Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 25:27 - ಕನ್ನಡ ಸತ್ಯವೇದವು J.V. (BSI)

27 ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನೆಂಬವನು ಬೇಟೆಯಾಡುವದರಲ್ಲಿ ಜಾಣನಾದನು; ಅವನು ಅರಣ್ಯವಾಸಿ. ಯಾಕೋಬನು ಸಾಧುಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಹುಡುಗರಿಬ್ಬರು ಬೆಳೆದರು. ಏಸಾವನು ಚೂಟಿಯಾದ ಬೇಟೆಗಾರನಾದ, ವನವಾಸಿಯಾದ, ಯಕೋಬನು ಸಾಧುಮನುಷ್ಯ, ಅವನದು ಗುಡಾರಗಳಲ್ಲಿ ವಾಸ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಬಾಲಕರು ಬೆಳೆದು ದೊಡ್ಡವರಾದರು. ಏಸಾವನು ಚತುರ ಬೇಟೆಗಾರನಾದನು. ಹೊಲದಲ್ಲಿರುವುದು ಅವನಿಗೆ ಪ್ರಿಯವಾಗಿತ್ತು. ಆದರೆ ಯಾಕೋಬನು ಸಾಧು ಮನುಷ್ಯನಾಗಿದ್ದನು. ಅವನು ತನ್ನ ಗುಡಾರದಲ್ಲಿರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆ ಹುಡುಗರು ಬೆಳೆದಾಗ ಏಸಾವನು ಬೇಟೆಯಾಡುವುದರಲ್ಲಿ ಜಾಣನಾಗಿದ್ದು, ಅಡವಿಯ ಮನುಷ್ಯನಾದನು. ಯಾಕೋಬನು ಗುಡಾರಗಳಲ್ಲಿ ವಾಸಮಾಡುವ ಸಾಧು ಮನುಷ್ಯನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 25:27
14 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ಅವನು ವಾಗ್ದಾತ್ತದೇಶಕ್ಕೆ ಬಂದಾಗ ಅಲ್ಲಿ ಅನ್ಯದೇಶದಲ್ಲಿ ಇದ್ದವನಂತೆ ಡೇರೆಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿ ಬದುಕಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯರಾಗಿದ್ದ ಇಸಾಕನೂ ಯಾಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.


ದೇವರು ಆ ಹುಡುಗನ ಸಂಗಡ ಇದ್ದನು; ಅವನು ಬೆಳೆದು ಕಾಡಿನಲ್ಲಿ ವಾಸವಾಗಿದ್ದು ಬಿಲ್ಲುಗಾರನಾದನು.


ಅವನು ಅತಿ ಸಾಹಸಿಯಾದ ಬೇಟೆಗಾರನು. ನಿಮ್ರೋದನಂತೆ ಅತಿ ಸಾಹಸಿಯಾದ ಬೇಟೆಗಾರನೆಂದು ಈಗಲೂ ಹೇಳುವದುಂಟಲ್ಲಾ.


ನೋಹನ ಚರಿತ್ರೆಯು - ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ತಪ್ಪಿಲ್ಲದವನೂ ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.


ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವದು.


ಆಗ ಯೆಹೋವನು - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ ಎಂದು ಸೈತಾನನಿಗೆ ಹೇಳಿದನು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು.


ನೀವು - ಚಿಕ್ಕಂದಿನಿಂದ ಇದುವರೆಗೂ ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಪದ್ಧತಿಯ ಮೇರೆಗೆ ಪಶುಪಾಲಕರು ಅನ್ನಿರಿ. ಪಶುಪಾಲಕರು ಐಗುಪ್ತ್ಯರಿಗೆ ಅಸಹ್ಯವಾಗಿರುವದರಿಂದ ಗೋಷೆನ್‍ಸೀಮೆಯನ್ನು ನಿಮ್ಮ ನಿವಾಸಕ್ಕೆ ನೇವಿುಸುವನು ಅಂದನು.


ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ಕೊಸರಿಕೊಳ್ಳುವಾಗ ಅವನು ನಿನ್ನ ಹೆಗಲಿನ ಮೇಲೆ ಹಾಕಿರುವ ನೊಗವನ್ನು ಮುರಿದುಹಾಕುವಿ ಎಂದು ಹೇಳಿದನು.


ಆಗ ಯೆಹೋವನು ಸೈತಾನನಿಗೆ - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶನಮಾಡುವದಕ್ಕೆ ನೀನು ನನ್ನನ್ನು ಪ್ರೇರಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ ಅಂದನು.


ಮನೆಕಟ್ಟಬಾರದು, ಬೀಜ ಬಿತ್ತಬಾರದು, ತೋಟ ಮಾಡಬಾರದು, ಅನುಭವಿಸಲೂ ಬಾರದು; ನಿಮ್ಮ ಜೀವಮಾನವೆಲ್ಲಾ ಗುಡಾರಗಳಲ್ಲೇ ವಾಸಿಸಬೇಕು; ಇದರಿಂದ ನೀವು ತಂಗುವ ದೇಶದಲ್ಲಿ ನಿಮಗೆ ದೀರ್ಘಾಯುಷ್ಯವಾಗುವದು ಎಂದು ಅಪ್ಪಣೆಕೊಟ್ಟಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು