Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 22:17 - ಕನ್ನಡ ಸತ್ಯವೇದವು J.V. (BSI)

17 ನಿನ್ನ ಸಂತತಿಯನ್ನು ಹೆಚ್ಚಿಸೇ ಹೆಚ್ಚಿಸುವೆನು; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ನಿನ್ನನ್ನು ಆಶೀರ್ವದಿಸಿಯೇ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಅಧಿಕವಾಗಿ ಹೆಚ್ಚಿಸುವೆನು, ಅದನ್ನು ಆಕಾಶದ ನಕ್ಷತ್ರಗಳಂತೆಯೂ, ಸಮುದ್ರ ತೀರದಲ್ಲಿರುವ ಮರಳಿನಂತೆಯೂ ಅಸಂಖ್ಯವಾಗುವಂತೆ ಮಾಡುವೆನು; ಅವರು ಶತ್ರುಗಳ ಪಟ್ಟಣಗಳನ್ನು ಸ್ವತ್ತಾಗಿ ಮಾಡಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 22:17
50 ತಿಳಿವುಗಳ ಹೋಲಿಕೆ  

ಅವನನ್ನು ಹೊರಗೆ ಕರತಂದು - ಆಕಾಶದ ಕಡೆಗೆ ನೋಡು, ನಕ್ಷತ್ರಗಳನ್ನು ಲೆಕ್ಕಿಸುವದು ನಿನ್ನಿಂದಾದರೆ ಲೆಕ್ಕಿಸು; ನಿನ್ನ ಸಂತಾನವು ಅಷ್ಟಾಗುವದು ಅಂದನು.


ನಾನು ನನ್ನ ದಾಸನಾದ ದಾವೀದನ ಸಂತಾನವನ್ನು ಅಸಂಖ್ಯಾತವಾದ ನಕ್ಷತ್ರಗಣದಷ್ಟು ಹೆಚ್ಚಿಸುವೆನು; ನನ್ನ ಸೇವೆ ನಡಿಸುವ ಲೇವಿಯರ ಸಂಖ್ಯೆಯನ್ನು ಅಳೆಯಲಾಗದ ಸಮುದ್ರತೀರದ ಉಸುಬಿನಷ್ಟು ವೃದ್ಧಿಪಡಿಸುವೆನು.


ನಿನ್ನ ಸಂತಾನದವರನ್ನು ಭೂವಿುಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂವಿುಯಲ್ಲಿರುವ ಧೂಳನ್ನು ಲೆಕ್ಕಮಾಡುವದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಲಾದೀತು.


ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞಾನೇಮವಿಧಿಗಳನ್ನು ಕೈಕೊಂಡು ನಡೆದದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಿ


ಮತ್ತು ರೆಬೆಕ್ಕಳಿಗೆ - ತಂಗಿಯೇ, ನಿನ್ನಿಂದ ಲಕ್ಷಾಂತರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲಿ ಎಂದು ಹೇಳಿ ಹರಸಿದರು.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿದ್ದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟಾದಿರಲ್ಲಾ.


ನಿನಗೆ ಒಳ್ಳೇದನ್ನು ಮಾಡಿ ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲವೇ ಅಂದನು.


ಆದರೆ ದೇವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಟ್ಟಿದ್ದಾನೆ; ಆತನಿಗೆ ಸ್ತೋತ್ರ.


ಅವರ ಪಿತೃಗಳಿಗೆ ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ದೇಶವನ್ನು ಅವರಿಗೆ ಅನುಗ್ರಹಿಸಿದಿ;


ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡಸು; ಅದು ಯೆಹೂದಕ್ಕೂ ತಾಕಿದೆ; ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇವಿುಗೆ ಮುಟ್ಟಿದೆ.


ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್‍ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.


ಅವರ ಮಾತನ್ನು ಕೇಳದೆಹೋದರೆ ತಂದೆತಾಯಿಗಳು ಅವನನ್ನು ಹಿಡಿದು ಊರುಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ -


ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ ನಿನಗೆ ಬಹಳ ಸಂತತಿಯನ್ನು ಕೊಟ್ಟು ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;


ನಿನಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು; ನಿನ್ನಿಂದ ಜನಾಂಗಗಳು ಉತ್ಪತ್ತಿಯಾಗಿ ಅರಸರೂ ಹುಟ್ಟುವರು.


ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡಿ ಆಶೀರ್ವದಿಸಿ ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು.


ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ. ನಂಬಿಕೆಯೆಂಬ ನೀತಿಯಿಂದ ಆದದ್ದೇ.


ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ - ಕರ್ತನು ಈ ದೇಶದವರ ವಿಷಯ ಪೂರ್ಣವಾಗಿಯೂ ತೀವ್ರವಾಗಿಯೂ ಲೆಕ್ಕವನ್ನು ತೀರಿಸುವನಾದದರಿಂದ ಇಸ್ರಾಯೇಲ್ಯರ ಸಂಖ್ಯೆಯು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿದ್ದರೂ ಅವರಲ್ಲಿ ಒಂದು ಅಂಶ ಮಾತ್ರ ರಕ್ಷಣೆಹೊಂದುವದೆಂದು ಕೂಗಿ ಹೇಳುತ್ತಾನೆ.


ನಿಜವಾಗಿ ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು, ನಿನ್ನನ್ನು ಹೆಚ್ಚಿಸೇ ಹೆಚ್ಚಿಸುವೆನು ಎಂದು ಹೇಳಿದನಷ್ಟೆ.


ಆದದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದಲ್ಲಿರುವ ಉಸುಬಿನಂತೆಯೂ ಅಸಂಖ್ಯವಾಗಿ ಮಕ್ಕಳು ಹುಟ್ಟಿದರು.


ಅಬ್ರಹಾಮನು ತೀರಿಹೋದನಂತರ ದೇವರ ಅನುಗ್ರಹವು ಅವನ ಮಗನಾದ ಇಸಾಕನಿಗೂ ಉಂಟಾಯಿತು. ಇಸಾಕನು ಲಹೈರೋಯಿ ಎಂಬ ಬಾವಿಯ ಹತ್ತಿರ ವಾಸವಾಗಿದ್ದನು.


ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಬಳಿಯಲ್ಲಿದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿವಿುತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಎಂದು ಹೇಳಲಾಗಿ


ಆತನು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಟ್ಟು ತಾನು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದೂ ನೀನು ಪ್ರವಾಸವಾಗಿರುವಂಥದೂ ಆಗಿರುವ ಈ ದೇಶವನ್ನು ನೀನು ಬಾಧ್ಯನಾಗಿ ಹೊಂದುವಂತೆ ಮಾಡಲಿ ಎಂದು ಹೇಳಿ ಆಶೀರ್ವದಿಸಿ ಕಳುಹಿಸಿಬಿಟ್ಟನು.


ನಿಮ್ಮ ಪಿತೃಗಳು ಎಪ್ಪತ್ತು ಮಂದಿ ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗಲೋ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನಲ್ಲಾ.


ಕೇವಲ ಯೆಹೋವನಿಗೇ ಆಗಲಿ ಎಂದು ನೀವು ಗೊತ್ತುಮಾಡಿದ್ದರಲ್ಲಿ ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು. ನೀವು ಹೀಗೆ ನಡೆದು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು ನಾನು ಈಗ ನಿಮಗೆ ಬೋಧಿಸುವ ಆತನ ಎಲ್ಲಾ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ ಆತನು ರೋಷಾಗ್ನಿಯನ್ನು ಬಿಟ್ಟು ನಿಮಗೆ ದಯೆಯನ್ನು ತೋರಿಸಿ ನಿಮ್ಮನ್ನು ಕರುಣಿಸಿ ತಾನು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಹೆಚ್ಚಿಸುವನು.


ಇಸ್ರಾಯೇಲ್ಯರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂಬದಾಗಿ ಯೆಹೋವನು ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರುಷಕ್ಕಿಂತ ಕಡಿಮೆಯಾದ ವಯಸ್ಸುಳ್ಳವರನ್ನು ಲೆಕ್ಕಿಸಲಿಲ್ಲ.


ಹೀಗಿರಲಾಗಿ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ ನುಡಿದದ್ದು ಸಾರ್ಥಕವಾಗಲಿ; ಭೂವಿುಯ ಧೂಳಿನಷ್ಟು ಅಸಂಖ್ಯವಾದ ಜನಾಂಗದ ಮೇಲೆ ನನ್ನನ್ನು ಅರಸನನ್ನಾಗಿ ನೇವಿುಸಿದ್ದೀ.


ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ಅವನು ಆ ರಾತ್ರಿ ಅಲ್ಲೇ ಇಳುಕೊಂಡು ಇನ್ನೂರು ಆಡು, ಇಪ್ಪತ್ತು ಹೋತ, ಇನ್ನೂರು ಕುರಿ,


ನಿನ್ನ ಸೇವಕರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣಮಾಡಿ ಅವರಿಗೆ - ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನೆಂದೂ ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಅವರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರೆಂದೂ ಮಾತುಕೊಡಲಿಲ್ಲವೇ ಅಂದನು.


ನೀವು ಈಗ ಇರುವದಕ್ಕಿಂತಲೂ ಇನ್ನು ಸಾವಿರದಷ್ಟಾಗುವಂತೆ ನಿಮ್ಮ ಪಿತೃಗಳ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿ ತಾನು ವಾಗ್ದಾನ ಮಾಡಿದ ಪ್ರಕಾರವೇ ನಿಮಗೆ ಶುಭಗಳನ್ನು ಅನುಗ್ರಹಿಸಲಿ.


ಹೀಗಿರುವದರಿಂದ ನನ್ನ ಆಲೋಚನೆಯನ್ನು ಕೇಳು - ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಾಯೇಲ್ಯರೊಳಗಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗು.


ಇಸ್ರಾಯೇಲ್ ಯೆಹೂದ್ಯರು ಸಮುದ್ರತೀರದ ಉಸುಬಿನಷ್ಟು ಅಸಂಖ್ಯರಾಗಿದ್ದರು; ಅವರು ಅನ್ನಪಾನಗಳಲ್ಲಿ ತೃಪ್ತರಾಗಿ ಸಂತೋಷದಿಂದಿದ್ದರು.


ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳಷ್ಟು ಹೆಚ್ಚಿಸಿ - ನೀವು ಈ ದೇಶದೊಳಕ್ಕೆ ಪ್ರವೇಶಿಸಿ ಸ್ವಾಧೀನ ಮಾಡಿಕೊಳ್ಳುವಿರಿ ಎಂದು ಅವರ ಪಿತೃಗಳಿಗೆ ವಾಗ್ದಾನಮಾಡಿದ್ದ ದೇಶಕ್ಕೆ ಅವರನ್ನು ಬರಮಾಡಿದಿ.


ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳ ಪ್ರಕಾರವೂ ಅಸಂಖ್ಯಾತರಾಗುತ್ತಿದ್ದರು; ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ.


ನಿಮ್ಮ ಸಹೋದರರನ್ನು ಅಮ್ಮಿ, ನಿಮ್ಮ ಸಹೋದರಿಯರನ್ನು ರುಹಾಮ ಅನ್ನಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು