Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:18 - ಕನ್ನಡ ಸತ್ಯವೇದವು J.V. (BSI)

18 ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ಮೇಲೆ ಫಿಲಿಷ್ಟಿಯರು ಮುಚ್ಚಿಹಾಕಿದ್ದರಿಂದ ಇಸಾಕನು ಅವುಗಳನ್ನು ತಿರಿಗಿ ತೆಗಿಸಿ ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ನಂತರ ಫಿಲಿಷ್ಟಿಯರು ಮುಚ್ಚಿ ಹಾಕಿದ್ದರಿಂದ ಇಸಾಕನು ಅವುಗಳನ್ನು ತಿರುಗಿ ಅಗೆಸಿ, ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತಮೇಲೆ ಫಿಲಿಷ್ಟಿಯರು ಮುಚ್ಚಿಹಾಕಿದ್ದರಿಂದ ಇಸಾಕನು ಅವುಗಳನ್ನು ಮರಳಿ ತೆಗೆಸಿ ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇದಕ್ಕೂ ಬಹುಕಾಲದ ಹಿಂದೆ, ಅಬ್ರಹಾಮನು ಅನೇಕ ಬಾವಿಗಳನ್ನು ತೋಡಿಸಿದ್ದನು. ಅಬ್ರಹಾಮನು ಸತ್ತುಹೋದ ಮೇಲೆ, ಫಿಲಿಷ್ಟಿಯರು ಆ ಬಾವಿಗಳಿಗೆ ಮಣ್ಣುಹಾಕಿ ಮುಚ್ಚಿದ್ದರು. ಇಸಾಕನು ಆ ಬಾವಿಗಳನ್ನು ಮತ್ತೆ ತೋಡಿಸಿ, ತನ್ನ ತಂದೆ ಕೊಟ್ಟಿದ್ದ ಹೆಸರುಗಳನ್ನೇ ಅವುಗಳಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ಇಸಾಕನು ತನ್ನ ತಂದೆ ಅಬ್ರಹಾಮನ ದಿನಗಳಲ್ಲಿ ಅಗೆದಂಥ ಬಾವಿಗಳನ್ನು ತಿರುಗಿ ಅಗೆದನು. ಏಕೆಂದರೆ ಅಬ್ರಹಾಮನು ಮರಣದ ನಂತರ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರುಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:18
10 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬಾರವು; ಅಲ್ಲದೆ ಪ್ರವಾದಿಗಳನ್ನೂ ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.


ನಾನು ಬಾಳ್‍ದೇವತೆಗಳ ಹೆಸರುಗಳನ್ನು ನಿನ್ನ ಬಾಯೊಳಗಿಂದ ತೊಲಗಿಸುವೆನು; ಅವುಗಳನ್ನು ಇನ್ನು ಎತ್ತದಿರುವಿ.


ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವದಿಲ್ಲ.


ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಹೆಸರಾಯಿತು.


ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲಾತ್ಕಾರದಿಂದ ಸ್ವಾಧೀನಪಡಿಸಿಕೊಂಡದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು ಅಬೀಮೆಲೆಕನು -


ಆದದರಿಂದ ನಮ್ಮ ಬಳಿಯಿಂದ ಹೊರಟುಹೋಗಬೇಕು ಎಂದು ಹೇಳಲು ಇಸಾಕನು ಅಲ್ಲಿಂದ ಹೋಗಿ ಗೆರಾರ್ ತಗ್ಗಿನ ಬೈಲಿನಲ್ಲಿ ಬೀಡಾರ ಮಾಡಿಕೊಂಡು ಅಲ್ಲಿ ವಾಸವಾಗಿದ್ದನು.


ಇಸಾಕನ ಸೇವಕರು ತಗ್ಗಿನಲ್ಲಿ ಅಗೆಯುವಾಗ ಅವರಿಗೆ ಸೆಲೆ ನೀರಿನ ಬಾವಿಯು ಸಿಕ್ಕಿತು.


ಅವನಿಗೆ ಇಳಕಲಿನ ಪ್ರದೇಶದಲ್ಲಿಯೂ ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳಿದ್ದದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದದರಿಂದ ಗುಡ್ಡ, ಫಲವತ್ತಾದ ಬೈಲು ಇವುಗಳಲ್ಲಿ ಹೊಲ ದ್ರಾಕ್ಷೇತೋಟಗಳ ಕೆಲಸಮಾಡುವವರನ್ನು ನೇವಿುಸಿದನು.


ಈ ಬಾವಿಯನ್ನು ತೋಡಿಸಿದವನು ನಾನೇ ಎಂಬದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಕುರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು