ ಮೇಲೆಯೂ ನಿಂತಿರುವವನಾಗಿ ನನಗೆ ಕಾಣಿಸಿದ ದೇವದೂತನು ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು