Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:23 - ಕನ್ನಡ ಸತ್ಯವೇದವು J.V. (BSI)

23 ಯೆಹೋವನು ಆಕೆಗೆ - ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಅವೆ; ಆ ಎರಡು ಜನಾಂಗಗಳು ಜನ್ಮಾರಭ್ಯ ವಿರೋಧದಿಂದ ಭೇದವಾಗುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವದು; ಹಿರಿಯದು ಕಿರಿಯದಕ್ಕೆ ಸೇವೆ ಮಾಡುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನು ಆಕೆಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರ ಆಕೆಗೆ ಇಂತೆಂದರು: ನಿನ್ನ ಉದರದೊಳಿವೆ ಜನಾಂಗಗಳೆರಡು ಹುಟ್ಟಿನಿಂದ ವೈರಿಗಳಾ ರಾಷ್ಟ್ರಗಳೆರಡು ಬಲಿಷ್ಠವಿರುವುದು ಒಂದು ಮತ್ತೊಂದಕೆ ಜ್ಯೇಷ್ಠನೇ ದಾಸನಾಗುವನು ಕನಿಷ್ಠನಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನು ಅವಳಿಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳಿವೆ. ಎರಡು ಕುಟುಂಬಗಳನ್ನು ಆಳುವವರು ನಿನ್ನಲ್ಲಿ ಹುಟ್ಟುವರು; ಅವರು ವಿಭಾಗವಾಗುವರು. ಒಬ್ಬ ಮಗನು ಮತ್ತೊಬ್ಬನಿಗಿಂತ ಬಲಶಾಲಿಯಾಗಿರುವನು. ದೊಡ್ಡ ಮಗನು ಚಿಕ್ಕ ಮಗನ ಸೇವೆ ಮಾಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರು ಆಕೆಗೆ ಹೀಗೆ ಹೇಳಿದರು: “ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ಜನಾಂಗಗಳು ಹೊರಟುಬಂದು ಬೇರೆಯಾಗುವುವು. ಒಂದು ಇನ್ನೊಂದಕ್ಕಿಂತ ಬಲವಾಗಿರುವುದು. ಇದಲ್ಲದೆ ಹಿರಿಯನು ಕಿರಿಯವನಿಗೆ ಸೇವೆಮಾಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:23
33 ತಿಳಿವುಗಳ ಹೋಲಿಕೆ  

ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ಕೊಸರಿಕೊಳ್ಳುವಾಗ ಅವನು ನಿನ್ನ ಹೆಗಲಿನ ಮೇಲೆ ಹಾಕಿರುವ ನೊಗವನ್ನು ಮುರಿದುಹಾಕುವಿ ಎಂದು ಹೇಳಿದನು.


ಪರಜನಗಳು ನಿನ್ನನ್ನು ಸೇವಿಸಲಿ. ಪರಕುಲಗಳು ನಿನಗೆ ಅಡ್ಡಬೀಳಲಿ. ನಿನ್ನ ಅಣ್ಣತಮ್ಮಂದಿರಲ್ಲಿ ನೀನು ದೊರೆಯಾಗು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವು ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ ಅಂದನು.


ಅವನು ಎದೋವಿುನಲ್ಲೆಲ್ಲಾ ಕಾವಲುದಂಡುಗಳನ್ನಿರಿಸಿದನು; ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.


ದಾವೀದನು ಎದೋವಿುನಲ್ಲಿ ಕಾವಲುದಂಡುಗಳನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.


ಮತ್ತು ರೆಬೆಕ್ಕಳಿಗೆ - ತಂಗಿಯೇ, ನಿನ್ನಿಂದ ಲಕ್ಷಾಂತರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲಿ ಎಂದು ಹೇಳಿ ಹರಸಿದರು.


ನಾನು ಆಕೆಯನ್ನು ಆಶೀರ್ವದಿಸಿ ಆಕೆಯಲ್ಲಿ ನಿನಗೆ ಮಗನನ್ನು ಕೊಡುವೆನು. ನಾನು ಆಕೆಯನ್ನು ಆಶೀರ್ವದಿಸಿದ್ದರಿಂದ ಆಕೆಯಿಂದ ಅನೇಕ ಜನಾಂಗಗಳೂ ಅರಸರೂ ಉತ್ಪತ್ತಿಯಾಗುವರು ಎಂದು ಹೇಳಲು ಅಬ್ರಹಾಮನು ಅಡ್ಡಬಿದ್ದು ನಕ್ಕು -


ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ - ತಮ್ಮ ಸಂಬಂಧಿಕರಾದ ಇಸ್ರಾಯೇಲ್ಯರು ಕೇಳಿಕೊಳ್ಳುವದೇನಂದರೆ - ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಷ್ಟೆ.


ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ; ಇವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.


ಇಸ್ರಾಯೇಲ್ಯರ ಅರಸರು ಆಳುವದಕ್ಕಿಂತ ಮುಂಚೆ ಎದೋಮ್ಯರ ದೇಶದಲ್ಲಿ ಆಳುತ್ತಿದ್ದ ಅರಸರ ಚರಿತ್ರೆ ಹೇಗಂದರೆ -


ತಾನೇ ಅವರ ಮುಂದಾಗಿ ಹೋಗಿ ತನ್ನ ಅಣ್ಣನಿಗೆ ಸಮೀಪಿಸುತ್ತಿರುವಾಗ ಏಳು ಸಾರಿ ನೆಲದ ತನಕ ಬೊಗ್ಗಿ ನಮಸ್ಕರಿಸಿದನು.


ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನೆಂಬವನು ಬೇಟೆಯಾಡುವದರಲ್ಲಿ ಜಾಣನಾದನು; ಅವನು ಅರಣ್ಯವಾಸಿ. ಯಾಕೋಬನು ಸಾಧುಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸಿದನು.


ನಾನಂತೂ ನಿನಗೆ ವಾಗ್ದಾನಮಾಡುತ್ತೇನೆ; ಏನಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪುರುಷನಾಗುವಿ.


ತರುವಾಯ ಆ ದೂತರು ಯಾಕೋಬನ ಬಳಿಗೆ ತಿರಿಗಿ ಬಂದು - ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆಂದು ಹೇಳಿದಾಗ


ಆಕೆ ದಿನತುಂಬಿದಾಗ ಅವಳಿಮಕ್ಕಳನ್ನು ಹೆತ್ತಳು.


ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ - ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವದಕ್ಕಿಂತ ಮುಂಚೆ ಅವನು ತಂದದ್ದರಲ್ಲಿ ನಾನು ಊಟ ಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು ಅಂದನು.


ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವದಕ್ಕಿದ್ದೀರಷ್ಟೆ. ಅವರು ನಿಮಗೆ ಅಂಜುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.


ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರ ಕಡೆಯಿಂದ ಓರೆಯಾಗಿ ತಿರುಗಿಕೊಂಡು ಅರಾಬದ ಮಾರ್ಗವನ್ನು ಬಿಟ್ಟು ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು.


ಇಸಾಕನು - ನನ್ನ ಮಗನೇ, ಅವನನ್ನು ನಿನ್ನ ದೊರೆಯನ್ನಾಗಿ ನೇವಿುಸಿದ್ದೇನೆ; ಅವನ ಅಣ್ಣತಮ್ಮಂದಿರನ್ನು ಅವನಿಗೆ ಸೇವಕರನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನ ಪೋಷಣೆಗಾಗಿ ಕೊಟ್ಟಿದ್ದೇನೆ ನೋಡು. ಹೀಗಿರುವಲ್ಲಿ ನಾನು ನಿನಗೋಸ್ಕರ ಏನು ಮಾಡಲಿ ಅಂದನು.


ಅದರೆ ಅವನ ತಂದೆ ಒಪ್ಪದೆ - ಮಗನೇ, ನಾನು ಬಲ್ಲೆ, ಬಲ್ಲೆ; ಇವನಿಂದಲೂ ಜನಾಂಗವುಂಟಾಗುವದು; ಇವನೂ ಬಲಿಷ್ಠನಾಗುವನು; ಆದರೂ ಇವನಿಗಿಂತಲೂ ಇವನ ತಮ್ಮನು ಬಲಿಷ್ಠನಾಗುವನು; ತಮ್ಮನ ಸಂತತಿಯಲ್ಲಿಯೇ ಜನರು ಹೇರಳವಾಗಿ ಹುಟ್ಟುವರು ಎಂದು ಹೇಳಿದನು.


ಮೂರು ಮಂದಿ ಹಿರೀ ಮಕ್ಕಳು ಸೌಲನ ಜೊತೆಯಲ್ಲಿ ಯುದ್ಧಕ್ಕೆ ಹೋದದರಿಂದ


ರಕ್ಷಕರು ಚೀಯೋನ್ ಪರ್ವತದಲ್ಲಿ ಎದ್ದು ಏಸಾವಿನ ಪರ್ವತವನ್ನು ಆಳುವರು; ಆಗ ರಾಜ್ಯವು ಯೆಹೋವನದಾಗಿರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು