Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 26:31 - ಕನ್ನಡ ಸತ್ಯವೇದವು J.V. (BSI)

31 ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಇಸಾಕನು ಅವರನ್ನು ಸಾಗಕಳುಹಿಸಲು ಅವರು ಸಮಾಧಾನದೊಡನೆ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅವರು ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು. ಇಸಾಕನು ಅವರನ್ನು ಕಳುಹಿಸಲು ಅವರು ಸಮಾಧಾನದಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡರು. ಇಸಾಕನು ಅವರನ್ನು ಬೀಳ್ಕೊಡಲು ಅವರು ಸಮಾಧಾನದಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮರುದಿನ ಮುಂಜಾನೆ, ಅವರು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡು, ಸಮಾಧಾನದಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡರು. ಅನಂತರ ಇಸಾಕನು ಅವರನ್ನು ಸಾಗಕಳುಹಿಸಿದನು. ಅವರು ಸಮಾಧಾನದಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 26:31
16 ತಿಳಿವುಗಳ ಹೋಲಿಕೆ  

ಮನುಷ್ಯರು ತಮಗಿಂತ ಹೆಚ್ಚಿನವನ ಆಣೆಯಿಡುತ್ತಾರಷ್ಟೆ; ಮಾತಿಗೆ ಆಣೆಯಿಟ್ಟು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.


ಅನಂತರ ದಾವೀದನು - ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರಕೊಂಡು ಹೋಗುವಿಯೋ ಎಂದು ಕೇಳಿದ್ದಕ್ಕೆ ಅವನು - ನೀನು ನನ್ನನ್ನು ಕೊಲ್ಲುವದಿಲ್ಲವೆಂದೂ ನನ್ನ ಯಜಮಾನನ ಕೈಗೆ ಒಪ್ಪಿಸುವದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣಮಾಡಿದರೆ ನಿನ್ನನ್ನು ಆ ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು ಅಂದನು.


ನಾವಿಬ್ಬರು ಸೇರಿ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ ಬಾ; ಅದಕ್ಕೆ ಒಂದು ಸಾಕ್ಷಿಯಿರಲಿ ಎಂದು ಹೇಳಿದನು.


ಯಾಕೋಬನು - ಮೊದಲು ಪ್ರಮಾಣಮಾಡು ಅಂದಾಗ ಏಸಾವನು ಪ್ರಮಾಣಮಾಡಿ ಅವನಿಗೆ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು.


ಅದಕ್ಕೆ ದಾವೀದನು - ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕುತ್ತದೆಂಬದನ್ನು ನಿನ್ನ ತಂದೆಯು ಬಲ್ಲನು. ಆದದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವದೆಂದು ಮರೆಮಾಡುತ್ತಾನೆ. ನಿನ್ನ ಜೀವದಾಣೆ, ಯೆಹೋವನಾಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರವಿದೆ ಎಂದು ಖಂಡಿತವಾಗಿ ಹೇಳಿದನು.


ಆ ದಿವಸ ಸೌಲನು ಇಸ್ರಾಯೇಲ್ಯರನ್ನು ಕುರಿತು - ಶತ್ರುಗಳಿಗೆ ಮುಯ್ಯಿ ತೀರಿಸುವದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ ಎಂದು ಆಣೆಯಿಟ್ಟಿದ್ದದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರ ಪದಾರ್ಥವನ್ನು ರುಚಿನೋಡಲಿಲ್ಲ.


ಬೆಳಿಗ್ಗೆ ಲಾಬಾನನು ಎದ್ದು ತನ್ನ ಹೆಣ್ಣುಮಕ್ಕಳಿಗೂ ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಊರಿಗೆ ಹೊರಟುಹೋದನು.


ಬೆಳಿಗ್ಗೆ ಅಬ್ರಹಾಮನು ಎದ್ದು ಕತ್ತೆಗೆ ತಡಿಹಾಕಿಸಿ ಯಜ್ಞಕ್ಕೆ ಬೇಕಾದ ಕಟ್ಟಿಗೆಯನ್ನು ಒಡಿಸಿ ತನ್ನ ಸೇವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.


ನೀನು ಈ ಸ್ಥಳದಲ್ಲಿ ನನ್ನೊಂದಿಗೆ [ಒಡಂಬಡಿಕೆಮಾಡಿಕೊಂಡು] ನೀನು ನನಗಾಗಲಿ ನನ್ನ ಪುತ್ರಪೌತ್ರರಿಗಾಗಲಿ ಏನೂ ಅನ್ಯಾಯ ಮಾಡದೆ ನಾನು ನಿನಗೆ ಹಿತವನ್ನು ಮಾಡಿದಂತೆಯೇ ನನಗೂ ನೀನು ಇಳುಕೊಂಡಿರುವ ಈ ದೇಶಕ್ಕೂ ಹಿತವನ್ನು ಮಾಡುವದಾಗಿ ದೇವರ ಮೇಲೆ ಪ್ರಮಾಣಮಾಡಬೇಕೆಂದು ಹೇಳಿದನು.


ಮಾರಣೇ ದಿನ ಬೆಳಿಗ್ಗೆ ಅಬ್ರಹಾಮನು ಎದ್ದು ಹಾಗರಳಿಗೆ ಬುತ್ತಿಯನ್ನೂ ಒಂದು ತಿತ್ತಿ ತಣ್ಣೀರನ್ನೂ ಕೊಟ್ಟು ಅವಳ ಹೆಗಲಿನ ಮೇಲೆ ಇಟ್ಟು ಮಗುವನ್ನು ಒಪ್ಪಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.


ಸ್ವಾವಿುಗಳೇ, ನಿಮ್ಮ ದಾಸನ ಮನೆಗೆ ಬಂದು ಇಳುಕೊಂಡು ಕಾಲುಗಳನ್ನು ತೊಳಕೊಳ್ಳಿರಿ; ಬೆಳಿಗ್ಗೆ ನಿಮ್ಮ ಮಾರ್ಗ ಹಿಡುಕೊಂಡು ಹೋಗಬಹುದು ಅಂದನು. ಅವರು - ಹಾಗಲ್ಲ, ಬೀದಿಯಲ್ಲೇ ರಾತ್ರಿ ಕಳೆಯುತ್ತೇವೆ,


ಆಸ್ತಿಯನ್ನು ನೀನೇ ತಕ್ಕೋ ಎಂದು ಹೇಳಲು ಅಬ್ರಾಮನು ಅವನಿಗೆ - ಒಂದು ದಾರವನ್ನಾಗಲಿ ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವದನ್ನೂ ತೆಗೆದುಕೊಳ್ಳುವದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರದೇವರಾಗಿರುವ ಯೆಹೋವನ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ. ಅಬ್ರಾಮನು ನನ್ನ ಸೊತ್ತಿನಿಂದಲೇ ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.


ಆಗ ಅಬ್ರಹಾಮನು ಅಬೀಮೆಲೆಕನಿಗೆ ಕುರಿದನಗಳನ್ನು ದಾನಮಾಡಿದನು. ಹೀಗೆ ಅವರಿಬ್ಬರೂ ಒಡಂಬಡಿಕೆಮಾಡಿಕೊಂಡರು.


ಅದೇ ದಿನದಲ್ಲಿ ಇಸಾಕನ ಸೇವಕರು ಬಂದು - ನಮಗೆ ನೀರು ಸಿಕ್ಕಿತು ಎಂದು ಹೇಳಿ ತಾವು ತೋಡಿದ್ದ ಬಾವಿಯ ಸಂಗತಿಯನ್ನು ತಿಳಿಸಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು