Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:27 - ಕನ್ನಡ ಸತ್ಯವೇದವು J.V. (BSI)

27 ಅವನು ಹತ್ತರ ಬಂದು ಅವನಿಗೆ ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ನೋಡಿದಾಗ ಅವನನ್ನು ಆಶೀರ್ವದಿಸಿ - ಆಹಾ, ನನ್ನ ಮಗನ ಸುವಾಸನೆಯು ಯೆಹೋವನು ಆಶೀರ್ವದಿಸಿದ ಹೊಲದ ಸುವಾಸನೆಯಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ ಅವನನ್ನು ಆಶೀರ್ವದಿಸಿ, “ಆಹಾ, ನನ್ನ ಮಗನ ಸುವಾಸನೆಯು, ಯೆಹೋವನು ಆಶೀರ್ವದಿಸಿದ ಹೊಲದ ಸುವಾಸನೆಯಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಇಸಾಕನು ಅವನ ಉಡುಗೆತೊಡಿಗೆಗಳ ಸುವಾಸನೆಯನ್ನು ಮೂಸಿನೋಡಿ, ಅವನಿಗೆ ಹೀಗೆಂದು ಆಶೀರ್ವಾದ ಮಾಡಿದನು - “ನನ್ನ ಸುಕುಮಾರನಿಂದೇಳುವ ಸುವಾಸನೆ ಸರ್ವೇಶ್ವರನಾಶೀರ್ವದಿಸಿದ ಮೊಗೆನೆಲದ ಸುವಾಸನೆಯಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅದರಂತೆಯೇ ಯಾಕೋಬನು ತಂದೆಯ ಬಳಿಗೆ ಹೋಗಿ ಅವನಿಗೆ ಮುದ್ದಿಟ್ಟನು. ಇಸಾಕನು ಅವನ ಉಡುಪಿನ ವಾಸನೆಯನ್ನು ನೋಡಿ ಅವನನ್ನು ಹೀಗೆ ಆಶೀರ್ವದಿಸಿದನು: “ನನ್ನ ಮಗನ ಸುವಾಸನೆಯು ಯೆಹೋವನು ಆಶೀರ್ವದಿಸಿದ ಪ್ರದೇಶಗಳಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ, ಅವನನ್ನು ಹೀಗೆ ಆಶೀರ್ವದಿಸಿದನು, “ನನ್ನ ಮಗನ ವಾಸನೆಯು ಯೆಹೋವ ದೇವರು ಆಶೀರ್ವದಿಸಿದ ಹೊಲದ ವಾಸನೆಯಂತೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:27
14 ತಿಳಿವುಗಳ ಹೋಲಿಕೆ  

ಭೂವಿುಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿವಿುತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;


ನೇಗಿಲಗೆರೆಗಳನ್ನು ತ್ಯಾವಿಸಿ ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತೀ; ಅದರ ಬೆಳೆಯನ್ನು ವೃದ್ಧಿಪಡಿಸುತ್ತೀ.


ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರುಷದಲ್ಲಿ ನೂರರಷ್ಟು ಬೆಳೆಯನ್ನು ಹೊಂದಿದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;


ನಂಬಿಕೆಯಿಂದಲೇ ಇಸಾಕನು ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದಾಗ ಮುಂದೆ ಸಂಭವಿಸಬೇಕಾದ ಸಂಗತಿಗಳನ್ನು ಸೂಚಿಸಿದನು.


ಅಂಜೂರದ ಮರವು ಕಾಯಿಗಳನ್ನು ಪಕ್ವಕ್ಕೆ ತರುತ್ತದೆ, ದ್ರಾಕ್ಷೆಯ ಬಳ್ಳಿಗಳು ಹೂಬಿಟ್ಟು ಪರಿಮಳವನ್ನು ಬೀರುತ್ತವೆ. ನನ್ನ ಪ್ರಿಯಳೇ, ಎನ್ನ ಸುಂದರಿಯೇ, ಎದ್ದು ಬಾ!


ಸವಿಯೂಟವನ್ನು ಸಿದ್ಧಪಡಿಸಿದ ಮೇಲೆ ಮನೆಯಲ್ಲಿ ತನ್ನ ವಶದಲ್ಲಿದ್ದ ಹಿರೀಮಗನಾದ ಏಸಾವನ ಶ್ರೇಷ್ಠ ವಸ್ತ್ರಗಳನ್ನು ತೆಗೆದು ತನ್ನ ಕಿರೀಮಗನಾದ ಯಾಕೋಬನಿಗೆ ಹೊದ್ದಿಸಿ


ಆಮೇಲೆ ಅವನ ತಂದೆಯಾದ ಇಸಾಕನು ಅವನಿಗೆ - ಮಗನೇ, ನೀನು ಹತ್ತರ ಬಂದು ನನಗೆ ಮುದ್ದಿಡು ಎಂದು ಹೇಳಲು


ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬುಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.


ಯೋಸೇಫ್ ಕುಲಗಳ ವಿಷಯದಲ್ಲಿ ಹೇಳಿದ್ದೇನಂದರೆ - ಅವರ ಸೀಮೆಗೆ ಯೆಹೋವನ ಆಶೀರ್ವಾದವಾಗಲಿ. ಮೇಲಣ ಆಕಾಶದಿಂದುಂಟಾಗುವ ಮಂಜು, ಕೆಳಗಣ ಸಾಗರದ ಸೆಲೆ,


ಎಂದು ಹೇಳಿ ಗೋಳಾಡುತ್ತಾ ಅಳಲು ಅವನ ತಂದೆಯಾದ ಇಸಾಕನು ಅವನಿಗೆ - ಸಾರವುಳ್ಳ ಭೂವಿುಯೂ ಮೇಲಿನಿಂದ ಬೀಳುವ ಆಕಾಶದ ಮಂಜೂ ಇರುವ ಸ್ಥಳದಲ್ಲಿ ನಿನ್ನ ನಿವಾಸವಿರುವದು.


ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರು ಸೇವಿಸಿದ ದೇವರಾಗಿಯೂ ನನ್ನನ್ನು ಚಿಕ್ಕಂದಿನಿಂದ ಈ ದಿನದವರೆಗೂ ಪರಾಂಬರಿಸುತ್ತಾ ಬಂದ ದೇವರಾಗಿಯೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು