Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:21 - ಕನ್ನಡ ಸತ್ಯವೇದವು J.V. (BSI)

21 ತಿರಿಗಿ ನನ್ನನ್ನು ತಂದೆಯ ಮನೆಗೆ ಸುರಕ್ಷಿತವಾಗಿ ಬರಮಾಡಿದರೆ ಯೆಹೋವನೇ ನನ್ನ ದೇವರಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ತಿರುಗಿ ನನ್ನನ್ನು ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಬರಮಾಡಿದರೆ ಯೆಹೋವನೇ ನನಗೆ ದೇವರಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಮರಳಿ ಬರಮಾಡಿದರೆ ಸರ್ವೇಶ್ವರಸ್ವಾಮಿಯೇ ನನಗೆ ದೇವರು ಆಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಾನು ಸಮಾಧಾನದಿಂದ ನನ್ನ ತಂದೆಯ ಮನೆಗೆ ಹಿಂತಿರುಗಿ ಬರುವಂತೆ ಮಾಡಿದರೆ ಯೆಹೋವನೇ ನನ್ನ ದೇವರಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನನ್ನನ್ನು ಸಮಾಧಾನವಾಗಿ ನನ್ನ ತಂದೆಯ ಮನೆಗೆ ತಿರುಗಿ ಬರಮಾಡಿದರೆ, ಯೆಹೋವ ನನಗೆ ದೇವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:21
8 ತಿಳಿವುಗಳ ಹೋಲಿಕೆ  

ನಾನು ಸುರಕ್ಷಿತನಾಗಿ ಮನೆಗೆ ಮುಟ್ಟಿದಾಗ ನನ್ನನ್ನು ಎದುರುಗೊಳ್ಳುವದಕ್ಕಾಗಿ ನನ್ನ ಮನೆಯ ಬಾಗಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು ಅದನ್ನು ನಿನಗೋಸ್ಕರ ಹೋಮಮಾಡುವೆನು ಎಂದು ಹರಕೆಮಾಡಿದನು.


ನಮಗೆ ಯೆಹೋವನೇ ದೇವರಾಗಿರುವನೆಂದೂ ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಂಡು ಆತನ ಮಾತಿಗೆ ಲಕ್ಷ್ಯವಿಡುವೆವೆಂದೂ ನೀವು ಈಗ ಒಡಂಬಟ್ಟಿದ್ದೀರಿ.


ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವದಕ್ಕೆ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನು ತನ್ನ ಕಾಲುಗಳನ್ನು ಕಟ್ಟಿಕೊಂಡಿದ್ದಿಲ್ಲ, ಮೀಸೆಯನ್ನು ಕತ್ತರಿಸಿದ್ದಿಲ್ಲ, ಬಟ್ಟೆಗಳನ್ನು ಒಗೆಸಿಕೊಂಡಿದ್ದಿಲ್ಲ,


ನಿನ್ನ ಸೇವಕನಾದ ನಾನು ಅರಾಮ್‍ದೇಶದ ಗೆಷೂರಿನಲ್ಲಿದ್ದಾಗ - ಯೆಹೋವನು ನನ್ನನ್ನು ತಿರಿಗಿ ಯೆರೂಸಲೇವಿುಗೆ ಬರಮಾಡುವದಾದರೆ ಆತನಿಗೆ ಒಂದು ವಿಶೇಷವಾದ ಆರಾಧನೆ ಮಾಡಿಸುವೆನೆಂದು ಹರಕೆಮಾಡಿದ್ದೆನು ಎಂದು ವಿಜ್ಞಾಪಿಸಲು


ನನ್ನ ಬಲವೂ ಕೀರ್ತನೆಯೂ ಯಾಹುವೇ, ಆತನಿಂದ ನನಗೆ ರಕ್ಷಣೆಯುಂಟಾಯಿತು. ನಮ್ಮ ದೇವರು ಆತನೇ, ಆತನನ್ನು ವರ್ಣಿಸುವೆವು; ನಮ್ಮ ಪಿತೃಗಳ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.


ಆಗ ಅವನು ಎಲೀಷನಿಗೆ - ನೀನು ನನ್ನದನ್ನು ಸ್ವೀಕರಿಸದಿದ್ದರೆ ನಿನ್ನ ಸೇವಕನಾದ ನನಗೆ ಎರಡು ಹೇಸರಕತ್ತೆಗಳು ಹೊರುವಷ್ಟು ಮಣ್ಣನ್ನು ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಯೆಹೋವನೊಬ್ಬನಿಗೇ ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸಬೇಕೆಂದಿರುತ್ತೇನೆ.


ಅದಕ್ಕೆ ಮೆಫೀಬೋಶೆತನು - ಚೀಬನು ಎಲ್ಲವನ್ನು ತಾನೇ ತೆಗೆದುಕೊಂಡರೂ ತೆಗೆದುಕೊಳ್ಳಲಿ, ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತವಾಗಿ ಬಂದದ್ದೇ ಸಾಕು ಅಂದನು.


ಯಾಬೇಚನು ಇಸ್ರಾಯೇಲ್ ದೇವರಿಗೆ - ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ ನನ್ನ ಪ್ರಾಂತವನ್ನು ವಿಸ್ತರಿಸಿ ನಿನ್ನ ಹಸ್ತದಿಂದ ನನ್ನನ್ನು ಹಿಡಿದು ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ರಕ್ಷಿಸಬಾರದೇ ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು