Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:3 - ಕನ್ನಡ ಸತ್ಯವೇದವು J.V. (BSI)

3 ಮತ್ತು ಯೆಹೋವನು ಅವನಿಗೆ - ನಿನ್ನ ತಂದೆತಾತಂದಿರ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ತಿರಿಗಿ ಹೋಗು; ನಾನು ನಿನ್ನೊಂದಿಗೆ ಇರುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮತ್ತು ಯೆಹೋವನು ಯಾಕೋಬನಿಗೆ, “ನೀನು ನಿನ್ನ ತಂದೆಯ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನೊಂದಿಗೆ ಇರುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಸರ್ವೇಶ್ವರ ಸ್ವಾಮಿ ಅವನಿಗೆ, “ನಿನ್ನ ತಂದೆ ತಾತಂದಿರ ನಾಡಿಗೂ ನಿನ್ನ ಬಂಧುಬಳಗದವರ ಬಳಿಗೂ ಹಿಂದಿರುಗು. ನಾನು ನಿನ್ನೊಂದಿಗೆ ಇರುತ್ತೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಯಾಕೋಬನಿಗೆ, “ನಿನ್ನ ಪೂರ್ವಿಕರು ವಾಸಿಸಿದ ನಿನ್ನ ಸ್ವಂತ ಸ್ಥಳಕ್ಕೆ ಹಿಂತಿರುಗಿ ಹೋಗು. ನಾನು ನಿನ್ನ ಸಂಗಡವಿರುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೋವ ದೇವರು ಯಾಕೋಬನಿಗೆ, “ನಿನ್ನ ತಂದೆಗಳ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ನಾನು ನಿನ್ನ ಸಂಗಡ ಇರುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:3
26 ತಿಳಿವುಗಳ ಹೋಲಿಕೆ  

ಇದಲ್ಲದೆ ನಾನು ನಿನ್ನ ಸಂಗಡ ಇದ್ದು ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನನ್ನು ಕಾಪಾಡಿ ತಿರಿಗಿ ಈ ದೇಶಕ್ಕೆ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸಿದ ಹೊರತು ಬಿಡುವದಿಲ್ಲ ಅಂದನು.


ಇದಲ್ಲದೆ ಅವನು ದೇವರನ್ನು ಪ್ರಾರ್ಥಿಸಿ - ಯೆಹೋವನೇ, ನನ್ನ ತಂದೆತಾತಂದಿರಾದ ಇಸಾಕ ಅಬ್ರಹಾಮರ ದೇವರೇ, ಸ್ವದೇಶಕ್ಕೆ ಬಂಧುಗಳ ಬಳಿಗೆ ತಿರಿಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೇದನ್ನು ಮಾಡುವೆನೆಂದು ನನಗೆ ವಾಗ್ದಾನ ಮಾಡಿದವನು ನೀನೇ ಅಲ್ಲವೇ.


ದ್ರವ್ಯಾಶೆಯಿಲ್ಲದವರಾಗಿರಿ; ನಿಮಗಿರುವವುಗಳಲ್ಲಿ ತೃಪ್ತರಾಗಿರಿ; ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ, ಎಂದಿಗೂ ತೊರೆಯುವದಿಲ್ಲವೆಂದು ದೇವರು ತಾನೇ ಹೇಳಿದ್ದಾನೆ.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ; ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಬೇತೇಲಿನಲ್ಲಿ ನಿನಗೆ ಕಾಣಿಸಿದ ದೇವರು ನಾನೇ; ಅಲ್ಲಿ ಕಂಬದ ಮೇಲೆ ಎಣ್ಣೆಹೊಯಿದು ನನಗೆ ಹರಕೆ ಮಾಡಿಕೊಂಡಿಯಷ್ಟೆ. ಈಗ ನೀನೆದ್ದು ಈ ದೇಶವನ್ನು ಬಿಟ್ಟು ನೀನು ಹುಟ್ಟಿದ ದೇಶಕ್ಕೆ ತಿರಿಗಿಹೋಗು ಎಂದು ಹೇಳಿದನು.


ಆ ಕಾಲದಲ್ಲಿ ಅಬೀಮೆಲೆಕನು ತನ್ನ ಸೇನಾಪತಿಯಾದ ಫೀಕೋಲನ ಸಮೇತ ಅಬ್ರಹಾಮನಿಗೆ - ನೀನು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾನಾದ್ದರಿಂದ


ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.


ದೇವರು ಯಾಕೋಬನಿಗೆ - ನೀನು ಈ ಸ್ಥಳವನ್ನು ಬಿಟ್ಟು ಗಟ್ಟಾಹತ್ತಿ ಬೇತೇಲಿಗೆ ಹೋಗಿ ಅಲ್ಲೇ ವಾಸಮಾಡು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋದ ಕಾಲದಲ್ಲಿ ದೇವರು ಅಲ್ಲಿ ನಿನಗೆ ದರ್ಶನಕೊಟ್ಟನಲ್ಲಾ; ಆತನಿಗಾಗಿ ಯಜ್ಞವೇದಿಯನ್ನು ಕಟ್ಟಿಸು ಎಂದು ಹೇಳಿದನು.


ತಾನು ಗಳಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ ಪದ್ದನ್ಅರಾಮ್ ದೇಶದಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಪಶುಗಳನ್ನೂ ತೆಗೆದುಕೊಂಡು ಕಾನಾನ್ ದೇಶಕ್ಕೆ ತನ್ನ ತಂದೆಯಾದ ಇಸಾಕನ ಬಳಿಗೆ ಹೋಗುವದಕ್ಕಾಗಿ ಹೊರಟನು.


ರಾಹೇಲಳು ಯೋಸೇಫನನ್ನು ಹೆತ್ತ ನಂತರ ಯಾಕೋಬನು ಲಾಬಾನನಿಗೆ - ನನಗೆ ಅಪ್ಪಣೆ ಕೊಡಬೇಕು; ನಾನು ನನ್ನ ದೇಶದಲ್ಲಿರುವ ಸ್ವಂತ ಊರಿಗೆ ಹೋಗಬೇಕು.


ಇದಲ್ಲದೆ ಯೆಹೋವನು ಅವನ ಬಳಿಯಲ್ಲಿ ನಿಂತು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಯೆಹೋವನು. ನೀನು ಮಲಗಿಕೊಂಡಿರುವ ಈ ದೇಶವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ಆತನು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಟ್ಟು ತಾನು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದೂ ನೀನು ಪ್ರವಾಸವಾಗಿರುವಂಥದೂ ಆಗಿರುವ ಈ ದೇಶವನ್ನು ನೀನು ಬಾಧ್ಯನಾಗಿ ಹೊಂದುವಂತೆ ಮಾಡಲಿ ಎಂದು ಹೇಳಿ ಆಶೀರ್ವದಿಸಿ ಕಳುಹಿಸಿಬಿಟ್ಟನು.


ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಬಳಿಯಲ್ಲಿದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿವಿುತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಎಂದು ಹೇಳಲಾಗಿ


ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.


ನೀನು ನಮ್ಮನ್ನು ಕುಗ್ಗಿಸಿದ ದಿವಸಗಳಿಗೂ ನಾವು ಕೇಡನ್ನು ಅನುಭವಿಸಿದ ವರುಷಗಳಿಗೂ ತಕ್ಕಂತೆ ನಮ್ಮನ್ನು ಸಂತೋಷಪಡಿಸು.


ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ - ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣವಾಗಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನೆಂದು ತಿಳಿದುಕೊಳ್ಳಿರಿ ಎಂದು ಹೇಳಿದನು.


ಇದಲ್ಲದೆ ಅವನು ಲಾಬಾನನ ಮುಖಭಾವವನ್ನು ನೋಡಿದಾಗ ಅದು ಮೊದಲಿದ್ದಂತೆ ತೋರಲಿಲ್ಲ.


ಹೀಗಿರುವದರಿಂದ ಯಾಕೋಬನು ರಾಹೇಲಳನ್ನೂ ಲೇಯಳನ್ನೂ ತಾನು ಆಡುಕುರಿಗಳನ್ನು ಮೇಯಿಸುತ್ತಿದ್ದ ಅಡವಿಗೆ ಕರಸಿಕೊಂಡು


ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ ಎಂದು ಹೇಳಿದನು.


ಅದಕ್ಕೆ ದೇವರು - ನಾನೇ ನಿನ್ನ ಸಂಗಡ ಇರುವೆನು; ಮತ್ತು ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ; ನಿನ್ನನ್ನು ಕಳುಹಿಸಿದವನು ನಾನೇ ಎಂಬದಕ್ಕೆ ಇದೇ ನಿನಗೆ ಗುರುತಾಗಿರುವದು ಅಂದನು.


ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸೀಜನವೂ ಉಂಟಾದವು; ತಮ್ಮ ದಯವಿರಬೇಕೆಂದು ಪ್ರಭುಗಳಿಗೆ ತಿಳಿಸುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆಂದು ಹೇಳಿರಿ ಅಂದನು.


ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಪಾತ್ರನಾಗಿದ್ದೇನೆ. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನಗೆ ಕೋಲು ಮಾತ್ರವೇ ಇತ್ತು; ಈಗ ಎರಡು ಪಾಳೆಯಗಳಿಗೆ ಒಡೆಯನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು