Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 23:16 - ಕನ್ನಡ ಸತ್ಯವೇದವು J.V. (BSI)

16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ರೂಪಾಯಿಗಳನ್ನು ಅಬ್ರಹಾಮನು ಸಾಹುಕಾರರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿ, ಅವನು ಆ ಹಿತ್ತಿಯರ ಮುಂದೆ ಸೂಚಿಸಿದ ನಾನೂರು ಬೆಳ್ಳಿ ನಾಣ್ಯಗಳನ್ನು, ವ್ಯಾಪಾರಿಗಳಲ್ಲಿ ಪ್ರಚಲಿತವಾಗಿದ್ದ ಬೆಳ್ಳಿಯಿಂದ ತೂಕಮಾಡಿ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಅಬ್ರಹಾಮನು ಆ ಸ್ಥಳಕ್ಕಾಗಿ ನಾನೂರು ಬೆಳ್ಳಿ ರೂಪಾಯಿಗಳನ್ನು ಹಿತ್ತಿಯರ ಎದುರಿನಲ್ಲಿ ಹೇಳಿದ ಎಫ್ರೋನನಿಗೆ ಎಣಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿಕೊಂಡು, ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ಬೆಲೆ ಅಂದರೆ, ವರ್ತಕರಲ್ಲಿ ನಡೆಯುವ ನಾನೂರು ಬೆಳ್ಳಿ ನಾಣ್ಯಗಳನ್ನು ತೂಕಮಾಡಿ ಅವನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 23:16
18 ತಿಳಿವುಗಳ ಹೋಲಿಕೆ  

ಅನಂತರ ನಾನು - ನಿಮಗೆ ಸರಿಯಾಗಿ ತೋರಿದರೆ ನನಗೆ ಸಂಬಳವನ್ನು ಕೊಡಿರಿ, ಇಲ್ಲವಾದರೆ ಬಿಡಿರಿ ಅನ್ನಲು ಅವರು ಮೂವತ್ತು ತೊಲ ಬೆಳ್ಳಿಯನ್ನು ತೂಗಿ ನನ್ನ ಸಂಬಳಕ್ಕಾಗಿ ಕೊಟ್ಟರು.


ಆಗ ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿರುವ ಹೊಲವನ್ನು ನಾನು ಕೊಂಡುಕೊಂಡು ಅದರ ಕ್ರಯವಾಗಿ ಹದಿನೇಳು ತೊಲ ಬೆಳ್ಳಿಯನ್ನು ತೂಕ ಮಾಡಿ ಅವನಿಗೆ ಕೊಟ್ಟೆನು.


ಧರ್ಮಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು. ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡುಮಾಡಬಾರದು. ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವವನಾಗಿದ್ದಾನೆ.


ಕಡೇ ಮಾತೇನಂದರೆ, ಸಹೋದರರೇ, ಯಾವಾವದು ಸತ್ಯವೂ ಮಾನ್ಯವೂ ನ್ಯಾಯವೂ ಶುದ್ಧವೂ ಪ್ರೀತಿಕರವೂ ಮನೋಹರವೂ ಆಗಿದೆಯೋ, ಯಾವದು ಸದ್ಗುಣವಾಗಿದೆಯೋ, ಯಾವದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳನ್ನೂ ಲಕ್ಷ್ಯಕ್ಕೆ ತಂದುಕೊಳ್ಳಿರಿ.


ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ಧರ್ಮಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.


ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಇದೇ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ.


ತೊಲೆಯು ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು [ಅಥವಾ] ಹದಿನೈದು ತೊಲೆಯ ತೂಕದ್ದಾಗಿರಲಿ.


ಚೊಕ್ಕ ಬಂಗಾರವನ್ನು ಕೊಟ್ಟು ಅದನ್ನು ಕೊಂಡುಕೊಳ್ಳುವದು ಅಸಾಧ್ಯ, ಅದರ ಬೆಲೆಗೆ ಬೆಳ್ಳಿಯನ್ನು ತೂಗುವದು ಅಶಕ್ಯ.


ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿಯೊಬ್ಬನು ಯೆಹೋವನಿಗೆ ಅರ್ಧ ರೂಪಾಯಿಯ ಮೇರೆಗೆ ಕಪ್ಪ ಕೊಡಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧರ್ಧ ರೂಪಾಯಿ ಕಪ್ಪವಾಗಿ ಕೊಡಬೇಕು.


ನಾವು ಹೊರಟುಹೋದ ನಂತರ ಇಳಿದುಕೊಂಡಿದ್ದ ಒಂದು ಸ್ಥಳದಲ್ಲಿ ನಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಹಣವು ತೂಕದಲ್ಲಿ ಏನೂ ಕಡಿಮೆಯಿಲ್ಲದೆ ಅವನವನ ಚೀಲದಲ್ಲೇ ಇತ್ತು; ಅದನ್ನು ತಿರಿಗಿ ತಂದಿದ್ದೇವೆ.


ನಾನೂರು ರೂಪಾಯಿ ಬಾಳುವ ಭೂವಿುಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು ಅಂದನು.


ಅವರನ್ನು ಶೇಕೆವಿುಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.


ಇಸ್ರಾಯೇಲನು ತನ್ನ ಮಕ್ಕಳಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ - ನಾನು ನನ್ನ ಪಿತೃಗಳ ಬಳಿಗೆ ಸೇರಬೇಕಾದ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂವಿುಯಲ್ಲಿರುವ ಗವಿಯೊಳಗೆ ನನಗೆ ಪಿತೃಗಳ ಬಳಿಯಲ್ಲಿ ಸಮಾಧಿಮಾಡಬೇಕು.


ಅವನ ಶವವನ್ನು ಕಾನಾನ್‍ದೇಶಕ್ಕೆ ಹೊತ್ತುಕೊಂಡುಹೋಗಿ ಮಕ್ಪೇಲ ಎಂಬ ಬೈಲಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲಿರುವ ಭೂವಿುಸಹಿತ ಸ್ವಕೀಯ ಶ್ಮಶಾನಭೂವಿುಯಾಗುವದಕ್ಕೆ ಕೊಂಡುಕೊಂಡಿದ್ದನು.


ಅವನು ತಲೆಗೂದಲು ಬಹುಭಾರವಾಗುವದರಿಂದ ಪ್ರತಿ ವರುಷದ ಅಂತ್ಯದಲ್ಲಿ ಬೋಳಿಸಿಕೊಳ್ಳುವನು. ಆಗ ಅವನ ಕೂದಲು ಸರಕಾರೀ ತೂಕದ ಪ್ರಕಾರ ಇನ್ನೂರು ರೂಪಾಯಿ ತೂಕವಾಗುತ್ತಿತ್ತು.


ಪತ್ರಕ್ಕೆ ರುಜು ಹಾಕಿ ಮುಚ್ಚಿ [ಮುಚ್ಚಳಕ್ಕೆ] ಸಾಕ್ಷಿಗಳನ್ನು ಹಾಕಿಸಿ ತ್ರಾಸಿನಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆನು.


ಅರಸನು ಅರೌನನಿಗೆ - ಹಾಗಲ್ಲ, ನಾನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಯೆಹೋವನಿಗೆ ಸುಮ್ಮನೆ ಸಿಕ್ಕಿದ್ದನ್ನು ಯಜ್ಞವಾಗಿ ಅರ್ಪಿಸಲೊಲ್ಲೆನು ಎಂದು ಹೇಳಿ ಆ ಕಣವನ್ನೂ ಹೋರಿಗಳನ್ನೂ ಐವತ್ತು ರೂಪಾಯಿಗೆ ಕೊಂಡುಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು