Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 27:40 - ಕನ್ನಡ ಸತ್ಯವೇದವು J.V. (BSI)

40 ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ಕೊಸರಿಕೊಳ್ಳುವಾಗ ಅವನು ನಿನ್ನ ಹೆಗಲಿನ ಮೇಲೆ ಹಾಕಿರುವ ನೊಗವನ್ನು ಮುರಿದುಹಾಕುವಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಬಾಳ ನಡೆಸುವೆ ಕತ್ತಿಕಠಾರಿಯಿಂದಲೇ ಕೂಲಿಯಾಳಾಗುವೆ ಸೋದರನಿಗೆ ಮುರಿಯುವೆ ಅವ ಹೊರಿಸಿದ ನೊಗವ ಸ್ವಾತಂತ್ರ್ಯಕ್ಕಾಗಿ ನೀ ಬಂಡಾಯ ಹೂಡಿದಾಗ,”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನೀನು ಕತ್ತಿಯಿಂದಲೇ ಜೀವಿಸುವೆ. ನೀನು ನಿನ್ನ ತಮ್ಮನ ಸೇವಕನಾಗಿರುವೆ. ಆದರೆ ನೀನು ಬಿಡುಗಡೆಯಾಗಲು ಹೋರಾಡಿ ಅವನ ಹಿಡಿತದಿಂದ ಪಾರಾಗುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ನೀನು ಖಡ್ಗದಿಂದಲೇ ಬದುಕುವೆ, ನಿನ್ನ ಸಹೋದರರನ್ನು ನೀನು ಸೇವೆಮಾಡುವೆ, ಆದರೆ ನಿನ್ನ ತಾಳ್ಮೆ ತಪ್ಪಿದಾಗ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದುಹಾಕುವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 27:40
17 ತಿಳಿವುಗಳ ಹೋಲಿಕೆ  

ಯೆಹೋವನು ಆಕೆಗೆ - ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಅವೆ; ಆ ಎರಡು ಜನಾಂಗಗಳು ಜನ್ಮಾರಭ್ಯ ವಿರೋಧದಿಂದ ಭೇದವಾಗುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವದು; ಹಿರಿಯದು ಕಿರಿಯದಕ್ಕೆ ಸೇವೆ ಮಾಡುವದು ಎಂದು ಹೇಳಿದನು.


ಯೆಹೂದ್ಯರಿಗೆ ವಿರೋಧವಾಗಿ ತಿರುಗಿಬಿದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಆ ಕಾಲದಲ್ಲಿಯೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪಿತೃಗಳ ದೇವರಾದ ಯೆಹೋವನನ್ನು ಬಿಟ್ಟದ್ದೇ ಇದಕ್ಕೆ ಕಾರಣ.


ಅವನು ಎದೋವಿುನಲ್ಲೆಲ್ಲಾ ಕಾವಲುದಂಡುಗಳನ್ನಿರಿಸಿದನು; ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.


ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; ಎದೋಮ್ ಸೀಮೆಯು ನನ್ನ ಕೆರಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯರು ನನ್ನ ವಿಷಯವಾಗಿ ಕೂಗಿಕೊಳ್ಳಲಿ.


ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿಬಿದ್ದು ಸ್ವತಂತ್ರರಾಗಿದ್ದು ತಾವೇ ತಮಗೊಬ್ಬ ಅರಸನನ್ನು ನೇವಿುಸಿಕೊಂಡರು.


ಯಾಕಂದರೆ ಎದೋಮ್ಯರು ಯೆಹೂದ್ಯರ ಮೇಲೆ ತಿರಿಗಿ ಯುದ್ಧಕ್ಕೆ ಬಂದು ಅವರನ್ನು ಸೋಲಿಸಿ ಅನೇಕಾನೇಕರನ್ನು ಸೆರೆಯೊಯ್ದಿದ್ದರು.


ನೀನು ಎದೋಮ್ಯರನ್ನು ಸೋಲಿಸಿದದರಿಂದ ಬಹಳವಾಗಿ ಉಬ್ಬಿಕೊಂಡಿದ್ದೀ; ಆ ಕೀರ್ತಿಯು ಸಾಕೆಂದು ನೆನಸಿ ಸುಮ್ಮನೆ ಮನೆಯಲ್ಲಿ ಕೂತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ ನಿನ್ನ ರಾಜ್ಯದ ಮೇಲೆಯೂ ಯಾಕೆ ಕೇಡನ್ನು ಬರಮಾಡಿಕೊಳ್ಳುತ್ತೀ ಎಂದು ಉತ್ತರಕೊಟ್ಟು ಕಳುಹಿಸಿದನು.


ಇದಲ್ಲದೆ ಉಪ್ಪಿನತಗ್ಗಿನಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಹೊಡೆದು ಅವರಿಂದ ಸೆಲ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.


ತರುವಾಯ ಆ ದೂತರು ಯಾಕೋಬನ ಬಳಿಗೆ ತಿರಿಗಿ ಬಂದು - ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆಂದು ಹೇಳಿದಾಗ


ಭೂಲೋಕದ ಮೇಲೆ ಸಮಾಧಾನ ಹುಟ್ಟಿಸುವದಕ್ಕೆ ಬಂದೆನೆಂದು ನೆನಸಬೇಡಿರಿ; ಸಮಾಧಾನವನ್ನು ಹುಟ್ಟಿಸುವದಕ್ಕೆ ನಾನು ಬಂದಿಲ್ಲ, ಖಡ್ಗವನ್ನು ಹಾಕುವದಕ್ಕೆ ಬಂದೆನು.


ಪರಜನಗಳು ನಿನ್ನನ್ನು ಸೇವಿಸಲಿ. ಪರಕುಲಗಳು ನಿನಗೆ ಅಡ್ಡಬೀಳಲಿ. ನಿನ್ನ ಅಣ್ಣತಮ್ಮಂದಿರಲ್ಲಿ ನೀನು ದೊರೆಯಾಗು, ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವು ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಉಂಟಾಗಲಿ ಅಂದನು.


ಏಸಾವನು - ತಮ್ಮನೇ, ನನಗೆ ಬೇಕಾದಷ್ಟು ಆಸ್ತಿಯುಂಟು; ನಿನ್ನದು ನಿನಗೇ ಇರಲಿ ಅನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು