Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 28:4 - ಕನ್ನಡ ಸತ್ಯವೇದವು J.V. (BSI)

4 ಆತನು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಟ್ಟು ತಾನು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದೂ ನೀನು ಪ್ರವಾಸವಾಗಿರುವಂಥದೂ ಆಗಿರುವ ಈ ದೇಶವನ್ನು ನೀನು ಬಾಧ್ಯನಾಗಿ ಹೊಂದುವಂತೆ ಮಾಡಲಿ ಎಂದು ಹೇಳಿ ಆಶೀರ್ವದಿಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರು ಅಬ್ರಹಾಮನಿಗೆ ಕೊಟ್ಟಿರುವ ಆಶೀರ್ವಾದವನ್ನು ನಿನಗೂ, ನಿನ್ನ ಸಂತತಿಗೂ ಕೊಡಲಿ, ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಹಾಗೆ, ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ಸ್ವತ್ತಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ ನಿನಗೂ ನಿನ್ನ ಸಂತತಿಗೂ ಕೊಡಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೇವರು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಡಲಿ; ನೀನು ಪ್ರವಾಸಿಯಾಗಿರುವ ಈ ನಾಡನ್ನು, ಅಂದರೆ ಅಬ್ರಹಾಮನಿಗೆ ದೇವರು ವಾಗ್ದಾನಮಾಡಿದ್ದ ಈ ನಾಡನ್ನು, ನೀನು ಸ್ವಂತ ಸೊತ್ತಾಗಿಸಿಕೊಳ್ಳುವಂತಾಗಲಿ!” ಎಂದು ಹರಸಿ ಕಳುಹಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರು ಅಬ್ರಹಾಮನನ್ನು ಆಶೀರ್ವದಿಸಿದ ರೀತಿಯಲ್ಲಿ ನಿನ್ನನ್ನೂ ನಿನ್ನ ಮಕ್ಕಳನ್ನೂ ಆಶೀರ್ವದಿಸುವಂತೆಯೂ ನೀನು ವಾಸಿಸುವ ಸ್ಥಳದಲ್ಲಿ ಸ್ವಂತ ಭೂಮಿಯನ್ನು ಪಡೆದುಕೊಳ್ಳುವಂತೆಯೂ ನಾನು ಪ್ರಾರ್ಥಿಸುವೆನು. ದೇವರು ಅಬ್ರಹಾಮನಿಗೆ ಕೊಟ್ಟ ಭೂಮಿಯೇ ಅದು” ಎಂದು ಹೇಳಿ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ನೀನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೂ, ನಿನ್ನ ಸಂತತಿಗೂ ಕೊಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 28:4
20 ತಿಳಿವುಗಳ ಹೋಲಿಕೆ  

ಕ್ರಿಸ್ತನು ನಮ್ಮ ನಿವಿುತ್ತ ಶಾಪವಾಗಿ ಧರ್ಮಶಾಸ್ತ್ರದಲ್ಲಿ ಹೇಳಿರುವ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ.


ಅಲ್ಲಿ ಯೆಹೋವನು ಅಬ್ರಾಮನಿಗೆ ದರ್ಶನಕೊಟ್ಟು - ನಾನು ಈ ದೇಶವನ್ನು ನಿನ್ನ ಸಂತಾನಕ್ಕೆ ಕೊಡುವೆನು ಅಂದನು. ತನಗೆ ದರ್ಶನಕೊಟ್ಟ ಯೆಹೋವನಿಗೆ ಅಬ್ರಾಮನು ಯಜ್ಞವೇದಿಯನ್ನು ಕಟ್ಟಿಸಿದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.


ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ ಪರದೇಶದವನೂ ಆಗಿದ್ದೇನಲ್ಲಾ.


ದೇವರು ಅನ್ಯಜನರನ್ನು ನಂಬಿಕೆಯ ನಿವಿುತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬದಾಗಿ ಶಾಸ್ತ್ರವು ಮೊದಲೇ ಕಂಡು ಅಬ್ರಹಾಮನಿಗೆ - ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಶುಭವರ್ತಮಾನವನ್ನು ಮುಂಚಿತವಾಗಿಯೇ ತಿಳಿಸಿತು.


ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.


ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳುಕೊಳ್ಳುವದು ಹೇಗೆ ಎಂದು ಕೇಳಿದನು.


ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ - ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವದಕ್ಕಿಂತ ಮುಂಚೆ ಅವನು ತಂದದ್ದರಲ್ಲಿ ನಾನು ಊಟ ಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು ಅಂದನು.


ಆದರೆ ಯಾಕೋಬನು ತನ್ನ ತಂದೆ ಪ್ರವಾಸವಾಗಿದ್ದ ಕಾನಾನ್‍ದೇಶದಲ್ಲಿಯೇ ವಾಸವಾಗಿದ್ದನು.


ನಾನು ಅವರಿಗೆ - ನೀವು ಪ್ರವಾಸವಾಗಿರುವ ಕಾನಾನ್ ದೇಶವನ್ನು ನಿಮಗೇ ಕೊಡುವೆನೆಂಬದಾಗಿ ದೃಢವಾಗಿ ವಾಗ್ದಾನ ಮಾಡಿದೆನಷ್ಟೆ.


ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ ನಮ್ಮ ಪಿತೃಗಳೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ, ನಮ್ಮ ಆಯುಷ್ಕಾಲವು ನೆರಳಿನಂತಿದೆ; ನಮಗೆ ಯಾವ ನಿರೀಕ್ಷೆಯೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು