Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 31:55 - ಕನ್ನಡ ಸತ್ಯವೇದವು J.V. (BSI)

55 ಬೆಳಿಗ್ಗೆ ಲಾಬಾನನು ಎದ್ದು ತನ್ನ ಹೆಣ್ಣುಮಕ್ಕಳಿಗೂ ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಊರಿಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಮುಂಜಾನೆ ಲಾಬಾನನು ಎದ್ದು ತನ್ನ ಹೆಣ್ಣು ಮಕ್ಕಳಿಗೂ, ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಬೆಳಿಗ್ಗೆ ಲಾಬಾನನು ಎದ್ದು, ತನ್ನ ಪುತ್ರಿಯರಿಗೂ ಮೊಮ್ಮಕ್ಕಳಿಗೂ ಮುದ್ದಿಟ್ಟು, ಆಶೀರ್ವದಿಸಿ, ತನ್ನ ಊರಿಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಮರುದಿನ ಮುಂಜಾನೆ ಲಾಬಾನನು ತನ್ನ ಮೊಮ್ಮಕ್ಕಳಿಗೂ ಹೆಣ್ಣುಮಕ್ಕಳಿಗೂ ಮುದ್ದಿಟ್ಟು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ಮುಂಜಾನೆ ಲಾಬಾನನು ಎದ್ದು ತನ್ನ ಪುತ್ರ ಪುತ್ರಿಯರಿಗೆ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 31:55
18 ತಿಳಿವುಗಳ ಹೋಲಿಕೆ  

ನನ್ನ ಹೆಣ್ಣುಮಕ್ಕಳಿಗೂ ಮೊಮ್ಮಕ್ಕಳಿಗೂ ಮುದ್ದಿಡುವದಕ್ಕಾದರೂ ಆಗದಂತೆ ಮಾಡಿದಿ. ನೀನು ಮಾಡಿದ್ದು ಹುಚ್ಚು ಕೆಲಸವೇ ಸರಿ.


ರಾಹೇಲಳು ಯೋಸೇಫನನ್ನು ಹೆತ್ತ ನಂತರ ಯಾಕೋಬನು ಲಾಬಾನನಿಗೆ - ನನಗೆ ಅಪ್ಪಣೆ ಕೊಡಬೇಕು; ನಾನು ನನ್ನ ದೇಶದಲ್ಲಿರುವ ಸ್ವಂತ ಊರಿಗೆ ಹೋಗಬೇಕು.


ಯೆಹೋವನು ಅಬ್ರಹಾಮನ ಸಂಗಡ ಮಾತಾಡುವದನ್ನು ಮುಗಿಸಿ ಹೊರಟುಹೋದನು; ಅಬ್ರಹಾಮನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ ಅವನ ಶತ್ರುಗಳನ್ನೂ ವಿುತ್ರರನ್ನಾಗಿ ಮಾಡುವನು.


ಮನುಷ್ಯರ ಕೋಪವೂ ನಿನ್ನ ಘನಕ್ಕೇ ಸಾಧಕವಾಗುವದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಆಗ ಅವರು ತಿರಿಗಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟುಹೋದಳು; ರೂತಳಾದರೋ ಅತ್ತೆಯನ್ನೇ ಅಂಟಿಕೊಂಡಳು.


ಆಗ ಯೆಹೋವನು ತನ್ನ ಜನರಿಗೋಸ್ಕರ ನ್ಯಾಯತೀರಿಸುವನು. ಪರತಂತ್ರರಾಗಲಿ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಯರಾಗಿ ನಿಶ್ಶೇಷರಾದದ್ದನ್ನು ಆತನು ತಿಳಿದಾಗ ತನ್ನ ಸೇವಕರಾದ ಅವರ ವಿಷಯದಲ್ಲಿ ಪಶ್ಚಾತ್ತಾಪಪಡುವನು.


(ಆದರೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ ಅವನಿಂದ ಶಾಪವನ್ನು ನುಡಿಸದೆ ಆಶೀರ್ವಾದವನ್ನೇ ಹೇಳಿಸಿದನು.)


ತರುವಾಯ ಬಿಳಾಮನು ಸ್ವದೇಶಕ್ಕೆ ತಿರಿಗಿ ಹೋದನು; ಬಾಲಾಕನೂ ಹೊರಟು ಹೋದನು.


ಈ ಮಾತುಗಳನ್ನು ಕೇಳಿ ಬಾಲಾಕನು ಅವನಿಗೆ - ಇದೇನು ನೀನು ನನಗೆ ಮಾಡಿದ್ದು; ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರಿಸಿದೆನು; ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿಬಿಟ್ಟಿ ಎಂದು ಹೇಳಿದನು.


ನಾನು ಅವರನ್ನು ಏನೆಂದು ಶಪಿಸಲಿ; ದೇವರು ಶಪಿಸಲಿಲ್ಲವಲ್ಲಾ. ಏನೆಂದು ಆಕ್ರೋಶಿಸಲಿ; ಯೆಹೋವನು ಆಕ್ರೋಶಿಸಲಿಲ್ಲವಲ್ಲಾ.


ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು - ನೀನು ಬಾಲಾಕನ ಬಳಿಗೆ ತಿರಿಗಿಹೋಗಿ ಹೀಗೆ ಹೀಗೆ ಹೇಳಬೇಕು ಎಂದು ಆಜ್ಞಾಪಿಸಿದನು.


ಆದರೆ ಏಸಾವನು ಅವನನ್ನು ಎದುರುಗೊಳ್ಳುವದಕ್ಕೆ ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವರಿಬ್ಬರೂ ಕಣ್ಣೀರು ಸುರಿಸಿದರು.


ಅದಕ್ಕೆ ಲಾಬಾನನು ಯಾಕೋಬನಿಗೆ - ಈ ಹೆಂಗಸರು ನನ್ನ ಕುಮಾರ್ತೆಗಳಲ್ಲವೇ, ಈ ಮಕ್ಕಳು ನನ್ನ ಮೊಮ್ಮಕ್ಕಳಲ್ಲವೇ, ಈ ಹಿಂಡುಗಳೂ ನನ್ನವೇ, ನಿನ್ನ ಕಣ್ಣಮುಂದೆ ಇರುವದೆಲ್ಲವೂ ನನ್ನದಲ್ಲವೇ. ಆದರೆ ಈ ನನ್ನ ಕುಮಾರ್ತೆಗಳಿಗೋಸ್ಕರವೂ ಇವರು ಹೆತ್ತ ಮಕ್ಕಳಿಗೋಸ್ಕರವೂ ಈಗ ನಾನೇನು ಮಾಡುವೆನು?


ಆಗ ಇಸಾಕನು ಯಾಕೋಬನನ್ನು ಕರೆದು ಅವನಿಗೆ - ನೀನು ಕಾನಾನ್ಯರ ಹೆಣ್ಣನ್ನು ಮದುವೆಮಾಡಿಕೊಳ್ಳಬೇಡ;


ಮತ್ತು ರೆಬೆಕ್ಕಳಿಗೆ - ತಂಗಿಯೇ, ನಿನ್ನಿಂದ ಲಕ್ಷಾಂತರ ಸಂತಾನವಾಗಲಿ; ನಿನ್ನ ಸಂತಾನದವರು ತಮ್ಮ ವೈರಿಗಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲಿ ಎಂದು ಹೇಳಿ ಹರಸಿದರು.


ಎಲ್ಲಾ ಜನರೂ ಹೊಳೆದಾಟಿದರು. ಅರಸನು ಹೊಳೆದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು