Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:11 - ಕನ್ನಡ ಸತ್ಯವೇದವು J.V. (BSI)

11 ಹಾಗಲ್ಲ ಸ್ವಾಮೀ, ನನ್ನ ಮಾತನ್ನು ಲಾಲಿಸು. ಆ ಭೂವಿುಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ಸುಮ್ಮನೆ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ತೀರಿಹೋದ ನಿನ್ನ ಪತ್ನಿಗೆ ಅದರಲ್ಲಿ ಸಮಾಧಿಮಾಡಬಹುದು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “ಹಾಗಲ್ಲ ಸ್ವಾಮಿ, ನನ್ನ ಮಾತನ್ನು ಲಾಲಿಸು. ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ನಿನಗೆ ದಾನವಾಗಿ ಕೊಡುತ್ತೇನೆ; ನನ್ನ ಜನರ ಮುಂದೆಯೇ ಕೊಡುತ್ತೇನೆ; ಮರಣಹೊಂದಿದ ನಿನ್ನ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಒಡೆಯಾ, ನನ್ನ ಮಾತಿಗೆ ಸ್ವಲ್ಪ ಕಿವಿಗೊಡಿ; ಆ ಜಮೀನನ್ನೂ ಅದರಲ್ಲಿರುವ ಗವಿಯನ್ನೂ ನಿಮಗೆ ದಾನಮಾಡಿಬಿಡುತ್ತೇನೆ; ನನ್ನ ಈ ಜನರ ಮುಂದೆಯೇ ದಾನಕೊಡುತ್ತೇನೆ; ಮೃತಳಾದ ನಿಮ್ಮ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಸ್ವಾಮೀ ನಾನು ಆ ಸ್ಥಳವನ್ನೂ ಆ ಗವಿಯನ್ನೂ ನನ್ನ ಜನರ ಎದುರಿನಲ್ಲಿಯೇ ನಿನಗೆ ಕೊಡುವೆನು. ನಿನ್ನ ಹೆಂಡತಿಯನ್ನು ಅಲ್ಲಿ ಸಮಾಧಿಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ಒಡೆಯನೇ ಹಾಗಲ್ಲ, ನನ್ನ ಮಾತನ್ನು ಕೇಳು. ಆ ಹೊಲವನ್ನು ನಿನಗೆ ಕೊಡುತ್ತೇನೆ. ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ. ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ. ನಿನ್ನ ಹೆಂಡತಿಯ ಶವವನ್ನು ಹೂಳಿಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:11
15 ತಿಳಿವುಗಳ ಹೋಲಿಕೆ  

ಹತ್ತಿರ ನಿಂತಿದ್ದವರಿಗೆ - ಆ ಮೊಹರಿಯನ್ನು ಇವನಿಂದ ತೆಗೆದುಕೊಂಡು ಹತ್ತು ಮೊಹರಿಗಳುಳ್ಳವನಿಗೆ ಕೊಡಿರಿ ಎಂದು ಹೇಳಿದನು.


ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು; ಘನವಾದವುಗಳಲ್ಲಿಯೇ ನಿರತನಾಗಿರುವನು.


ಇದಕ್ಕೆ ನೀವು ಸಾಕ್ಷಿಗಳು ಎಂದು ಹೇಳಿದ್ದಕ್ಕೆ ಊರುಬಾಗಲಲ್ಲಿ ಕೂಡಿದ್ದ ಹಿರಿಯರೂ ಎಲ್ಲಾ ಜನರೂ - ಹೌದು, ನಾವು ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಸತ್ಕಾರ್ಯವನ್ನು ಮಾಡು; ಬೇತ್ಲೆಹೇವಿುನಲ್ಲಿ ಘನವಂತನಾಗು.


ಆಗ ಬೋವಜನು ಹಿರಿಯರಿಗೂ ಎಲ್ಲಾ ಜನರಿಗೂ - ನಾನು ಎಲೀಮೆಲೆಕ್, ಕಿಲ್ಯೋನ್, ಮಹ್ಲೋನ್ ಎಂಬವರಿಗಿದ್ದದ್ದನ್ನೆಲ್ಲಾ ನೊವೊವಿುಯಿಂದ ತೆಗೆದುಕೊಂಡಿದ್ದೇನೆ;


ನಿನಗೆ ಅದನ್ನು ಕೊಂಡುಕೊಳ್ಳುವ ಮನಸ್ಸಿದ್ದರೆ ಇಲ್ಲಿ ಕೂತಿರುವ ಊರಿನ ಹಿರಿಯರ ಮುಂದೆಯೇ ಕೊಂಡುಕೋ. ಇಲ್ಲದಿದ್ದರೆ ನನಗೆ ತಿಳಿಸು; ನನಗೆ ಗೊತ್ತಾಗಬೇಕು. ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಅದನ್ನು ಕೊಂಡುಕೊಳ್ಳತಕ್ಕ ಬಾಧ್ಯರು ಬೇರೆ ಯಾರೂ ಇಲ್ಲ ಎಂದು ಹೇಳಲು ಅವನು - ನಾನೇ ಕೊಂಡುಕೊಳ್ಳುತ್ತೇನೆ ಅಂದನು.


ಬೋವಜನು ಹೋಗಿ ಊರುಬಾಗಲಲ್ಲಿ ಕೂತನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿರುವದನ್ನು ಕಂಡು ಅವನನ್ನು - ಎಲಾ, ಅಪ್ಪಾ, ಇತ್ತ ಬಂದು ಕೂತುಕೋ ಎಂದು ಕರೆಯಲು ಅವನು ಬಂದು ಕೂತುಕೊಂಡನು.


ಯಾವ ದೋಷದ ಅಥವಾ ಅಪರಾಧದ ವಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಸಂಗತಿ ಸ್ಥಾಪನೆಯಾಗುವದಕ್ಕೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.


ಒಬ್ಬನೇ ಒಬ್ಬನ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು; ಮರಣಶಿಕ್ಷೆಯನ್ನು ವಿಧಿಸುವದಕ್ಕೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.


ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬೇಕು. ಒಬ್ಬನೇ ಒಬ್ಬನ ಸಾಕ್ಷಿ ಮಾತ್ರ ಇದ್ದರೆ ಮರಣಶಿಕ್ಷೆಯನ್ನು ವಿಧಿಸಕೂಡದು.


ಅಬ್ರಹಾಮನ ಸ್ವಂತ ಭೂವಿುಯೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ಧೃಢವಾಯಿತು.


ಅಬ್ರಹಾಮನು ಆ ದೇಶದ ಜನರಿಗೆ ಬೊಗ್ಗಿ ನಮಸ್ಕರಿಸಿ ಅವರೆಲ್ಲರ ಮುಂದೆ ಎಫ್ರೋನನಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು