Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:42 - ಕನ್ನಡ ಸತ್ಯವೇದವು J.V. (BSI)

42 ನನ್ನ ಹಿರಿಯರ ದೇವರು, ಅಂದರೆ ಅಬ್ರಹಾಮನ ದೇವರೂ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರೂ ಆಗಿರುವಾತನು, ನನ್ನ ಪಕ್ಷದಲ್ಲಿ ಇರದಿದ್ದರೆ ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿ. ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸವನ್ನೂ ನೋಡಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ನನ್ನ ತಂದೆಯ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಆದರೆ ನನ್ನ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನು ಭಯಪಡುವ ದೇವರೂ ನನ್ನ ಸಂಗಡವಿದ್ದನು. ದೇವರು ನನ್ನ ಜೊತೆಯಲ್ಲಿ ಇಲ್ಲದಿದ್ದರೆ ನೀನು ನನ್ನನ್ನು ಬರಿಗೈಲಿ ಕಳುಹಿಸಿಬಿಡುತ್ತಿದ್ದೆ. ಆದರೆ ನನ್ನ ಕಷ್ಟವನ್ನೂ ನಾನು ಮಾಡಿದ ಕೆಲಸವನ್ನೂ ದೇವರು ನೋಡಿದನು. ನಿನ್ನೆಯ ರಾತ್ರಿ ನಾನು ತಪ್ಪಿತಸ್ಥನಲ್ಲವೆಂದು ದೇವರು ನಿನಗೆ ತೋರಿಸಿಕೊಟ್ಟಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ನನ್ನ ತಂದೆ ದೇವರೂ, ಅಬ್ರಹಾಮನ ದೇವರೂ, ಇಸಾಕನ ಭಯವೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದೆ. ನನ್ನ ಬಾಧೆಯನ್ನೂ, ನನ್ನ ಕಷ್ಟವನ್ನೂ ದೇವರು ಕಂಡು, ನಿನ್ನೆ ರಾತ್ರಿ ನಿನ್ನನ್ನು ಗದರಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:42
22 ತಿಳಿವುಗಳ ಹೋಲಿಕೆ  

ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; ನಾನು ಕುಗ್ಗಿಹೋಗಿರುವದನ್ನು ನೋಡಿ ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ.


ನಿಮಗೆ ಕೇಡುಮಾಡುವದಕ್ಕೆ ನನ್ನಲ್ಲಿ ಸಾಮರ್ಥ್ಯವುಂಟು; ಆದರೆ ಹೋದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು - ಯಾಕೋಬನಿಗೆ ಏನೂ ಅನ್ನಬೇಡ ನೋಡಿಕೋ ಎಂದು ನನಗೆ ಎಚ್ಚರಿಸಿದನು.


ಅಬ್ರಹಾಮ ನಾಹೋರರ ದೇವರು ಅಂದರೆ ಅವರ ತಂದೆಯ ದೇವರು ನಿನಗೂ ನನಗೂ ನ್ಯಾಯತೀರಿಸಲಿ ಅಂದನು. ಅದೇ ಮೇರೆಗೆ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಿದನು.


ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು - ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ; ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ರೂಬೇನೆಂದು ಹೆಸರಿಟ್ಟಳು.


ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೇ ಹೆದರಿಕೊಳ್ಳಿರಿ, ನಡುಗಿರಿ.


ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು - ನೋಡಿಕೋ, ನೀನು ಯಾಕೋಬನಿಗೆ ಏನೂ ಅನ್ನಬೇಡ ಎಂದು ಹೇಳಿದನು.


ಆದರೆ ಪ್ರಧಾನ ದೇವದೂತನಾದ ಮೀಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದಮಾಡಿದಾಗ ಅವನು ಸೈತಾನನ ಮೇಲೆ ದೂಷಣಾಭಿಪ್ರಾಯವನ್ನು ಹೇಳುವದಕ್ಕೆ ಧೈರ್ಯಗೊಳ್ಳದೆ - ಕರ್ತನು ನಿನ್ನನ್ನು ಖಂಡಿಸಲಿ ಅಂದನು.


ನೀವು ಸ್ನೇಹಭಾವದಿಂದ ಸಹಾಯಮಾಡುವದಕ್ಕಾಗಿ ನನ್ನ ಬಳಿಗೆ ಬಂದಿರುವದಾದರೆ ನಿಮ್ಮೊಡನೆ ನನಗೆ ಐಕ್ಯಭಾವವಿರುವದು; ನಿರಪರಾಧಿಯಾದ ನನ್ನನ್ನು ನನ್ನ ವಿರೋಧಿಗಳಿಗೆ ಒಪ್ಪಿಸುವ ಕುಯುಕ್ತಿಯಿಂದ ಬಂದಿರುವದಾದರೆ ನಮ್ಮ ಪಿತೃಗಳ ದೇವರು ನಿಮ್ಮನ್ನು ನೋಡಿ ದಂಡಿಸಲಿ ಅಂದನು.


ಆಗ ಯೆಹೋವನು - ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ. ಬಿಟ್ಟೀಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು; ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ಆತನು ನನಗೆ - ಲಾಬಾನನು ನಿನ್ನ ವಿಷಯದಲ್ಲಿ ನಡಕೊಂಡ ರೀತಿಯನ್ನು ನಾನು ನೋಡಿದ್ದೇನೆ; ಆದದರಿಂದ ನೀನು ಕಣ್ಣೆತ್ತಿ ನೋಡು; ಕುರಿಗಳ ಮೇಲೆ ಹಾರುವ ಟಗರುಗಳೆಲ್ಲವೂ ರೇಖೆ ಚುಕ್ಕೆ ಮಚ್ಚೆಗಳುಳ್ಳವುಗಳಾಗಿವೆ.


ಅವರಿಗೆ ಹೇಳಿದ್ದೇನಂದರೆ - ನಿಮ್ಮ ತಂದೆಯ ಮುಖಭಾವವು ನನ್ನ ವಿಷಯದಲ್ಲಿ ಮೊದಲಿದ್ದಂತೆ ಇಲ್ಲವೆಂದು ತೋರಬಂತು. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾನೆ.


ಅದಕ್ಕೆ ಇಸಾಕನು ಬಹಳವಾಗಿ ಗಡಗಡನೆ ನಡುಗುತ್ತಾ - ಯಾರೋ ಬೇರೊಬ್ಬನು ಬೇಟೆ ಮಾಂಸವನ್ನು ತಂದು ನನಗೆ ಕೊಟ್ಟುಹೋದನಲ್ಲಾ. ನೀನು ಬರುವದಕ್ಕಿಂತ ಮುಂಚೆ ಅವನು ತಂದದ್ದರಲ್ಲಿ ನಾನು ಊಟ ಮಾಡಿ ಅವನನ್ನೇ ಆಶೀರ್ವದಿಸಿದೆನು; ಅವನಿಗೆ ಮಾಡಿದ ಆಶೀರ್ವಾದ ತಪ್ಪಲಾರದು ಅಂದನು.


ಅವಳು - ನನ್ನನ್ನು ನೋಡುವಾತನನ್ನು ನಾನು ಇಲ್ಲಿಯೂ ನೋಡಿದ್ದೇನಲ್ಲಾ ಅಂದುಕೊಂಡು ತನ್ನ ಸಂಗಡ ಮಾತಾಡಿದ್ದ ಯೆಹೋವನಿಗೆ [ಎಲ್ಲವನ್ನೂ] ನೋಡುವ ದೇವರೆಂದು ಹೆಸರಿಟ್ಟಳು.


ಮತ್ತು ಯೆಹೋವನ ದೂತನು ಅವಳಿಗೆ - ನೀನು ಬಸುರಾಗಿದ್ದೀಯಷ್ಟೆ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.


ನರಪುತ್ರರು ಕಟ್ಟುತ್ತಿದ್ದ ಆ ಪಟ್ಟಣವನ್ನೂ ಗೋಪುರವನ್ನೂ ನೋಡುವದಕ್ಕೆ ಯೆಹೋವನು ಇಳಿದು ಬಂದನು.


ಇದಲ್ಲದೆ ಅವನು ದೇವರನ್ನು ಪ್ರಾರ್ಥಿಸಿ - ಯೆಹೋವನೇ, ನನ್ನ ತಂದೆತಾತಂದಿರಾದ ಇಸಾಕ ಅಬ್ರಹಾಮರ ದೇವರೇ, ಸ್ವದೇಶಕ್ಕೆ ಬಂಧುಗಳ ಬಳಿಗೆ ತಿರಿಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೇದನ್ನು ಮಾಡುವೆನೆಂದು ನನಗೆ ವಾಗ್ದಾನ ಮಾಡಿದವನು ನೀನೇ ಅಲ್ಲವೇ.


ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ ಎಂದು ಹೇಳಿದನು.


ಇಸ್ರಾಯೇಲನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು ಪ್ರಯಾಣಮಾಡಿ ಬೇರ್ಷಬಕ್ಕೆ ಬಂದು ತನ್ನ ತಂದೆಯಾದ ಇಸಾಕನ ದೇವರಿಗೆ ಯಜ್ಞಗಳನ್ನು ಮಾಡಿದನು.


ನನ್ನ ಪಿತೃಗಳ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ವ್ಯಕ್ತಗೊಳಿಸಿದಿ.


ಬಿಡುವಾಗ ಬರೀಗೈಯಲ್ಲಿ ಕಳುಹಿಸಿಬಿಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು